ಕುಂದಾಪುರ

ಬಂಟರಯಾನೆ ನಾಡವರ ಸಂಘ ಬೈಂದೂರು,ವಿದ್ಯಾರ್ಥಿ ವೇತನ ಪ್ರತಿಭಾ ಪುರಸ್ಕಾರ ವಿತರಣೆ

Share

ಕುಂದಾಪುರ:ಬಂಟರಯಾನೆ ನಾಡವರ ಸಂಘ ಬೈಂದೂರು,ಬೆಂಗಳೂರು ಬಂಟರ ಸಂಘ ಮತ್ತು ಉಪ ಸಂಘಗಳ ನೇತೃತ್ವದಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ,ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣದ ಬಿ.ಜೆ ಸಭಾಭವನ ಯಡ್ತರೆಯಲ್ಲಿ ಭಾನುವಾರ ನಡೆಯಿತು.

ಬೈಂದೂರು ಬಂಟರ ಯಾನೆ ನಾಡವರ ಸಂಘದ ಕಾರ್ಯದರ್ಶಿ ಕನಕ ಗ್ರೂಪ್ ಜಗದೀಶ್ ಶೆಟ್ಟಿ ಕುದ್ರುಕೋಡು ಅವರು ಮಾತನಾಡಿ,ಬೈಂದೂರು ಬಂಟರ ಸಂಘ ಹಾಗೂ ಬೆಂಗಳೂರು ಬಂಟರ ಸಂಘದ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ,ವಿದ್ಯಾರ್ಥಿವೇತನ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿದೆ.ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ಇವೊಂದು ಕಾರ್ಯಕ್ರಮ ನಡೆದಿದೆ ಎಂದು ಹೇಳಿದರು.ನೂರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಗಿದ್ದು,ಸಮಾಜದ ನಿವೃತ್ತ ಶಿಕ್ಷಕರನ್ನು ಗೌರವಿಸಲಾಗಿದೆ.ಕಾರ್ಯಕ್ರಮ್ಕಕೆ ಸಹಕಾರ ಕೊಟ್ಟ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.

ಕಟ್ಟಡ ರಚನಾ ಸಮಿತಿ ಬಂಟರ ಯಾನೆ ನಾಡವರ ಸಂಘ ಬೈಂದೂರು ಅಧ್ಯಕ್ಷ ನೈಲಾಡಿ ಶಿವರಾಮ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಒಂದು ಕೋಟಿಗೂ ಹೆಚ್ಚಿನ ಹಣವನ್ನು ವಿದ್ಯಾರ್ಥಿವೇತನಕ್ಕೆ ಮೀಸಲಿಡಬೇಕು.ಕಲೆ ಸಾಹಿತ್ಯವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದರು.ಸಂಘದ ಸದಸ್ಯತ್ವವನ್ನು ಆದಷ್ಟು ಹೆಚ್ಚಿಸುವುದರ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ.ಎಲ್ಲರ ಸಹಕಾರದಿಂದ ಸಂಘ ಉನ್ನತ ಸ್ಥಾನ್ಕಕೆ ಬೆಳೆಯುವಂತಾಗಲಿ ಎಂದು ಶುಭಹಾರೈಸಿದರು.

ಸಾಹಿತಿ ಡಾ.ಎಸ್ ಶ್ರೀನಿವಾಸ ಶೆಟ್ಟಿ ಅವರು ದಿಕ್ಸೂಚಿ ಭಾಷಣವನ್ನು ನೆರವೇರಿಸಿ ಮಾತನಾಡಿ,ಯಾವುದೇ ಒಂದು ಸಂಘಟನೆ ಯಶಸ್ವಿಯಾಗಿ ಬೆಳೆಯಬೇಕಾದರೆ ಎಲ್ಲರ ತೊಡಗುವಿಕೆ ಅಗತ್ಯವಾಗಿದೆ.ನಡೆಯಲ್ಲಿ ನುಡಿಯಲ್ಲಿ ನೋಟದಲ್ಲಿ ಆಲೋಚನೆಯಲ್ಲಿ ಹೊಸತನವನ್ನು ಅನುಭವಿಸಬೇಕಾಗಿದೆ.ಹೊಸ ತನಕ್ಕೆ ನಮ್ಮನ್ನು ನಾವು ತೊಡಗಿಸಿಕೊಂಡಾಗ ಮಾತ್ರ ಎಲ್ಲಾ ಕ್ಷೇತ್ರದಲ್ಲಿ ಬೆಳವಣಿಗೆಯನ್ನು ಕಾಣಲು ಸಾಧ್ಯವಿದೆ ಎಂದು ಅಭಿಪ್ರಾಯ ಪಟ್ಟರು.ದುಡಿಮೆ ಒಂದಾಂಶ ಹಣವನ್ನು ಸಂಘಟನೆಗೆ ಕೊಡುವುದರಿಂದ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳಲು ಸಹಕಾರಿ ಆಗುತ್ತದೆ ಎಂದು ಹೇಳಿದರು.ಸಂಘದ ಶಕ್ತಿಯಿಂದ ನಮ್ಮ ಜನಾಂಗದ ರಕ್ಷಣೆಯನ್ನು ಕೂಡ ಮಾಡಬಹುದು ಎಂದರು.

ಬಂಟರ ಸಂಘ ಬೆಂಗಳೂರು ಗೌರವ ಕಾರ್ಯದರ್ಶಿ ಬಿ.ಆನಂದರಾಮ ಶೆಟ್ಟಿ ಮಾತನಾಡಿ,ಬೆಂಗಳೂರು ಬಂಟರ ಸಂಘದ ವತಿಯಿಂದ ವಿದ್ಯಾರ್ಥಿವೇತನ,ಮಾಂಗಲ್ಯ ಯೋಜನೆ,ಅನಾರೋಗ್ಯದಿಂದ ಬಳಲುತ್ತಿದ್ದವರಿಗೆ ನೆರವು ವಿತರಣೆ,ಪ್ರತಿಭಾ ಪುರಸ್ಕಾರ ವಿತರಣೆ ಸಹಿತ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ.ಸಂಘದ ಚಟುವಟಿಕೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸುವುದರ ಮುಖೇನ ಸಂಘದ ಬೆಳವಣಿಗೆಗೆ ಕೊಡುಗೆಯನ್ನು ನೀಡಬೇಕೆಂದು ವಿನಂತಿಸಿಕೊಂಡರು.

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಪ್ರವೀಣ್ ಕುಮಾರ್ ಶೆಟ್ಟಿ ಆಲೂರು,ಬೇಲ್ಲೂರು ದಿ.ನಾಗಯ್ಯ ಶೆಟ್ಟಿ ಸ್ಮಾರಕ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾದ ಕು.ಸಿಂಚನ ಶೆಟ್ಟಿ ಅವರನ್ನು, ನಿವೃತ್ತ ಶಿಕ್ಷಕರನ್ನು,ನಿವೃತ್ತ ಸರಕಾರಿ ಅಧಿಕಾರಿಗಳನ್ನು,ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಬಂಟರ ಯಾನೆ ನಾಡವರ ಸಂಘ ಬೈಂದೂರು ವತಿಯಿಂದ ಸನ್ಮಾನಿಸಲಾಯಿತು.ನೂತನ ಸದಸ್ಯರು ಮತ್ತು ದಾನಿಗಳನ್ನು ಗೌರವಿಸಲಾಯಿತು.

ಬಂಟರಯಾನೆ ನಾಡವರ ಸಂಘ ಬೈಂದೂರು ಅಧ್ಯಕ್ಷ ಎಚ್. ವಸಂತ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.ಅರುಣ್ ಕುಮಾರ್ ಶೆಟ್ಟಿ,ಮಾಜಿ ಅಧ್ಯಕ್ಷ ಬಂಟರಯಾನೆ ನಾಡವರ ಸಂಘ ಬೈಂದೂರು ಕೆ.ವಿಠಲ್ ಶೆಟ್ಟಿ ಕಟ್ ಬೇಲ್ತೂರು,ಉದ್ಯಮಿ ಅರುಣ್ ಕುಮಾರ್ ಶೆಟ್ಟಿ,ಡಾ.ಎಮ್. ಲಕ್ಷ್ಮೀನಾರಾಯಣ ಶೆಟ್ಟಿ,ಎನ್.ಡಿ. ಶೆಟ್ಟಿ,ಸದಾನಂದ ಸುಲಾಯ ಚೇರ್‍ಪರ್ಸನ್ ವಿದ್ಯಾರ್ಥಿ ವೇತನ ಮತ್ತು ಪ್ರಶಸ್ತಿ ಸಮಿತಿ ಬಂಟರ ಸಂಘ ಬೆಂಗಳೂರು,ಸುಜನ್ ನೈಲಾಡಿ, ಬಂಟರ ಸಂಘ ಶಿರೂರು ಅಧ್ಯಕ್ಷ ಶ್ರೀನಿವಾಸ ಶೆಟ್ಟಿ,ಗೋಕುಲ ಶೆಟ್ಟಿ,ವಾದಿರಾಜ ಶೆಟ್ಟಿ,ಮಹಿಳಾ ಕಾರ್ಯದರ್ಶಿ ಸುಗುಣ ಶೆಟ್ಟಿ, ಚುಚ್ಚಿ ನಾರಾಯಣ ಶೆಟ್ಟಿ, ಗೌರವಾಧ್ಯಕ್ಷ ನಾಕಟ್ಟೆ ಜಗನ್ನಾಥ ಶೆಟ್ಟಿ,ಮಂಜುನಾಥ ಶೆಟ್ಟಿ, ವಿದ್ಯಾರ್ಥಿ ವೇತನ ಸಂಚಾಲಕ, ಮಂಜುನಾಥ ಶೆಟ್ಟಿ,ಮಂಜಯ್ಯ ಶೆಟ್ಟಿ ಉಪಸ್ಥಿತರಿದ್ದರು
ಜಗದೀಶ್ ಶೆಟ್ಟಿ ಕುದ್ರುಕೋಡು ಸ್ವಾಗತಿಸಿದರು.ಶಿಕ್ಷಕ ಕರುಣಾಕರ ಶೆಟ್ಟಿ ನಿರೂಪಿಸಿದರು.ಜಯರಾಮ ಶೆಟ್ಟಿ ಗಂಟಿಹೊಳೆ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

6 days ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago