ಕುಂದಾಪುರ

ಮತ್ಸ್ಯಗಂಧ ಚಲನಚಿತ್ರ ಅದ್ದೂರಿಯಾಗಿ ಬಿಡುಗಡೆ,ಅಭಿಮಾನಿಗಳಿಗೆ ಹರ್ಷ

Share

ಕುಂದಾಪುರ:ಬಹಳಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿರುವ ಮತ್ಸ್ಯಗಂಧ ಚಲನಚಿತ್ರ ಶುಕ್ರವಾರ ರಾಜ್ಯದಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.ಕರಾವಳಿ ಭಾಗದ ಜನರ ಜೀವನ ಪದ್ಧತಿ ಹಾಗೂ ಮೀನುಗಾರರ ಬದುಕಿನ ಬಗ್ಗೆ ಕಥಾ ಹಂದರವನ್ನು ಹೊಂದಿರುವ ಮತ್ಸ್ಯಗಂಧ ಚಲನಚಿತ್ರ ಜನರ ಮನಗೆದ್ದಿದ್ದು ಸಿನಿಮಾ ಥಿಯೇಟರ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿದೆ.

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟನೆ ಮಾಡುವ ಮೂಲಕ ಈಗಾಗಲೇ ಕನ್ನಡಿಗರ ಮನ ಗೆದ್ದಿರುವ ಮತ್ಸ್ಯಗಂಧ ಚಲನಚಿತ್ರ ನಟ ಬೈಂದೂರು ತಾಲೂಕಿನ ನಾಗರಾಜ ಪೂಜಾರಿ ಅವರ ನಟನೆಗೆ ಸಿನಿ ಪ್ರೇಕ್ಷಕರು ಫಿದಾ ಆಗಿದ್ದಾರೆ.ಟೀಸರ್ ಹಾಗೂ ಮೇಕಿಂಗ್ ವಿಚಾರದಲ್ಲಿ ಸದ್ದು ಮಾಡುತ್ತಿರುವ ಮತ್ಸ್ಯಗಂಧ ಚಲನಚಿತ್ರ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುವುದು ಗ್ಯಾರಂಟಿ.

ಮತ್ಸ್ಯಗಂಧ ಚಲನಚಿತ್ರ ನಟ ನಾಗರಾಜ ಪೂಜಾರಿ ಅವರು ಬೈಂದೂರು ಶಂಕರ ಟಾಕೀಸ್ ನಲ್ಲಿ ಚಲನಚಿತ್ರವನ್ನು ಬಿಡುಗಡೆಗೋಳಿಸಿ ಮಾತನಾಡಿ, ಮತ್ಸ್ಯಗಂಧ ಎಂದರೆ ಮೀನಿಗೆ ಸಂಬಂಧಿಸಿದ ವಿಚಾರವಾಗಿದೆ ಈ ಚಿತ್ರ ಸಂಪೂರ್ಣವಾಗಿ ಮೀನುಗಾರರ ಬದುಕು ಮತ್ತು ಬಡವರ್ಗದ ಜನರನ್ನು ಪ್ರಭಾವಿ ವ್ಯಕ್ತಿಗಳು ಯಾವ ರೀತಿ ಬಳಸಿಕೊಳ್ಳುತ್ತಾರೇ ಎನ್ನುವ ವಿಚಾರದ ಬಗ್ಗೆಯೂ ಬೆಳಕನ್ನು ಚೆಲ್ಲಿದೆ ಎಂದು ಹೇಳಿದರು.ಸಿನಿಮಾವನ್ನು ನೊಡುವುದರ ಮುಖೇನ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.

ಮತ್ಸ್ಯಗಂಧ ಚಲನಚಿತ್ರವನ್ನು ನೋಡಿದ ಸಿನಿ ಪ್ರೇಕ್ಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಮತ್ಸ್ಯಗಂಧ ಚಲನಚಿತ್ರ ಶತ ದಿನ ಒಡಲಿ ಎಂದು ಶುಭಹಾರೈಸಿದರು.ಚಿತ್ರದಲ್ಲಿ ಪೃಥ್ವಿ ಅಂಬಾರ್ ಜೊತೆ ಭಜರಂಗಿ ಲೋಕಿ, ನಾಗರಾಜ್ ಬೈಂದೂರ್, ಪ್ರಶಾಂತ್ ಸಿದ್ದಿ, ಶರತ್ ಲೋಹಿತಾಶ್ವ, ಮೈಮ್ ರಾಮದಾಸ್ ಸೇರಿದಂತೆ ಪ್ರತಿಭಾನ್ವಿತ ನಟರು ನಟಿಸಿದ್ದಾರೆ.ಕನ್ನಡ ಪಿಚ್ಚರ್ ಅರ್ಪಿಸುವ, ಸಹ್ಯಾದ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ನಿರ್ಮಾಣ ಆಗಿರುವ ಈ ಚಿತ್ರ ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ ಬಿ.ಎಸ್ ವಿಶ್ವನಾಥ್ ನಿರ್ಮಾಣದ ಈ ಚಿತ್ರಕ್ಕೆ ದೇವರಾಜ್ ಪೂಜಾರಿ ಆ್ಯಕ್ಷನ್​​ ಕಟ್​​ ಹೇಳಿದ್ದು, ಪ್ರಶಾಂತ್ ಸಿದ್ದಿ ಸಂಗೀತ ಸಂಯೋಜಿಸಿದ್ದಾರೆ. ಪ್ರವೀಣ್ ಛಾಯಾಗ್ರಹಣ ನೀಡಿದ್ದಾರೆ. ಟೀಸರ್ ಹಾಗೂ ಮೇಕಿಂಗ್ ವಿಚಾರದಲ್ಲಿ ಸದ್ದು ಮಾಡುತ್ತಿರುವ ‘ಮತ್ಸ್ಯಗಂಧ’ ರಾಜ್ಯಾದ್ಯಂತ ಚಿತ್ರಮಂದಿರ ಪ್ರವೇಶಿಸಿದ್ದು.ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago