ಕುಂದಾಪುರ:ಸಹಸ್ರಾರು ವರ್ಷಗಳ ಕಾಲದ ಇತಿಹಾಸವನ್ನು ಹೊಂದಿರುವ ಮರವಂತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿದ್ದ ಬೆಳ್ಳಿ ರಥ ಅನಾದಿ ಕಾಲದಲ್ಲಿ ಸಮುದ್ರದಲ್ಲಿ ಹುದುಗಿದೆ ಎನ್ನುವ ವಿಷಯ ಪ್ರಶ್ನಾ ಚಿಂತನೆಯಲ್ಲಿ ಮೂಡಿ ಬಂದಿದೆ.ಆ ನಿಟ್ಟಿನಲ್ಲಿ ಶ್ರೀದೇವರಿಗೆ ಬೆಳ್ಳಿ ರಥವನ್ನು ಸಮರ್ಪಣೆ ಮಾಡಲು ನಿರ್ಧರಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್.ಎಂ ನಾಯಕ್ ಹೇಳಿದರು.ಬೈಂದೂರು ತಾಲೂಕಿನ ಮರವಂತೆ ಶ್ರೀಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಸೋಮವಾರ ಬೆಳ್ಳಿ ರಥ ಲೋಕಾರ್ಪಣೆ ಮನವಿ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಶ್ರೀದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿ ರಥ ನಿರ್ಮಾಣಕ್ಕೆ ಅಂದಾಜು ಒಂದು ಕೋಟಿ.ರೂ ಅಧಿಕ ಹಣ ತಗುಲಲಿದೆ.ಇವೊಂದು ದೇವತಾ ಕಾರ್ಯಕ್ಕೆ ದಾನಿಗಳು,ಭಕ್ತಾಧಿಗಳು,ಗ್ರಾಮಸ್ಥರು ಸಹಕರಿಸಬೇಕೆಂದು ಕೇಳಿಕೊಂಡರು.ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಸಂಘದ ಅಧ್ಯಕ್ಷ ಯಶವಂತ ಗಂಗೊಳ್ಳಿ,ಮೀನುಗಾರ ಮುಖಂಡರಾದ ಚಂದ್ರ ಖಾರ್ವಿ ಮರವಂತೆ,ವೆಂಕಟರಮಣ ಖಾರ್ವಿ,ಸಮಿತಿ ಸದಸ್ಯರಾದ ಗಣೇಶ ಖಾರ್ವಿ,ಪ್ರಕಾಶ,ಶೋಭಾ ದೇವಾಡಿಗ,ಗ್ರಾಮಸ್ಥರು,ದೇವಳದ ಅರ್ಚಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…