ಕುಂದಾಪುರ:ಮರವಂತೆಯಲ್ಲಿ ಕೈಗೊಳ್ಳಲಾಗುತ್ತಿರುವ ಪ್ರವಾಸೋಧ್ಯಮ ಚಟುವಟಿಕೆಗೆ ಸಂಬಂಧಪಟ್ಟಂತಹ ಯೋಜನೆಗಳು ಸಿ ಆರ್ ಝೆಡ್ ಕಾರಣದಿಂದ ಸ್ಥಗಿತಗೊಂಡಿದೆ.ಕೇರಳ,ಗೋವಾ ರಾಜ್ಯಗಳಂತೆ ಕರ್ನಾಟಕದಲ್ಲೂ ಸಿಆರ್ಝೆಡ್ ನಿಯಾಮವಳಿಗಳನ್ನು ಸರಳೀಕರಣಗೊಳಿಸುವಂತೆ ಹಾಗೂ ಸಿ ಆರ್ ಝೆಡ್ ಕಚೇರಿಯನ್ನು ಕರಾವಳಿ ಭಾಗಕ್ಕೆ ಸ್ಥಳಾಂತರಿಸುವಂತೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಸದನದಲ್ಲಿ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಬಳಸಿಕೊಂಡು ಆರ್ಥಿಕ ಸಂಪನ್ಮೂಲವನ್ನು ಗಳಿಸಲು ವಿಫುಲವಾದ ಅವಕಾಶಗಳಿವೆ.ಬಹುತೇಕ ರಾಜ್ಯಗಳು ಈ ಅವಕಾಶವನ್ನು ಸಕಾರಾತ್ಮಕವಾಗಿ ಬಳಸಿಕೊಂಡಿವೆ.ಆದರೆ ಕರ್ನಾಟಕ ರಾಜ್ಯ ಈ ವಿಚಾರದಲ್ಲಿ ಉದಾಸೀನತೆ ತೋರುತ್ತಿದೆ ಎಂದು ಪ್ರಾಸೋದ್ಯಮ ಇಲಾಖೆಯ ಕಾರ್ಯವೈಖರಿ ಬಗ್ಗೆ ಶಾಸಕ ಗಂಟಿಹೊಳೆ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದರು.ಬೀಚ್ ಪ್ರವಾಸೋದ್ಯಮ ಕ್ಷೇತ್ರವು ಉದ್ಯೋಗವಕಾಶಗಳ ಆಗರವಾಗಿದದೆ.ಕೆಲವೊಂದು ಕಾನೂನಿನ ಅಡಚಣೆಗಳು ಬೀಚ್ ಪ್ರವಾಸೋದ್ಯಮಕ್ಕೆ ಅಡ್ಡಿ ಮಾಡುತ್ತಿವೆ.ಕಡಲ ಕಿನಾರೆ ಪ್ರವಾಸೋದ್ಯಮಕ್ಕೆ ಇರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ಷೇಪಿಸಿದ್ದರು.
ಮರವಂತೆ ಅಭಿವೃದ್ಧಿಗೆ ತೊಡಕಾಗಿರುವ ಅಂಶಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮವಹಿಸುವುದಾಗಿ ಪ್ರವಾಸೋದ್ಯಮ ಸಚಿವರ ಪರವಾಗಿ ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಶಾಸಕ ಗಂಟಿಹೊಳೆ ಅವರು ಕೇಳಿದ ಪ್ರಶ್ನೆಗೆ ಉತ್ತರವನ್ನು ನೀಡಿದ್ದಾರೆ.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…