ಕುಂದಾಪುರ:ಸಹಸ್ರಾರು ವರ್ಷಗಳ ಕಾಲದ ಇತಿಹಾಸವನ್ನು ಹೊಂದಿರುವ ಮರವಂತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿದ್ದ ಬೆಳ್ಳಿ ರಥ ಅನಾದಿ ಕಾಲದಲ್ಲಿ ಸಮುದ್ರದಲ್ಲಿ ಹುದುಗಿದೆ ಎನ್ನುವ ವಿಷಯ ಪ್ರಶ್ನಾ ಚಿಂತನೆಯಲ್ಲಿ ಮೂಡಿ ಬಂದಿದೆ.ಆ ನಿಟ್ಟಿನಲ್ಲಿ ಶ್ರೀದೇವರಿಗೆ ಬೆಳ್ಳಿ ರಥವನ್ನು ಸಮರ್ಪಣೆ ಮಾಡಲು ನಿರ್ಧರಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್.ಎಂ ನಾಯಕ್ ಹೇಳಿದರು.ಬೈಂದೂರು ತಾಲೂಕಿನ ಮರವಂತೆ ಶ್ರೀಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಸೋಮವಾರ ಬೆಳ್ಳಿ ರಥ ಲೋಕಾರ್ಪಣೆ ಮನವಿ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಶ್ರೀದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿ ರಥ ನಿರ್ಮಾಣಕ್ಕೆ ಅಂದಾಜು ಒಂದು ಕೋಟಿ.ರೂ ಅಧಿಕ ಹಣ ತಗುಲಲಿದೆ.ಇವೊಂದು ದೇವತಾ ಕಾರ್ಯಕ್ಕೆ ದಾನಿಗಳು,ಭಕ್ತಾಧಿಗಳು,ಗ್ರಾಮಸ್ಥರು ಸಹಕರಿಸಬೇಕೆಂದು ಕೇಳಿಕೊಂಡರು.ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಸಂಘದ ಅಧ್ಯಕ್ಷ ಯಶವಂತ ಗಂಗೊಳ್ಳಿ,ಮೀನುಗಾರ ಮುಖಂಡರಾದ ಚಂದ್ರ ಖಾರ್ವಿ ಮರವಂತೆ,ವೆಂಕಟರಮಣ ಖಾರ್ವಿ,ಸಮಿತಿ ಸದಸ್ಯರಾದ ಗಣೇಶ ಖಾರ್ವಿ,ಪ್ರಕಾಶ,ಶೋಭಾ ದೇವಾಡಿಗ,ಗ್ರಾಮಸ್ಥರು,ದೇವಳದ ಅರ್ಚಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…