ಕುಂದಾಪುರ

ತ್ರಾಸಿ:ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಬ್ಬ ಕಾರ್ಯಕ್ರಮ

Share

Advertisement
Advertisement

ಕುಂದಾಪುರ:ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಕಡೆಯಿಂದ ಎಲ್ಲಾ ರೀತಿಯ ಸಹಕಾರವನ್ನು  ನೀಡಲಾಗುವುದು ಎಂದು ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ತ್ರಾಸಿ ವತಿಯಿಂದ ತ್ರಾಸಿ ಬೀಚ್ ಗಾರ್ಡನ್‍ನಲ್ಲಿ ಶುಕ್ರವಾರ ನಡೆದ ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ವಿಶೇಷ ಗ್ರಾಮಸಭೆಯನ್ನು ನಡೆಸಲು ತ್ರಾಸಿ ಗ್ರಾಮ ಪಂಚಾಯತ್‍ನ್ನು ಆಯ್ಕೆ ಮಾಡಿರುವುದಕ್ಕೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವಂದನೆಯನ್ನು ಸಲ್ಲಿಸಿದರು.

Advertisement

ತ್ರಾಸಿ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ ಮತ್ತು ಸದಸ್ಯರಾದ ವಿಜಯ ಪೂಜಾರಿ,ಗೀತಾ ದೇವಾಡಿಗ,ನಾಗರತ್ನ ಶೆಟ್ಟಿಗಾರ್,ಶಿಕ್ಷಣ ಸಂಯೋಜಕ ಯೋಗೀಶ್,ಮಕ್ಕಳ ರಕ್ಷಣ ಘಟಕ ಮಹೇಶ್ ದೇವಾಡಿಗ,ಶಿಶು ಅಭಿವೃದ್ಧಿ ಇಲಾಖೆ ರೇಖಾ,ಗುಜ್ಜಾಡಿ ಪ್ರೌಢಶಾಲೆ ಶಿಕ್ಷಕಿ ಬಬಿತಾ ರಾಣಿ,ಮೊವಾಡಿ ಶಾಲೆ ಮುಖ್ಯೋಪಾಧ್ಯಾಯಿನಿ ಶರಾವತಿ,ನಮ್ಮ ಭೂಮಿ ಅನಿತಾ,ಮಕ್ಕಳ ಮಿತ್ರರು,ಸಹಾಸ್ ಸಂಸ್ಥೆ ಪ್ರತಿನಿಧಿಗಳು,ಸಂಜೀವಿನಿ ಸಂಘದ ಸದಸ್ಯರು,ಪಂಚಾಯಿತಿ ಸಿಬ್ಬಂದಿಗಳು,ಮಕ್ಕಳ ಪೆÇೀಷಕರು,ವಿದ್ಯಾರ್ಥಿಗಳು,ಶಿಕ್ಷಕರು,ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.ಪಿಡಿಒ ಶೋಭಾ ಸ್ವಾಗತಿಸಿದರು.ನಮ್ಮ ಭೂಮಿ ಶ್ರೀನಿವಾಸ ಗಾಣಿಗ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿ ಭಾಗಿರಥಿ ನಿರೂಪಿಸಿದರು.ಪಂಚಾಯಿತಿ ಲೆಕ್ಕ ಪರಿಶೋಧಕ ಶಿವಾನಂದ ಅನುಪಾಲನಾ ವರದಿ ಮಂಡಿಸಿದರು.

ಮಕ್ಕಳ ಗ್ರಾಮಸಭೆಯಲ್ಲಿ ಮಕ್ಕಳ ಸಮಸ್ಯೆ ಅನಾವರಣ:ಮೊವಾಡಿ ಶಾಲೆ ವಿದ್ಯಾರ್ಥಿನಿ ರಮ್ಯ ತ್ರಾಸಿ-ಮೊವಾಡಿ ಸಂಪರ್ಕಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಬೇಡಿಕೆಯನ್ನು ಇಟ್ಟರು ಹಾಗೂ ಆರುಷ ಸಿಂಗಲ್ ಪೇರೆಂಟ್ ವಿಷಯವನ್ನು ಪ್ರಸ್ತಾಪಿಸಿ ಅನಾರೋಗ್ಯದಿಂದ ಪೀಡಿತರಾದ ತಮ್ಮ ತಾಯಿಗೆ ವಾಕರ್ ಮತ್ತು ಮಾಶಾಸನ ನೀಡುವಂತೆ ಕೇಳಿಕೊಂಡರು.ಅಮೃತ ದಾರಿ ದೀಪ ಕಲ್ಪಿಸುವಂತೆ ಮನವಿ ಮಾಡಿದರು.ಗುಜ್ಜಾಡಿ ಪ್ರೌಢಶಾಲೆ ವಿದ್ಯಾರ್ಥಿ ಸಮರ್ಥ ಶಾಲೆ ಸಂಪರ್ಕ ರಸ್ತೆಯನ್ನು ದುರಸ್ತಿಗೊಳಿಸುವಂತೆ,ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಸಿದರು.ತೇಜಸ್ ಶಾಲೆ ಕೊಠಡಿ ನವೀಕರಣ ಮತ್ತು ಶಾಲೆಗೆ ಸುಣ್ಣಬಣ್ಣ ಬಳಿಯಲು ಕ್ರಮ ಕೈಗೊಳ್ಳಬೇಕು ಎಂದರು.ಅಂಗನವಾಡಿ ಶಾಲೆ ವಿದ್ಯಾರ್ಥಿನಿ ಸಂಸ್ಕøತಿ ಮಾತನಾಡಿ,ಪೌಷ್ಠಿಕ ತೋಟ ರಚನೆ,ಆಟಿಕೆಗಳನ್ನು ಪಂಚಾಯತ್ ವತಿಯಿಂದ ನೀಡಬೇಕು ಎನ್ನುವ ಬೇಡಿಕೆಯನ್ನು ಸಭೆಯಲ್ಲಿ ಮಂಡಿಸುವುದರ ಮುಖೇನ ಪುಟಾಣಿ ಬಾಲಕಿ ಮಕ್ಕಳ ಗ್ರಾಮಸಭೆಯಲ್ಲಿ ಎಲ್ಲರ ಗಮನವನ್ನು ಸೆಳೆದಳು.ಮಕ್ಕಳ ಗ್ರಾಮ ಸಭೆ ಅಧ್ಯಕ್ಷತೆ ವಹಿಸಿದ್ದ ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಮಾತನಾಡಿ,ಪಂಚಾಯತ್ ಮಟ್ಟದ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಲಾಗುವುದು,ಗಂಭೀರ ಸಮಸ್ಯೆಗಳ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ಮಕ್ಕಳ ವಿಶೇಷ ಗ್ರಾಮ ಸಭೆ ಮತ್ತು ಮಕ್ಕಳ ಹಬ್ಬವನ್ನು ಆಚರಿಸಲು ರಾಜ್ಯದ 6222 ಗ್ರಾಮ ಪಂಚಾಯತ್‍ಗಳಲ್ಲಿ 100 ಗ್ರಾಮ ಪಂಚಾಯತ್‍ನ್ನು ಸರಕಾರ ಆಯ್ಕೆಮಾಡಿದೆ.

Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

15 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago