ಕುಂದಾಪುರ:ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಕುಂದಾಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಆಲೂರು ಶಾಲೆಯಲ್ಲಿ ವಿಜ್ಞಾನ ಮತ್ತು ಕಲಾ ಮೇಳ ಕಾರ್ಯಕ್ರಮ ಬುಧವಾರ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಆಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ ಎನ್ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಪಂಚಾಯಿತಿ ಸದಸ್ಯ ಪ್ರಸನ್ನ ಕುಮಾರ್ ಶೆಟ್ಟಿ,ರವಿ ಶೆಟ್ಟಿ,ಎಸ್ಡಿಎಂಸಿ ಅಧ್ಯಕ್ಷ ದತ್ತಾತ್ರೇಯ ಭಟ್,ಪ್ರೌಢ ಶಾಲೆ ಪ್ರಭಾರ ಮುಖ್ಯೋಪಾಧ್ಯಾಯ ಉದಯ ಕುಮಾರ್ ಶೆಟ್ಟಿ,ಶಾಲಾ ಮುಖ್ಯೋಪಾಧ್ಯಾಯಿನಿ ಲಲಿತಾ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಂದ ವಿಜ್ಞಾನ ರಂಗೋಲಿ,ಕಾರ್ಯ ನಿರ್ವಹಣಾ ಮಾದರಿಗಳು,ವಿಜ್ಞಾನ ಚಿತ್ರಗಳು ಮತ್ತು ಕಲಾ ಪ್ರದರ್ಶನ ಜರುಗಿತು.ಲಲಿತಾ ಸ್ವಾಗತಿಸಿದರು.ವಿಜ್ಞಾನ ಶಿಕ್ಷಕಿ ವಿದ್ಯಾ ಪ್ರತಿಜ್ಞಾವಿಧಿ ಬೋಧಿಸಿದರು.ಸಹಶಿಕ್ಷಕ ದಿನಕರ ನಿರ್ವಹಿಸಿದರು.ಶಿಕ್ಷಕರಾದ ವಿಶ್ವನಾಥ,ವಿದ್ಯಾಗೌಡ,ಸುನಂದ,ಆಶಾರಾಣಿ,ಕಂಪ್ಯÇಟರ್ ಶಿಕ್ಷಕಿ ದೀಪಾ ಸಹಕರಿಸಿದರು.ದೈಹಿಕ ಶಿಕ್ಷಕ ವೀರೇಂದ್ರ ಜೋಗಿ ವಂದಿಸಿದರು.
ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ…
ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ…
ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ…
ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…
ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…