ಕುಂದಾಪುರ:ಮರವಂತೆಯಲ್ಲಿ ಕೈಗೊಳ್ಳಲಾಗುತ್ತಿರುವ ಪ್ರವಾಸೋಧ್ಯಮ ಚಟುವಟಿಕೆಗೆ ಸಂಬಂಧಪಟ್ಟಂತಹ ಯೋಜನೆಗಳು ಸಿ ಆರ್ ಝೆಡ್ ಕಾರಣದಿಂದ ಸ್ಥಗಿತಗೊಂಡಿದೆ.ಕೇರಳ,ಗೋವಾ ರಾಜ್ಯಗಳಂತೆ ಕರ್ನಾಟಕದಲ್ಲೂ ಸಿಆರ್ಝೆಡ್ ನಿಯಾಮವಳಿಗಳನ್ನು ಸರಳೀಕರಣಗೊಳಿಸುವಂತೆ ಹಾಗೂ ಸಿ ಆರ್ ಝೆಡ್ ಕಚೇರಿಯನ್ನು ಕರಾವಳಿ ಭಾಗಕ್ಕೆ ಸ್ಥಳಾಂತರಿಸುವಂತೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಸದನದಲ್ಲಿ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಬಳಸಿಕೊಂಡು ಆರ್ಥಿಕ ಸಂಪನ್ಮೂಲವನ್ನು ಗಳಿಸಲು ವಿಫುಲವಾದ ಅವಕಾಶಗಳಿವೆ.ಬಹುತೇಕ ರಾಜ್ಯಗಳು ಈ ಅವಕಾಶವನ್ನು ಸಕಾರಾತ್ಮಕವಾಗಿ ಬಳಸಿಕೊಂಡಿವೆ.ಆದರೆ ಕರ್ನಾಟಕ ರಾಜ್ಯ ಈ ವಿಚಾರದಲ್ಲಿ ಉದಾಸೀನತೆ ತೋರುತ್ತಿದೆ ಎಂದು ಪ್ರಾಸೋದ್ಯಮ ಇಲಾಖೆಯ ಕಾರ್ಯವೈಖರಿ ಬಗ್ಗೆ ಶಾಸಕ ಗಂಟಿಹೊಳೆ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದರು.ಬೀಚ್ ಪ್ರವಾಸೋದ್ಯಮ ಕ್ಷೇತ್ರವು ಉದ್ಯೋಗವಕಾಶಗಳ ಆಗರವಾಗಿದದೆ.ಕೆಲವೊಂದು ಕಾನೂನಿನ ಅಡಚಣೆಗಳು ಬೀಚ್ ಪ್ರವಾಸೋದ್ಯಮಕ್ಕೆ ಅಡ್ಡಿ ಮಾಡುತ್ತಿವೆ.ಕಡಲ ಕಿನಾರೆ ಪ್ರವಾಸೋದ್ಯಮಕ್ಕೆ ಇರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ಷೇಪಿಸಿದ್ದರು.
ಮರವಂತೆ ಅಭಿವೃದ್ಧಿಗೆ ತೊಡಕಾಗಿರುವ ಅಂಶಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮವಹಿಸುವುದಾಗಿ ಪ್ರವಾಸೋದ್ಯಮ ಸಚಿವರ ಪರವಾಗಿ ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಶಾಸಕ ಗಂಟಿಹೊಳೆ ಅವರು ಕೇಳಿದ ಪ್ರಶ್ನೆಗೆ ಉತ್ತರವನ್ನು ನೀಡಿದ್ದಾರೆ.
ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…
ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…
ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…