ಕುಂದಾಪುರ

ಶ್ರೀಮಾಣಿಸಿದ್ಧಲಿಂಗೇಶ್ವರ ದೇವಸ್ಥಾನ ಮೊವಾಡಿ ಸುವರ್ಣ ಮಹೋತ್ಸವ,ಧಾರ್ಮಿಕ ಸಭಾ ಕಾರ್ಯಕ್ರಮ

Share

ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಮೊವಾಡಿ ಶ್ರೀಮಾಣಿಸಿದ್ಧಲಿಂಗೇಶ್ವರ ದೇವಸ್ಥಾನದ ಸುವರ್ಣಮಹೋತ್ಸವ,ಮಹಾಶಿವರಾತ್ರಿ ಉತ್ಸವ,ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆ ಕಾರ್ಯಕ್ರಮ,ಅನ್ನಸಂತರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ಅದ್ದೂರಿಯಾಗಿ ನಡೆಯಿತು.ಭಾರಂಗಿ ಕೂಡ್ಲಿಮಠ ಮಹಾ ಸಂಸ್ಥಾನ ತಾಳಗುಪ್ಪ ಸಾಗರ ಪರಮ ಪೂಜ್ಯ ಶ್ರೀ ಸಿದ್ಧವೀರ ಮಹಾಸ್ವಾಮೀಜಿ ಅವರನ್ನು ಭವ್ಯ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.

ಪರಮ ಪೂಜ್ಯ ಶ್ರೀ ಸಿದ್ಧವೀರ ಮಹಾಸ್ವಾಮೀಜಿ ಅವರು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯನ್ನು ಉದ್ಘಾಟಿಸಿ,ಆಶೀರ್ವಚನ ನೀಡಿ ಮಾತನಾಡಿ,ದುಡಿಮೆಯಿಂದ ಬೇಕಾದಷ್ಟು ಹಣವನ್ನು ಸಂಪಾದಿಸಬಹುದು ಆದರೆ ಜೀವನದಲ್ಲಿ ನೆಮ್ಮದಿಯನ್ನು ಸಂಪಾದನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ.ಭಕ್ತಿ ಮಾರ್ಗದಲ್ಲಿ ಸಾಗಿದರೆ ಜೀವನದಲ್ಲಿ ನೆಮ್ಮದಿ ಬದುಕನ್ನು ಕಾಣುವುದರ ಜತೆಗೆ ಸುಸಂಸ್ಕøತರಾಗಿ ಬದುಕಲು ಸಾಧ್ಯವಿದೆ ಎಂದು ಹೇಳಿದರು.

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ಭಜನಾ ತಂಡವನ್ನು ಕಟ್ಟಿಕೊಂಡು ಕಳೆದ ಐವತ್ತು ವರ್ಷಗಳಿಂದ ಭಜನಾ ಕೈಂಕರ್ಯದಲ್ಲಿ ತೊಡಗಿಕೊಂಡಿರುವ ಮೊವಾಡಿ ಶ್ರೀಮಾಣಿಸಿದ್ಧಲಿಂಗೇಶ್ವರ ಭಜನಾ ತಂಡವು ಧಾರ್ಮಿಕ ಕ್ಷೇತ್ರಕ್ಕೆ ತನ್ನದೆ ರೀತಿಯಲ್ಲಿ ದೊಡ್ಡ ಕೊಡುಗೆಯನ್ನು ನೀಡಿದೆ ಎಂದು ಶ್ಲಾಘೀಸಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀಮಾಣಿಸಿದ್ಧಲಿಂಗೇಶ್ವರ ದೇವಸ್ಥಾನ ಮೊವಾಡಿ ಗೌರವಾಧ್ಯಕ್ಷ ಅನಂತ ಮೊವಾಡಿ ಮಾತನಾಡಿ,ಭಜನೆಗಿರುವ ಮಹತ್ವ ಮತ್ತು ಹಿಂದಿನ ಪರಂಪರೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ದೃಷ್ಟಿಯಿಂದ ಶಿವರಾತ್ರಿ ಜಾಗರಣೆ ಅಂಗವಾಗಿ ಭಜನಾ ಮಹೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.ಪ್ರತಿ ಮನೆಯಲ್ಲಿಯೂ ಭಜನೆ ಸಪ್ಪಳ ಮರುಕಳಿಸಬೇಕಿದೆ ಎಂದರು.

ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಮತ್ತು ಉಪಾಧ್ಯಕ್ಷೆ ಹೇಮ,ಉದ್ಯಮಿ ಶಿವ ಆರ್ ಪೂಜಾರಿ ಆನಗೋಡು,ಕೆನರಾ ಬ್ಯಾಂಕ್ ನಿವೃತ್ತ ಹಿರಿಯ ವ್ಯವಸ್ಥಾಪಕ ಚಂದ್ರಶೇಖರ್,ಶ್ರೀಮಾಣಿ ಸಿದ್ಧಲಿಂಗೇಶ್ವರ ದೇವಸ್ಥಾನ ಮೊವಾಡಿ ಮೊಕ್ತೇಸರರಾದ ಸುಧಾಕರ ಮೊವಾಡಿ ಮತ್ತು ವಿಜಯ ಹಾಗೂ ಬಿ.ಕೆ ನಾರಾಯಣ,ಗೌರವ ಕಾರ್ಯದರ್ಶಿ ವೆಂಕಟ ಪೂಜಾರಿ,ಶೇಖರ್ ಗಾಣಿಗ,ರವಿರಾಜ್ ಶೆಟ್ಟಿ ಆನಗೋಡು,ಪಂಚಾಯಿತಿ ಸದಸ್ಯ ವಿಜಯ ಚುಟ್ಟಿತ್ತಾರು,ಜಿ.ಟಿ ಮಂಜುನಾಥ ಗಂಗೊಳ್ಳಿ,ರವಿಜ ಪೂಜಾರಿ ಕಳಿನಮನೆ,ದೇವಸ್ಥಾನದ ಅಧ್ಯಕ್ಷ ಗಣೇಶ,ಟಿ.ವಿ ಸುಬ್ಬಣ್ಣ,ತೀರ್ಪುಗಾರರು ಉಪಸ್ಥಿತರಿದ್ದರು.ಅನಾರೋಗ್ಯ ಪೀಡಿತರಿಗೆ ಧನಸಹಾಯ ವಿತರಿಸಲಾಯಿತು.ದಾನಿಗಳನ್ನು,ಹಿರಿಯರನ್ನು ಗೌರವಿಸಲಾಯಿತು.
ಸುಧಾಕರ ಮೊವಾಡಿ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.ಗಣೇಶ ನಿರೂಪಿಸಿದರು.ಸಂತೋಷ ಎಂ.ಆರ್ ವಂದಿಸಿದರು.ನಾನಾ ಭಜನಾ ತಂಡಗಳಿಂದ ಕುಣಿತ ಭಜನಾ ಸ್ಪರ್ಧೆ ಜರುಗಿತು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago