ಕುಂದಾಪುರ

ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಸಂಘ ಉದ್ಘಾಟನೆ

Share

ಕುಂದಾಪುರ:ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಸಂತೆಕಟ್ಟೆ ಲಕ್ಷ್ಮೀ ನಗರದ ಗ್ರೀನ್ ಎಕ್ಸರ್ ಓಪನ್ ಗಾರ್ಡನ್‌ನಲ್ಲಿ ಮಂಗಳವಾರ ನಡೆಯಿತು.ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶ ವಿಠಲದಾಸ ಸ್ವಾಮೀಜಿ ದೀಪ ಪ್ರಜ್ವಲಿಸುವ ಮೂಲಕ ಜಿಲ್ಲಾ ಕ್ಯಾಟರಿಂಗ್‌ ಮಾಲೀಕರ ಸಂಘವನ್ನು ಉದ್ಘಾಟಿಸಿದರು.ಬಳಿಕ ಆಶೀರ್ವಚನ ನೀಡಿ,ಗುಣಮಟ್ಟ,ರುಚಿ,ಶುಚಿಯಾದ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುವ ಮಹತ್ತರವಾದ ಜವಾಬ್ದಾರಿ ಕ್ಯಾಟರಿಂಗ್ ಮಾಲೀಕರ ಮೇಲಿದೆ.ಈ ವೃತ್ತಿಯನ್ನು ಭಗವಂತನಿಗೆ ಕೊಡುವ ಯಜ್ಞದಂತೆ ಕಾಣಬೇಕೆಂದರು.ಅವಕಾಶ ವಂಚಿತರ ಹಸಿವು ತಣ್ಣಿಸುವುದು,ಕಣ್ಣೀರು ಒರೆಯುವ ಕೆಲಸ ನಿಜಕ್ಕೂ ಭಗವಂತನಿಗೆ ತಲುಪುತ್ತದೆ. ಈ ನಿಟ್ಟಿನಲ್ಲಿ ಕ್ಯಾಟರಿಂಗ್‌ ಸಂಘಟನೆಯ ಮೂಲಕ ಸಮಾಜದ ನೋವು ನಲಿವುಗಳಿಗೆ ಸ್ಪಂದಿಸಬೇಕೆಂದರು.

ಉಡುಪಿ ಡಯಾಸಿಸ್‌ನ ವಿಕಾರ್ ಜನರಲ್ ರೆ. ಫರ್ಡಿನೆಂಡ್ ಗೋನ್ಸ್ವಾಲಿಸ್‌ ಮಾತನಾಡಿ, ಆಧುನಿಕ ಯುಗದಲ್ಲಿ ಕ್ಯಾಟರಿಂಗ್‌ ಉದ್ಯಮಕ್ಕೆ ಹೆಚ್ಚಿನ ಬೇಡಿಕೆವಿದ್ದು,ಗುಣಮಟ್ಟ, ರುಚಿಯಲ್ಲಿ ಎಂದೂ ರಾಜೀಯಾಗದೇ ಉತ್ತಮ ಆಹಾರವನ್ನು‌ ನೀಡಬೇಕು. ಈ ಬಗ್ಗೆ ಉದ್ಯಮಿದಾರರು ಗಮನ ಹರಿಸಬೇಕು. ಆಹಾರ ಪದಾರ್ಥಗಳನ್ನು ಪ್ರಸ್ತುತ ಪಡಿಸುವುದು ಅಗತ್ಯವಾಗಿದೆ. ಆರೋಗ್ಯದ ಮೇಲೆ ಪರಿಣಾಮ ಬೀರುವ, ಕಲಬೆರಕೆಯ ಆಹಾರವನ್ನು ತಯಾರಿಸಬೇಡಿ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಸೋಸಿಯೇಷನ್ ಅಧ್ಯಕ್ಷ ನವೀನ್ ಅಮೀನ್ ಮಾತನಾಡಿ, ಕ್ಯಾಟರಿಂಗ್‌ ಮಾಲೀಕರ ಸಮಸ್ಯೆ ಪರಿಹಾರಕ್ಕೆ ಒಟ್ಟಾಗಿ ಸೇರಿದಾಗ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಕ್ಯಾಟರಿಂಗ್‌ ಸಮಸ್ಯೆಯನ್ನು ಭಿನ್ನಾಭಿಪ್ರಾಯ ದೂರೀಕರಿಸುವುದು, ದರಪಟ್ಟಿ ಮಾಡುವುದು, ಸಂಕಷ್ಟಕ್ಕೆ ಸ್ಪಂದಿಸುವುದು ನಮ್ಮ ಸಂಘಟನೆಯ ಮೊದಲ ಆದ್ಯತೆ‌. ಸರಕಾರದ ಕಾನೂನು ತೊಡಕುಗಳ ಬಗ್ಗೆ ಧ್ವನಿ ಎತ್ತುವುದಕ್ಕೆ ಸಾಧ್ಯವಿದೆ. ಸಂಘಟನೆಯಲ್ಲಿ ಇದ್ದಾಗ ನಾವೆಲ್ಲರೂ ಬೆಳೆಯುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ಉಡುಪಿ ಜಿಲ್ಲಾ ಕ್ಯಾಟರಿಂಗ್‌ ಮಾಲೀಕರ ಸಂಘದ ಪ್ರಮುಖರಾದ ಹಾಗೂ ಕ್ಯಾಟರಿಂಗ್ ಸಂಸ್ಥೆಯ ಮಾಲೀಕರಾದ ಭರತ್ ಶೆಟ್ಟಿ, ಇಗ್ನೇಷಿಯಸ್ ಡಿಸೋಜ, ರೋನಾಲ್ಡ್ ರೋಡ್ರಿಗಸ್, ರವೀಂದ್ರ ಶೆಟ್ಟಿ‌ ಶಿರ್ವ, ಅನಿಲ್ ಡಿಮೆಲ್ಲೊ, ಅನಿಲ್ ಡೆಸಾ, ದಯಾನಂದ್, ರಮೇಶ್, ಭಾಸ್ಕರ್, ಸುಶಾಂತ್, ಪ್ರಸಾದ್ ಅಂಚನ್ ಉಪಸ್ಥಿತರಿದ್ದರು.ಸಂಘದ ಉಪಾಧ್ಯಕ್ಷ ಜೂಲಿಯಸ್ ಲಿವೀಸ್‌ ದಾನಿಗಳ ಪಟ್ಟಿ ವಾಚಿಸಿದರು. ಕಾರ್ಯದರ್ಶಿ ಗಣೇಶ್ ಸಾಲ್ಯಾನ್ ವಂದಿಸಿದರು. ಗೌರವ ಸಲಹೆಗಾರ ಡೇನಿಷ್ ರೋಡ್ರಿಗಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ದೀಕ್ಷಿತ್ ಶೆಟ್ಟಿ ಸ್ವಾಗತಿಸಿ, ಆಲ್ವಿನ್ ಅಂದ್ರಾದೆ ನಿರೂಪಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago