ಕುಂದಾಪುರ

ಸಿ ಆರ್ ಝೆಡ್ ಸರಳೀಕರಣ,ಕಚೇರಿ ಸ್ಥಳಾಂತರಕ್ಕೆ ಗಂಟಿಹೊಳೆ ಆಗ್ರಹ

Share

ಕುಂದಾಪುರ:ಮರವಂತೆಯಲ್ಲಿ ಕೈಗೊಳ್ಳಲಾಗುತ್ತಿರುವ ಪ್ರವಾಸೋಧ್ಯಮ ಚಟುವಟಿಕೆಗೆ ಸಂಬಂಧಪಟ್ಟಂತಹ ಯೋಜನೆಗಳು ಸಿ ಆರ್ ಝೆಡ್ ಕಾರಣದಿಂದ ಸ್ಥಗಿತಗೊಂಡಿದೆ.ಕೇರಳ,ಗೋವಾ ರಾಜ್ಯಗಳಂತೆ ಕರ್ನಾಟಕದಲ್ಲೂ ಸಿಆರ್‍ಝೆಡ್ ನಿಯಾಮವಳಿಗಳನ್ನು ಸರಳೀಕರಣಗೊಳಿಸುವಂತೆ ಹಾಗೂ ಸಿ ಆರ್ ಝೆಡ್ ಕಚೇರಿಯನ್ನು ಕರಾವಳಿ ಭಾಗಕ್ಕೆ ಸ್ಥಳಾಂತರಿಸುವಂತೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಸದನದಲ್ಲಿ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಬಳಸಿಕೊಂಡು ಆರ್ಥಿಕ ಸಂಪನ್ಮೂಲವನ್ನು ಗಳಿಸಲು ವಿಫುಲವಾದ ಅವಕಾಶಗಳಿವೆ.ಬಹುತೇಕ ರಾಜ್ಯಗಳು ಈ ಅವಕಾಶವನ್ನು ಸಕಾರಾತ್ಮಕವಾಗಿ ಬಳಸಿಕೊಂಡಿವೆ.ಆದರೆ ಕರ್ನಾಟಕ ರಾಜ್ಯ ಈ ವಿಚಾರದಲ್ಲಿ ಉದಾಸೀನತೆ ತೋರುತ್ತಿದೆ ಎಂದು ಪ್ರಾಸೋದ್ಯಮ ಇಲಾಖೆಯ ಕಾರ್ಯವೈಖರಿ ಬಗ್ಗೆ ಶಾಸಕ ಗಂಟಿಹೊಳೆ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದರು.ಬೀಚ್ ಪ್ರವಾಸೋದ್ಯಮ ಕ್ಷೇತ್ರವು ಉದ್ಯೋಗವಕಾಶಗಳ ಆಗರವಾಗಿದದೆ.ಕೆಲವೊಂದು ಕಾನೂನಿನ ಅಡಚಣೆಗಳು ಬೀಚ್ ಪ್ರವಾಸೋದ್ಯಮಕ್ಕೆ ಅಡ್ಡಿ ಮಾಡುತ್ತಿವೆ.ಕಡಲ ಕಿನಾರೆ ಪ್ರವಾಸೋದ್ಯಮಕ್ಕೆ ಇರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ಷೇಪಿಸಿದ್ದರು.

ಮರವಂತೆ ಅಭಿವೃದ್ಧಿಗೆ ತೊಡಕಾಗಿರುವ ಅಂಶಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮವಹಿಸುವುದಾಗಿ ಪ್ರವಾಸೋದ್ಯಮ ಸಚಿವರ ಪರವಾಗಿ ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಶಾಸಕ ಗಂಟಿಹೊಳೆ ಅವರು ಕೇಳಿದ ಪ್ರಶ್ನೆಗೆ ಉತ್ತರವನ್ನು ನೀಡಿದ್ದಾರೆ.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago