ಕುಂದಾಪುರ

ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಸಂಘ ಉದ್ಘಾಟನೆ

Share

Advertisement
Advertisement
Advertisement

ಕುಂದಾಪುರ:ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಸಂತೆಕಟ್ಟೆ ಲಕ್ಷ್ಮೀ ನಗರದ ಗ್ರೀನ್ ಎಕ್ಸರ್ ಓಪನ್ ಗಾರ್ಡನ್‌ನಲ್ಲಿ ಮಂಗಳವಾರ ನಡೆಯಿತು.ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶ ವಿಠಲದಾಸ ಸ್ವಾಮೀಜಿ ದೀಪ ಪ್ರಜ್ವಲಿಸುವ ಮೂಲಕ ಜಿಲ್ಲಾ ಕ್ಯಾಟರಿಂಗ್‌ ಮಾಲೀಕರ ಸಂಘವನ್ನು ಉದ್ಘಾಟಿಸಿದರು.ಬಳಿಕ ಆಶೀರ್ವಚನ ನೀಡಿ,ಗುಣಮಟ್ಟ,ರುಚಿ,ಶುಚಿಯಾದ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುವ ಮಹತ್ತರವಾದ ಜವಾಬ್ದಾರಿ ಕ್ಯಾಟರಿಂಗ್ ಮಾಲೀಕರ ಮೇಲಿದೆ.ಈ ವೃತ್ತಿಯನ್ನು ಭಗವಂತನಿಗೆ ಕೊಡುವ ಯಜ್ಞದಂತೆ ಕಾಣಬೇಕೆಂದರು.ಅವಕಾಶ ವಂಚಿತರ ಹಸಿವು ತಣ್ಣಿಸುವುದು,ಕಣ್ಣೀರು ಒರೆಯುವ ಕೆಲಸ ನಿಜಕ್ಕೂ ಭಗವಂತನಿಗೆ ತಲುಪುತ್ತದೆ. ಈ ನಿಟ್ಟಿನಲ್ಲಿ ಕ್ಯಾಟರಿಂಗ್‌ ಸಂಘಟನೆಯ ಮೂಲಕ ಸಮಾಜದ ನೋವು ನಲಿವುಗಳಿಗೆ ಸ್ಪಂದಿಸಬೇಕೆಂದರು.

Advertisement

ಉಡುಪಿ ಡಯಾಸಿಸ್‌ನ ವಿಕಾರ್ ಜನರಲ್ ರೆ. ಫರ್ಡಿನೆಂಡ್ ಗೋನ್ಸ್ವಾಲಿಸ್‌ ಮಾತನಾಡಿ, ಆಧುನಿಕ ಯುಗದಲ್ಲಿ ಕ್ಯಾಟರಿಂಗ್‌ ಉದ್ಯಮಕ್ಕೆ ಹೆಚ್ಚಿನ ಬೇಡಿಕೆವಿದ್ದು,ಗುಣಮಟ್ಟ, ರುಚಿಯಲ್ಲಿ ಎಂದೂ ರಾಜೀಯಾಗದೇ ಉತ್ತಮ ಆಹಾರವನ್ನು‌ ನೀಡಬೇಕು. ಈ ಬಗ್ಗೆ ಉದ್ಯಮಿದಾರರು ಗಮನ ಹರಿಸಬೇಕು. ಆಹಾರ ಪದಾರ್ಥಗಳನ್ನು ಪ್ರಸ್ತುತ ಪಡಿಸುವುದು ಅಗತ್ಯವಾಗಿದೆ. ಆರೋಗ್ಯದ ಮೇಲೆ ಪರಿಣಾಮ ಬೀರುವ, ಕಲಬೆರಕೆಯ ಆಹಾರವನ್ನು ತಯಾರಿಸಬೇಡಿ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಸೋಸಿಯೇಷನ್ ಅಧ್ಯಕ್ಷ ನವೀನ್ ಅಮೀನ್ ಮಾತನಾಡಿ, ಕ್ಯಾಟರಿಂಗ್‌ ಮಾಲೀಕರ ಸಮಸ್ಯೆ ಪರಿಹಾರಕ್ಕೆ ಒಟ್ಟಾಗಿ ಸೇರಿದಾಗ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಕ್ಯಾಟರಿಂಗ್‌ ಸಮಸ್ಯೆಯನ್ನು ಭಿನ್ನಾಭಿಪ್ರಾಯ ದೂರೀಕರಿಸುವುದು, ದರಪಟ್ಟಿ ಮಾಡುವುದು, ಸಂಕಷ್ಟಕ್ಕೆ ಸ್ಪಂದಿಸುವುದು ನಮ್ಮ ಸಂಘಟನೆಯ ಮೊದಲ ಆದ್ಯತೆ‌. ಸರಕಾರದ ಕಾನೂನು ತೊಡಕುಗಳ ಬಗ್ಗೆ ಧ್ವನಿ ಎತ್ತುವುದಕ್ಕೆ ಸಾಧ್ಯವಿದೆ. ಸಂಘಟನೆಯಲ್ಲಿ ಇದ್ದಾಗ ನಾವೆಲ್ಲರೂ ಬೆಳೆಯುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ಉಡುಪಿ ಜಿಲ್ಲಾ ಕ್ಯಾಟರಿಂಗ್‌ ಮಾಲೀಕರ ಸಂಘದ ಪ್ರಮುಖರಾದ ಹಾಗೂ ಕ್ಯಾಟರಿಂಗ್ ಸಂಸ್ಥೆಯ ಮಾಲೀಕರಾದ ಭರತ್ ಶೆಟ್ಟಿ, ಇಗ್ನೇಷಿಯಸ್ ಡಿಸೋಜ, ರೋನಾಲ್ಡ್ ರೋಡ್ರಿಗಸ್, ರವೀಂದ್ರ ಶೆಟ್ಟಿ‌ ಶಿರ್ವ, ಅನಿಲ್ ಡಿಮೆಲ್ಲೊ, ಅನಿಲ್ ಡೆಸಾ, ದಯಾನಂದ್, ರಮೇಶ್, ಭಾಸ್ಕರ್, ಸುಶಾಂತ್, ಪ್ರಸಾದ್ ಅಂಚನ್ ಉಪಸ್ಥಿತರಿದ್ದರು.ಸಂಘದ ಉಪಾಧ್ಯಕ್ಷ ಜೂಲಿಯಸ್ ಲಿವೀಸ್‌ ದಾನಿಗಳ ಪಟ್ಟಿ ವಾಚಿಸಿದರು. ಕಾರ್ಯದರ್ಶಿ ಗಣೇಶ್ ಸಾಲ್ಯಾನ್ ವಂದಿಸಿದರು. ಗೌರವ ಸಲಹೆಗಾರ ಡೇನಿಷ್ ರೋಡ್ರಿಗಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ದೀಕ್ಷಿತ್ ಶೆಟ್ಟಿ ಸ್ವಾಗತಿಸಿ, ಆಲ್ವಿನ್ ಅಂದ್ರಾದೆ ನಿರೂಪಿಸಿದರು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago