ಕುಂದಾಪುರ:ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಿಗೋಳಗಾದ ಮೀನುಗಾರರಿಗೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಮೂಲಕ ರಾಜ್ಯ ಸರಕಾರ 1.75.ಕೋಟಿ.ರೂ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿ ಮೀನುಗಾರರಿಗೆ 28.ಲಕ್ಷ.ರೂ ಪರಿಹಾರವನ್ನು ಮಂಜೂರು ಮಾಡಿದೆ.
ಬಂದರು ಮತ್ತು ಮೀನುಗಾರಿಕೆ ಸಚಿವ ಮಾಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಸಮಿತಿ ಸಭೆಯಲ್ಲಿ ಅಗ್ನಿ ದುರಂತದದಿಂದ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರಿಗೆ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಗಿದೆ.ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ,ಚೇತನ್ ಬೆಂಗ್ರೆ,ರಾಜು ತಾಂಡೇಲಾ,ಭಟ್ಕಳ ವೆಂಕಟರಮಣ ಭಟ್,ಸಮಿತಿ ಸದಸ್ಯರಾದ ಎಸ್.ಮದನ್ ಕುಮಾರ್ ಉಪ್ಪುಂದಮೀನುಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಗಂಗೊಳ್ಳಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೀನುಗಾರರಿಗೆ ಗರಿಷ್ಠ ಪರಿಹಾರ ನೀಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದರು.
ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಮೂಲಕ ರಾಜ್ಯ ಸರಕಾರ ಪರಿಹಾರವನ್ನು ಘೋಷಣೆ ಮಾಡಿರುವುದು ಸಂತಸ ತಂದಿದೆ.ಗಂಗೊಳ್ಳಿ ಅಗ್ನಿ ದುರಂತದಲ್ಲಿ ಮೀನುಗಾರರಿಗೆ 10.ಕೋಟಿಗೂ ಅಧಿಕ ನಷ್ಟ ವಾಗಿರುವುದರಿಂದ ಮುಖ್ಯ ಮಂತ್ರಿಗಳ ಪರಿಹಾರ ನಿಧಿಅಡಿಯಲ್ಲಿ ಇನ್ನೂ ಹೆಚ್ಚಿನ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…