ಕುಂದಾಪುರ

ತ್ರಾಸಿ:ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಬ್ಬ ಕಾರ್ಯಕ್ರಮ

Share

ಕುಂದಾಪುರ:ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಕಡೆಯಿಂದ ಎಲ್ಲಾ ರೀತಿಯ ಸಹಕಾರವನ್ನು  ನೀಡಲಾಗುವುದು ಎಂದು ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ತ್ರಾಸಿ ವತಿಯಿಂದ ತ್ರಾಸಿ ಬೀಚ್ ಗಾರ್ಡನ್‍ನಲ್ಲಿ ಶುಕ್ರವಾರ ನಡೆದ ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ವಿಶೇಷ ಗ್ರಾಮಸಭೆಯನ್ನು ನಡೆಸಲು ತ್ರಾಸಿ ಗ್ರಾಮ ಪಂಚಾಯತ್‍ನ್ನು ಆಯ್ಕೆ ಮಾಡಿರುವುದಕ್ಕೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವಂದನೆಯನ್ನು ಸಲ್ಲಿಸಿದರು.

ತ್ರಾಸಿ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ ಮತ್ತು ಸದಸ್ಯರಾದ ವಿಜಯ ಪೂಜಾರಿ,ಗೀತಾ ದೇವಾಡಿಗ,ನಾಗರತ್ನ ಶೆಟ್ಟಿಗಾರ್,ಶಿಕ್ಷಣ ಸಂಯೋಜಕ ಯೋಗೀಶ್,ಮಕ್ಕಳ ರಕ್ಷಣ ಘಟಕ ಮಹೇಶ್ ದೇವಾಡಿಗ,ಶಿಶು ಅಭಿವೃದ್ಧಿ ಇಲಾಖೆ ರೇಖಾ,ಗುಜ್ಜಾಡಿ ಪ್ರೌಢಶಾಲೆ ಶಿಕ್ಷಕಿ ಬಬಿತಾ ರಾಣಿ,ಮೊವಾಡಿ ಶಾಲೆ ಮುಖ್ಯೋಪಾಧ್ಯಾಯಿನಿ ಶರಾವತಿ,ನಮ್ಮ ಭೂಮಿ ಅನಿತಾ,ಮಕ್ಕಳ ಮಿತ್ರರು,ಸಹಾಸ್ ಸಂಸ್ಥೆ ಪ್ರತಿನಿಧಿಗಳು,ಸಂಜೀವಿನಿ ಸಂಘದ ಸದಸ್ಯರು,ಪಂಚಾಯಿತಿ ಸಿಬ್ಬಂದಿಗಳು,ಮಕ್ಕಳ ಪೆÇೀಷಕರು,ವಿದ್ಯಾರ್ಥಿಗಳು,ಶಿಕ್ಷಕರು,ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.ಪಿಡಿಒ ಶೋಭಾ ಸ್ವಾಗತಿಸಿದರು.ನಮ್ಮ ಭೂಮಿ ಶ್ರೀನಿವಾಸ ಗಾಣಿಗ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿ ಭಾಗಿರಥಿ ನಿರೂಪಿಸಿದರು.ಪಂಚಾಯಿತಿ ಲೆಕ್ಕ ಪರಿಶೋಧಕ ಶಿವಾನಂದ ಅನುಪಾಲನಾ ವರದಿ ಮಂಡಿಸಿದರು.

ಮಕ್ಕಳ ಗ್ರಾಮಸಭೆಯಲ್ಲಿ ಮಕ್ಕಳ ಸಮಸ್ಯೆ ಅನಾವರಣ:ಮೊವಾಡಿ ಶಾಲೆ ವಿದ್ಯಾರ್ಥಿನಿ ರಮ್ಯ ತ್ರಾಸಿ-ಮೊವಾಡಿ ಸಂಪರ್ಕಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಬೇಡಿಕೆಯನ್ನು ಇಟ್ಟರು ಹಾಗೂ ಆರುಷ ಸಿಂಗಲ್ ಪೇರೆಂಟ್ ವಿಷಯವನ್ನು ಪ್ರಸ್ತಾಪಿಸಿ ಅನಾರೋಗ್ಯದಿಂದ ಪೀಡಿತರಾದ ತಮ್ಮ ತಾಯಿಗೆ ವಾಕರ್ ಮತ್ತು ಮಾಶಾಸನ ನೀಡುವಂತೆ ಕೇಳಿಕೊಂಡರು.ಅಮೃತ ದಾರಿ ದೀಪ ಕಲ್ಪಿಸುವಂತೆ ಮನವಿ ಮಾಡಿದರು.ಗುಜ್ಜಾಡಿ ಪ್ರೌಢಶಾಲೆ ವಿದ್ಯಾರ್ಥಿ ಸಮರ್ಥ ಶಾಲೆ ಸಂಪರ್ಕ ರಸ್ತೆಯನ್ನು ದುರಸ್ತಿಗೊಳಿಸುವಂತೆ,ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಸಿದರು.ತೇಜಸ್ ಶಾಲೆ ಕೊಠಡಿ ನವೀಕರಣ ಮತ್ತು ಶಾಲೆಗೆ ಸುಣ್ಣಬಣ್ಣ ಬಳಿಯಲು ಕ್ರಮ ಕೈಗೊಳ್ಳಬೇಕು ಎಂದರು.ಅಂಗನವಾಡಿ ಶಾಲೆ ವಿದ್ಯಾರ್ಥಿನಿ ಸಂಸ್ಕøತಿ ಮಾತನಾಡಿ,ಪೌಷ್ಠಿಕ ತೋಟ ರಚನೆ,ಆಟಿಕೆಗಳನ್ನು ಪಂಚಾಯತ್ ವತಿಯಿಂದ ನೀಡಬೇಕು ಎನ್ನುವ ಬೇಡಿಕೆಯನ್ನು ಸಭೆಯಲ್ಲಿ ಮಂಡಿಸುವುದರ ಮುಖೇನ ಪುಟಾಣಿ ಬಾಲಕಿ ಮಕ್ಕಳ ಗ್ರಾಮಸಭೆಯಲ್ಲಿ ಎಲ್ಲರ ಗಮನವನ್ನು ಸೆಳೆದಳು.ಮಕ್ಕಳ ಗ್ರಾಮ ಸಭೆ ಅಧ್ಯಕ್ಷತೆ ವಹಿಸಿದ್ದ ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಮಾತನಾಡಿ,ಪಂಚಾಯತ್ ಮಟ್ಟದ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಲಾಗುವುದು,ಗಂಭೀರ ಸಮಸ್ಯೆಗಳ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ಮಕ್ಕಳ ವಿಶೇಷ ಗ್ರಾಮ ಸಭೆ ಮತ್ತು ಮಕ್ಕಳ ಹಬ್ಬವನ್ನು ಆಚರಿಸಲು ರಾಜ್ಯದ 6222 ಗ್ರಾಮ ಪಂಚಾಯತ್‍ಗಳಲ್ಲಿ 100 ಗ್ರಾಮ ಪಂಚಾಯತ್‍ನ್ನು ಸರಕಾರ ಆಯ್ಕೆಮಾಡಿದೆ.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago