ಕುಂದಾಪುರ

ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಸಂಘ ಉದ್ಘಾಟನೆ

Share

ಕುಂದಾಪುರ:ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಸಂತೆಕಟ್ಟೆ ಲಕ್ಷ್ಮೀ ನಗರದ ಗ್ರೀನ್ ಎಕ್ಸರ್ ಓಪನ್ ಗಾರ್ಡನ್‌ನಲ್ಲಿ ಮಂಗಳವಾರ ನಡೆಯಿತು.ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶ ವಿಠಲದಾಸ ಸ್ವಾಮೀಜಿ ದೀಪ ಪ್ರಜ್ವಲಿಸುವ ಮೂಲಕ ಜಿಲ್ಲಾ ಕ್ಯಾಟರಿಂಗ್‌ ಮಾಲೀಕರ ಸಂಘವನ್ನು ಉದ್ಘಾಟಿಸಿದರು.ಬಳಿಕ ಆಶೀರ್ವಚನ ನೀಡಿ,ಗುಣಮಟ್ಟ,ರುಚಿ,ಶುಚಿಯಾದ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುವ ಮಹತ್ತರವಾದ ಜವಾಬ್ದಾರಿ ಕ್ಯಾಟರಿಂಗ್ ಮಾಲೀಕರ ಮೇಲಿದೆ.ಈ ವೃತ್ತಿಯನ್ನು ಭಗವಂತನಿಗೆ ಕೊಡುವ ಯಜ್ಞದಂತೆ ಕಾಣಬೇಕೆಂದರು.ಅವಕಾಶ ವಂಚಿತರ ಹಸಿವು ತಣ್ಣಿಸುವುದು,ಕಣ್ಣೀರು ಒರೆಯುವ ಕೆಲಸ ನಿಜಕ್ಕೂ ಭಗವಂತನಿಗೆ ತಲುಪುತ್ತದೆ. ಈ ನಿಟ್ಟಿನಲ್ಲಿ ಕ್ಯಾಟರಿಂಗ್‌ ಸಂಘಟನೆಯ ಮೂಲಕ ಸಮಾಜದ ನೋವು ನಲಿವುಗಳಿಗೆ ಸ್ಪಂದಿಸಬೇಕೆಂದರು.

ಉಡುಪಿ ಡಯಾಸಿಸ್‌ನ ವಿಕಾರ್ ಜನರಲ್ ರೆ. ಫರ್ಡಿನೆಂಡ್ ಗೋನ್ಸ್ವಾಲಿಸ್‌ ಮಾತನಾಡಿ, ಆಧುನಿಕ ಯುಗದಲ್ಲಿ ಕ್ಯಾಟರಿಂಗ್‌ ಉದ್ಯಮಕ್ಕೆ ಹೆಚ್ಚಿನ ಬೇಡಿಕೆವಿದ್ದು,ಗುಣಮಟ್ಟ, ರುಚಿಯಲ್ಲಿ ಎಂದೂ ರಾಜೀಯಾಗದೇ ಉತ್ತಮ ಆಹಾರವನ್ನು‌ ನೀಡಬೇಕು. ಈ ಬಗ್ಗೆ ಉದ್ಯಮಿದಾರರು ಗಮನ ಹರಿಸಬೇಕು. ಆಹಾರ ಪದಾರ್ಥಗಳನ್ನು ಪ್ರಸ್ತುತ ಪಡಿಸುವುದು ಅಗತ್ಯವಾಗಿದೆ. ಆರೋಗ್ಯದ ಮೇಲೆ ಪರಿಣಾಮ ಬೀರುವ, ಕಲಬೆರಕೆಯ ಆಹಾರವನ್ನು ತಯಾರಿಸಬೇಡಿ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಸೋಸಿಯೇಷನ್ ಅಧ್ಯಕ್ಷ ನವೀನ್ ಅಮೀನ್ ಮಾತನಾಡಿ, ಕ್ಯಾಟರಿಂಗ್‌ ಮಾಲೀಕರ ಸಮಸ್ಯೆ ಪರಿಹಾರಕ್ಕೆ ಒಟ್ಟಾಗಿ ಸೇರಿದಾಗ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಕ್ಯಾಟರಿಂಗ್‌ ಸಮಸ್ಯೆಯನ್ನು ಭಿನ್ನಾಭಿಪ್ರಾಯ ದೂರೀಕರಿಸುವುದು, ದರಪಟ್ಟಿ ಮಾಡುವುದು, ಸಂಕಷ್ಟಕ್ಕೆ ಸ್ಪಂದಿಸುವುದು ನಮ್ಮ ಸಂಘಟನೆಯ ಮೊದಲ ಆದ್ಯತೆ‌. ಸರಕಾರದ ಕಾನೂನು ತೊಡಕುಗಳ ಬಗ್ಗೆ ಧ್ವನಿ ಎತ್ತುವುದಕ್ಕೆ ಸಾಧ್ಯವಿದೆ. ಸಂಘಟನೆಯಲ್ಲಿ ಇದ್ದಾಗ ನಾವೆಲ್ಲರೂ ಬೆಳೆಯುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ಉಡುಪಿ ಜಿಲ್ಲಾ ಕ್ಯಾಟರಿಂಗ್‌ ಮಾಲೀಕರ ಸಂಘದ ಪ್ರಮುಖರಾದ ಹಾಗೂ ಕ್ಯಾಟರಿಂಗ್ ಸಂಸ್ಥೆಯ ಮಾಲೀಕರಾದ ಭರತ್ ಶೆಟ್ಟಿ, ಇಗ್ನೇಷಿಯಸ್ ಡಿಸೋಜ, ರೋನಾಲ್ಡ್ ರೋಡ್ರಿಗಸ್, ರವೀಂದ್ರ ಶೆಟ್ಟಿ‌ ಶಿರ್ವ, ಅನಿಲ್ ಡಿಮೆಲ್ಲೊ, ಅನಿಲ್ ಡೆಸಾ, ದಯಾನಂದ್, ರಮೇಶ್, ಭಾಸ್ಕರ್, ಸುಶಾಂತ್, ಪ್ರಸಾದ್ ಅಂಚನ್ ಉಪಸ್ಥಿತರಿದ್ದರು.ಸಂಘದ ಉಪಾಧ್ಯಕ್ಷ ಜೂಲಿಯಸ್ ಲಿವೀಸ್‌ ದಾನಿಗಳ ಪಟ್ಟಿ ವಾಚಿಸಿದರು. ಕಾರ್ಯದರ್ಶಿ ಗಣೇಶ್ ಸಾಲ್ಯಾನ್ ವಂದಿಸಿದರು. ಗೌರವ ಸಲಹೆಗಾರ ಡೇನಿಷ್ ರೋಡ್ರಿಗಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ದೀಕ್ಷಿತ್ ಶೆಟ್ಟಿ ಸ್ವಾಗತಿಸಿ, ಆಲ್ವಿನ್ ಅಂದ್ರಾದೆ ನಿರೂಪಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

5 months ago