ಕುಂದಾಪುರ

ಮತ್ಸ್ಯಗಂಧ ಚಲನಚಿತ್ರ ಅದ್ದೂರಿಯಾಗಿ ಬಿಡುಗಡೆ,ಅಭಿಮಾನಿಗಳಿಗೆ ಹರ್ಷ

Share

ಕುಂದಾಪುರ:ಬಹಳಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿರುವ ಮತ್ಸ್ಯಗಂಧ ಚಲನಚಿತ್ರ ಶುಕ್ರವಾರ ರಾಜ್ಯದಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.ಕರಾವಳಿ ಭಾಗದ ಜನರ ಜೀವನ ಪದ್ಧತಿ ಹಾಗೂ ಮೀನುಗಾರರ ಬದುಕಿನ ಬಗ್ಗೆ ಕಥಾ ಹಂದರವನ್ನು ಹೊಂದಿರುವ ಮತ್ಸ್ಯಗಂಧ ಚಲನಚಿತ್ರ ಜನರ ಮನಗೆದ್ದಿದ್ದು ಸಿನಿಮಾ ಥಿಯೇಟರ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿದೆ.

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟನೆ ಮಾಡುವ ಮೂಲಕ ಈಗಾಗಲೇ ಕನ್ನಡಿಗರ ಮನ ಗೆದ್ದಿರುವ ಮತ್ಸ್ಯಗಂಧ ಚಲನಚಿತ್ರ ನಟ ಬೈಂದೂರು ತಾಲೂಕಿನ ನಾಗರಾಜ ಪೂಜಾರಿ ಅವರ ನಟನೆಗೆ ಸಿನಿ ಪ್ರೇಕ್ಷಕರು ಫಿದಾ ಆಗಿದ್ದಾರೆ.ಟೀಸರ್ ಹಾಗೂ ಮೇಕಿಂಗ್ ವಿಚಾರದಲ್ಲಿ ಸದ್ದು ಮಾಡುತ್ತಿರುವ ಮತ್ಸ್ಯಗಂಧ ಚಲನಚಿತ್ರ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುವುದು ಗ್ಯಾರಂಟಿ.

ಮತ್ಸ್ಯಗಂಧ ಚಲನಚಿತ್ರ ನಟ ನಾಗರಾಜ ಪೂಜಾರಿ ಅವರು ಬೈಂದೂರು ಶಂಕರ ಟಾಕೀಸ್ ನಲ್ಲಿ ಚಲನಚಿತ್ರವನ್ನು ಬಿಡುಗಡೆಗೋಳಿಸಿ ಮಾತನಾಡಿ, ಮತ್ಸ್ಯಗಂಧ ಎಂದರೆ ಮೀನಿಗೆ ಸಂಬಂಧಿಸಿದ ವಿಚಾರವಾಗಿದೆ ಈ ಚಿತ್ರ ಸಂಪೂರ್ಣವಾಗಿ ಮೀನುಗಾರರ ಬದುಕು ಮತ್ತು ಬಡವರ್ಗದ ಜನರನ್ನು ಪ್ರಭಾವಿ ವ್ಯಕ್ತಿಗಳು ಯಾವ ರೀತಿ ಬಳಸಿಕೊಳ್ಳುತ್ತಾರೇ ಎನ್ನುವ ವಿಚಾರದ ಬಗ್ಗೆಯೂ ಬೆಳಕನ್ನು ಚೆಲ್ಲಿದೆ ಎಂದು ಹೇಳಿದರು.ಸಿನಿಮಾವನ್ನು ನೊಡುವುದರ ಮುಖೇನ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.

ಮತ್ಸ್ಯಗಂಧ ಚಲನಚಿತ್ರವನ್ನು ನೋಡಿದ ಸಿನಿ ಪ್ರೇಕ್ಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಮತ್ಸ್ಯಗಂಧ ಚಲನಚಿತ್ರ ಶತ ದಿನ ಒಡಲಿ ಎಂದು ಶುಭಹಾರೈಸಿದರು.ಚಿತ್ರದಲ್ಲಿ ಪೃಥ್ವಿ ಅಂಬಾರ್ ಜೊತೆ ಭಜರಂಗಿ ಲೋಕಿ, ನಾಗರಾಜ್ ಬೈಂದೂರ್, ಪ್ರಶಾಂತ್ ಸಿದ್ದಿ, ಶರತ್ ಲೋಹಿತಾಶ್ವ, ಮೈಮ್ ರಾಮದಾಸ್ ಸೇರಿದಂತೆ ಪ್ರತಿಭಾನ್ವಿತ ನಟರು ನಟಿಸಿದ್ದಾರೆ.ಕನ್ನಡ ಪಿಚ್ಚರ್ ಅರ್ಪಿಸುವ, ಸಹ್ಯಾದ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ನಿರ್ಮಾಣ ಆಗಿರುವ ಈ ಚಿತ್ರ ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ ಬಿ.ಎಸ್ ವಿಶ್ವನಾಥ್ ನಿರ್ಮಾಣದ ಈ ಚಿತ್ರಕ್ಕೆ ದೇವರಾಜ್ ಪೂಜಾರಿ ಆ್ಯಕ್ಷನ್​​ ಕಟ್​​ ಹೇಳಿದ್ದು, ಪ್ರಶಾಂತ್ ಸಿದ್ದಿ ಸಂಗೀತ ಸಂಯೋಜಿಸಿದ್ದಾರೆ. ಪ್ರವೀಣ್ ಛಾಯಾಗ್ರಹಣ ನೀಡಿದ್ದಾರೆ. ಟೀಸರ್ ಹಾಗೂ ಮೇಕಿಂಗ್ ವಿಚಾರದಲ್ಲಿ ಸದ್ದು ಮಾಡುತ್ತಿರುವ ‘ಮತ್ಸ್ಯಗಂಧ’ ರಾಜ್ಯಾದ್ಯಂತ ಚಿತ್ರಮಂದಿರ ಪ್ರವೇಶಿಸಿದ್ದು.ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿದೆ.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago