ಕುಂದಾಪುರ

ತ್ರಾಸಿ:ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಬ್ಬ ಕಾರ್ಯಕ್ರಮ

Share

Advertisement
Advertisement
Advertisement

ಕುಂದಾಪುರ:ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಕಡೆಯಿಂದ ಎಲ್ಲಾ ರೀತಿಯ ಸಹಕಾರವನ್ನು  ನೀಡಲಾಗುವುದು ಎಂದು ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ತ್ರಾಸಿ ವತಿಯಿಂದ ತ್ರಾಸಿ ಬೀಚ್ ಗಾರ್ಡನ್‍ನಲ್ಲಿ ಶುಕ್ರವಾರ ನಡೆದ ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ವಿಶೇಷ ಗ್ರಾಮಸಭೆಯನ್ನು ನಡೆಸಲು ತ್ರಾಸಿ ಗ್ರಾಮ ಪಂಚಾಯತ್‍ನ್ನು ಆಯ್ಕೆ ಮಾಡಿರುವುದಕ್ಕೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವಂದನೆಯನ್ನು ಸಲ್ಲಿಸಿದರು.

Advertisement

ತ್ರಾಸಿ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ ಮತ್ತು ಸದಸ್ಯರಾದ ವಿಜಯ ಪೂಜಾರಿ,ಗೀತಾ ದೇವಾಡಿಗ,ನಾಗರತ್ನ ಶೆಟ್ಟಿಗಾರ್,ಶಿಕ್ಷಣ ಸಂಯೋಜಕ ಯೋಗೀಶ್,ಮಕ್ಕಳ ರಕ್ಷಣ ಘಟಕ ಮಹೇಶ್ ದೇವಾಡಿಗ,ಶಿಶು ಅಭಿವೃದ್ಧಿ ಇಲಾಖೆ ರೇಖಾ,ಗುಜ್ಜಾಡಿ ಪ್ರೌಢಶಾಲೆ ಶಿಕ್ಷಕಿ ಬಬಿತಾ ರಾಣಿ,ಮೊವಾಡಿ ಶಾಲೆ ಮುಖ್ಯೋಪಾಧ್ಯಾಯಿನಿ ಶರಾವತಿ,ನಮ್ಮ ಭೂಮಿ ಅನಿತಾ,ಮಕ್ಕಳ ಮಿತ್ರರು,ಸಹಾಸ್ ಸಂಸ್ಥೆ ಪ್ರತಿನಿಧಿಗಳು,ಸಂಜೀವಿನಿ ಸಂಘದ ಸದಸ್ಯರು,ಪಂಚಾಯಿತಿ ಸಿಬ್ಬಂದಿಗಳು,ಮಕ್ಕಳ ಪೆÇೀಷಕರು,ವಿದ್ಯಾರ್ಥಿಗಳು,ಶಿಕ್ಷಕರು,ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.ಪಿಡಿಒ ಶೋಭಾ ಸ್ವಾಗತಿಸಿದರು.ನಮ್ಮ ಭೂಮಿ ಶ್ರೀನಿವಾಸ ಗಾಣಿಗ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿ ಭಾಗಿರಥಿ ನಿರೂಪಿಸಿದರು.ಪಂಚಾಯಿತಿ ಲೆಕ್ಕ ಪರಿಶೋಧಕ ಶಿವಾನಂದ ಅನುಪಾಲನಾ ವರದಿ ಮಂಡಿಸಿದರು.

ಮಕ್ಕಳ ಗ್ರಾಮಸಭೆಯಲ್ಲಿ ಮಕ್ಕಳ ಸಮಸ್ಯೆ ಅನಾವರಣ:ಮೊವಾಡಿ ಶಾಲೆ ವಿದ್ಯಾರ್ಥಿನಿ ರಮ್ಯ ತ್ರಾಸಿ-ಮೊವಾಡಿ ಸಂಪರ್ಕಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಬೇಡಿಕೆಯನ್ನು ಇಟ್ಟರು ಹಾಗೂ ಆರುಷ ಸಿಂಗಲ್ ಪೇರೆಂಟ್ ವಿಷಯವನ್ನು ಪ್ರಸ್ತಾಪಿಸಿ ಅನಾರೋಗ್ಯದಿಂದ ಪೀಡಿತರಾದ ತಮ್ಮ ತಾಯಿಗೆ ವಾಕರ್ ಮತ್ತು ಮಾಶಾಸನ ನೀಡುವಂತೆ ಕೇಳಿಕೊಂಡರು.ಅಮೃತ ದಾರಿ ದೀಪ ಕಲ್ಪಿಸುವಂತೆ ಮನವಿ ಮಾಡಿದರು.ಗುಜ್ಜಾಡಿ ಪ್ರೌಢಶಾಲೆ ವಿದ್ಯಾರ್ಥಿ ಸಮರ್ಥ ಶಾಲೆ ಸಂಪರ್ಕ ರಸ್ತೆಯನ್ನು ದುರಸ್ತಿಗೊಳಿಸುವಂತೆ,ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಸಿದರು.ತೇಜಸ್ ಶಾಲೆ ಕೊಠಡಿ ನವೀಕರಣ ಮತ್ತು ಶಾಲೆಗೆ ಸುಣ್ಣಬಣ್ಣ ಬಳಿಯಲು ಕ್ರಮ ಕೈಗೊಳ್ಳಬೇಕು ಎಂದರು.ಅಂಗನವಾಡಿ ಶಾಲೆ ವಿದ್ಯಾರ್ಥಿನಿ ಸಂಸ್ಕøತಿ ಮಾತನಾಡಿ,ಪೌಷ್ಠಿಕ ತೋಟ ರಚನೆ,ಆಟಿಕೆಗಳನ್ನು ಪಂಚಾಯತ್ ವತಿಯಿಂದ ನೀಡಬೇಕು ಎನ್ನುವ ಬೇಡಿಕೆಯನ್ನು ಸಭೆಯಲ್ಲಿ ಮಂಡಿಸುವುದರ ಮುಖೇನ ಪುಟಾಣಿ ಬಾಲಕಿ ಮಕ್ಕಳ ಗ್ರಾಮಸಭೆಯಲ್ಲಿ ಎಲ್ಲರ ಗಮನವನ್ನು ಸೆಳೆದಳು.ಮಕ್ಕಳ ಗ್ರಾಮ ಸಭೆ ಅಧ್ಯಕ್ಷತೆ ವಹಿಸಿದ್ದ ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಮಾತನಾಡಿ,ಪಂಚಾಯತ್ ಮಟ್ಟದ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಲಾಗುವುದು,ಗಂಭೀರ ಸಮಸ್ಯೆಗಳ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ಮಕ್ಕಳ ವಿಶೇಷ ಗ್ರಾಮ ಸಭೆ ಮತ್ತು ಮಕ್ಕಳ ಹಬ್ಬವನ್ನು ಆಚರಿಸಲು ರಾಜ್ಯದ 6222 ಗ್ರಾಮ ಪಂಚಾಯತ್‍ಗಳಲ್ಲಿ 100 ಗ್ರಾಮ ಪಂಚಾಯತ್‍ನ್ನು ಸರಕಾರ ಆಯ್ಕೆಮಾಡಿದೆ.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago