ಕುಂದಾಪುರ

ಶ್ರೀವಿನಾಯಕ ಯುವಕ ಮಂಡಲ ನೆಂಪು ರಜತ ಮಹೋತ್ಸವ ಸಂಭ್ರಮ,ನೆಂಪು ಉತ್ಸವ

Share

ಕುಂದಾಪುರ:ಶ್ರೀವಿನಾಯಕ ಯುವಕ ಸಂಘ ನೆಂಪು ಪ್ರಸ್ತುತ್ತಿಯಲ್ಲಿ ರಜತ ಮಹೋತ್ಸವದ ಪ್ರಯುಕ್ತ ನೆಂಪು ಉತ್ಸವ ಕಾರ್ಯಕ್ರಮ ನೆಂಪು ಕರ್ನಾಟಕ ಪಬ್ಲಿಕ್ ಸ್ಕೂಲ್ ವಠಾರದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.
ಶ್ರೀವಿನಾಯಕ ಯುವಕ ಮಂಡಲ ನೆಂಪು ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನೆಂಪು ವಿನಾಯಕನಿಗೆ ಮಹಾ ರಂಗಪೂಜೆ,ತೆಂಕು-ಬಡಗು ಸೊರ್ಧಾತ್ಮಕ ಗಾನ ವೈಭವ,ನೆಂಪು ಯಕ್ಷ ಕಂಪು ಕಾರ್ಯಕ್ರಮ,ಸಹಾಯಹಸ್ತ,ರಜತ ಪುರಸ್ಕಾರ,ಸಾಧಕರಿಗೆ ಸನ್ಮಾನ,ಸಾಂಸ್ಕ್ರತಿಕ ಉತ್ಸವ,ರಜತ ಪುರಸ್ಕಾರ ಕಾರ್ಯಕ್ರಮ,ಹುಟ್ಟೂರು ಸನ್ಮಾನ,ಯಕ್ಷಗಾನ ನೃತ್ಯ,ಪ್ರಸಿದ್ದ ಸಿನಿ ಗಾಯಕರಿಂದ ಸಂಗೀತೋತ್ಸವ ಕಾರ್ಯಕ್ರಮ ಹಾಗೂ ಸ್ಥಳೀಯ ಪ್ರತಿಭೆಗಳಿಂದ ನೃತ್ಯೋತ್ಸವ,ಹೆಂಗ್ಸ್ರ್ ಪಂಚೇತಿ ಕಾರ್ಯಕ್ರಮ ಜರುಗಿತು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ನೆಂಪು ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಅಸಾಧ್ಯವಾದ ಕೆಲಸವನ್ನು ಸಾಧ್ಯ ಎನ್ನುವುದರ ಮೂಲಕ ತೋರಿಸಿ ಕೊಟ್ಟ ಶ್ರೀವಿನಾಯಕ ಯುವಕ ಮಂಡಲದ ಪದಾಧಿಕಾರಿಗಳೆ ಅತ್ಯುತ್ತಮವಾದ ಉದಾಹರಣೆ ಆಗಿದೆ.ಎಷ್ಟೋ ಸಂಘ ಸಂಸ್ಥೆಗಳು ಉದ್ಘಾಟನೆ ಪೂರ್ವದಲ್ಲೇ ಸ್ಥಗಿತಗೊಂಡಿರುವಂತಹ ಬಹಳಷ್ಟು ಉದಾಹರಣೆಗಳನ್ನು ನಾವು ನೋಡಬಹುದಾಗಿದೆ.ಇದಕ್ಕೆ ಅಪವಾದ ಎನ್ನುವುದಕ್ಕೆ ನೆಂಪು ಯುವಕ ಮಂಡಲ ಕಳೆದ 25 ವರ್ಷಗಳಿಂದ ನಿರಂತರವಾಗಿ ಸಮಾಜ ಸೇವೆ,ರಕ್ತದಾನ ಶಿಬಿರ,ವಿದ್ಯಾರ್ಥಿ ವೇತನ,ಪ್ರತಿಭಾ ಪುರಸ್ಕಾರ ನಿಡುವುದರ ಮುಖೇನ ಅನೇಕ ಸಮಾಜ ಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿರುವುದು ಶ್ಲಾಘನೀಯ ವಾದದ್ದು ಎಂದು ಹೇಳಿದರು.ಪ್ರಪಂಚದಲ್ಲೆ ಯುವ ಶಕ್ತಿಯನ್ನು ಹೊಂದಿರುವ ದೇಶ ನಮ್ಮದು ಆಗಿದೆ.ಯುವ ಜನತೆ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಮೋದಿ ಸರಕಾರ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮಾತನಾಡಿ,ಯಾವ ಒಂದು ಊರಿನಲ್ಲಿ ವಿದ್ಯೆಯನ್ನು ಪೂಜಿಸುತ್ತಾರೊ ಆ ಊರು ಯಾವತ್ತೂ ಹಿಂದೆ ಬೀಳಲು ಸಾಧ್ಯವಿಲ್ಲ,ಬೈಂದೂರು ಕ್ಷೇತ್ರದಲ್ಲಿ ಶಿಕ್ಷಣ ಕ್ರಾಂತಿ ಆಗಿರುವುದು ಬಹಳಷ್ಟು ಸಂತೋಷದ ವಿಚಾರವಾಗಿದೆ.ತಮ್ಮ ಊರಿನ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಊರಿನವರು ಮುಂದೆ ಬರುತ್ತಿರುವುದರಿಂದ ಬಾಗಿಲು ಮುಚ್ಚುವಂತಹ ಶಾಲೆಗಳು ಬೆಳಕನ್ನು ಕಾಣುತ್ತಿದೆ ಎಂದು ಹೇಳಿದರು.ನೆಂಪುವಿನ ಕಂಪನ್ನು ನೋಡಿದರೆ ನೆಂಪುವಿಗೆ ನೆಂಪು ಸಾಟಿ ಎಂದು ಬಣ್ಣಿಸಿದರು.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ,ತಮ್ಮ ಗ್ರಾಮದ ಅಭಿವೃದ್ಧಿ ಬಗ್ಗೆ ತಮ್ಮೂರಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಬಗ್ಗೆ ಒಗ್ಗಟ್ಟಿನ ಕೆಲಸವನ್ನು ತೋರಿಸುತ್ತಿರುವುದು ಎಲ್ಲರಿಗೂ ಮಾದರಿ ಆಗಿದೆ ಎಂದು ಬಣ್ಣಿಸಿದರು.ಒಂದು ಕ್ಷೇತ್ರ ಅಭಿವೃದ್ಧಿಗೊಳ್ಳಬೇಕಾದರೆ ಅದರ ಬಗ್ಗೆ ಸ್ಪಷ್ಟವಾದ ಕಲ್ಪನೆ ಇರಬೇಕು ಆ ನಿಟ್ಟಿನಲ್ಲಿ ಸಂಸದರು ಶಾಸಕರ ಕಾರ್ಯವೈಖರಿ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ರಜತ ಪುರಸ್ಕಾರ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿ,ನೆಂಪು ಗ್ರಾಮಸ್ಥರು ಮಾಡಿದಂತಹ ಸನ್ಮಾನ ನನಗೆ ಸಿಕ್ಕಿದ್ದ ರಾಜ್ಯೋತ್ಸವ ಪ್ರಶಸ್ತಿಗಿಂತಲೂ ದೊಡ್ಡದಾಗಿದೆ.ಹಿರಿಯರಿಗೆ ಇವೊಂದು ಪ್ರಶಸ್ತಿ ನೀಡಿ ಎಂದಿದ್ದರೂ ನನ್ನ ಮೇಲಿ ಅಭಿಮಾನದಿಂದ ನನಗೆ ನೀಡಿದ್ದಾರೆ ಇದು ನನ್ನ ಸೌಭಾಗ್ಯ ಎಂದರು.ನಾವು ಸಂಪಾದನೆ ಮಾಡಬೇಕು ಆದರೆ ಆ ಸಂಪತ್ತು ನಮ್ಮ ಮಕ್ಕಳಿಗೆ ಆಸ್ತಿಯಾಗಿರ ಬಾರದು.ಮಕ್ಕಳಿಗೆ ಶಿಕ್ಷಣ ಕೊಟ್ಟಾಗ ಮಾತ್ರ ಅವರು ತಮ್ಮ ಜೀವನವನ್ನು ಕಂಡುಕೊಳ್ಳಲು ಸಾಧ್ಯವಿದೆ.ಮಕ್ಕಳಿಗೆ ವಿದ್ಯೆ ಕೊಡಿಸಿ ಆದರೆ ಮಕ್ಕಳಿಗಾಗಿ ಸಂಪತ್ತನ್ನು ಕೂಡಿಡಬೇಡಿ ಎಂದು ಕಿವಿ ಮಾತು ಹೇಳಿದರು.
ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಂಜಿಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಮಾತನಾಡಿ ಶುಭಹಾರೈಸಿದರು.
ಸಮಾಜ ಸೇವಕ ಉದ್ಯಮಿಗಳಾದ ಸೀತಾರಾಮ ಶೆಟ್ಟಿ ನೆಂಪು,ದಾನಿಗಳಾದ ಶ್ರೀನಿವಾಸ್ ಮೆಂಡನ್ ಬಳ್ಳಿಹಿತ್ಲು,ಶಿವರಾಮ್ ಮಂಗಲಸನಕಟ್ಟೆ ಅವರಿಗೆ ಹೂಟ್ಟೂರ ಸನ್ಮಾನ ಮಾಡಲಾಯಿತು.ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ಶ್ರೀವಿನಾಯಕ ಯುವಕ ಸಂಘ ನೆಂಪು ಅಧ್ಯಕ್ಷ ಅರುಣ ಮೊಗವೀರ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ನಿರ್ದೇಶಕರು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಕರ್ನಾಟಕ ಸರಕಾರ ಬಿ.ಎನ್. ಶೆಟ್ಟಿ ಬಗ್ವಾಡಿ ಮೆತ್ತಿನಮನೆ,ಉದ್ಯಮಿ ಮೊಹಮ್ಮದ್ ಇರ್ಷಾದ್,ಕೃಷ್ಣ ಪೈಪ್ ಭಾಸ್ಕರ ನಾಯ್ಕ ನೇರಳಕಟ್ಟೆ,ಉದ್ಯಮಿ ದಯಾನಂದ ಶ್ರೀಯಾನ್ ಮಂಕಿ,ಪ್ರವೀಣ್ ಕುಮಾರ್ ಶೆಟ್ಟಿ ನಿಡಗೋಡು ಉಳ್ಳೂರು,ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಗೋಪಾಲ ನಾಯ್ಕ್ ಶಾರಾಳ,ನೆಂಪು ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ ನೆಂಪು,ಕಾಲೇಜಿನ ಪ್ರಿನ್ಸಿಪಾಲ್ ರಾಜೀವ ನಾಯ್ಕ್,ಶ್ರೀವಿನಾಯಕ ಯುವ ಸಂಘ ಸ್ಥಾಪಕಾಧ್ಯಕ್ಷ ಚಂದ್ರಶೇಖರ ಶೆಟ್ಟಿ ನೀರ್ಕೊಡ್ಲು,ಕೃಷ್ಣಪ್ರಸಾದ್ ಅಡ್ಯಂತಾಯ,ಲಕ್ಷ್ಮಣ್ ಉದ್ಯಮಿ,ರಾಜು ಮೆಂಡನ್ ಬಳಿಹಿತ್ಲು,ಮುಂಬೈ ಉದ್ಯಮಿ ಭಾಸ್ಕರ್ ಮೆಂಡನ್,ಶಾಂತರಾಮ್ ಶೆಟ್ಟಿ,ಕರ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಬಿಜ್ರಿ ರಾಜೀವ ಶೆಟ್ಟಿ,ದಿವಾಕರ ಆಚಾರ್ಯ,ಶ್ರೀವಿನಾಯಕ ಯುವಕ ಸಂಘ ನೆಂಪು ಗೌರವಾಧ್ಯಕ್ಷ ಜಗದೀಶ ಎಮ್ ನೆಂಪು ಉಪಸ್ಥಿತರಿದ್ದರು.ಶಶಿಧರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ,ಸ್ವಾಗತಿಸಿದರು.ದಾಮೋದರ ಶರ್ಮ ಮತ್ತು ಮಂಜುನಾಥ ನಿರೂಪಿಸಿದರು.

ವರದಿ: ಜಗದೀಶ ದೇವಾಡಿಗ ಮುಳ್ಳಿಕಟ್ಟೆ

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago