ಕುಂದಾಪುರ:ಕಾಂಗ್ರೆಸ್ ಪಕ್ಷ ಸೇರುವವರನ್ನು ಸ್ವಾಗತಿಸುವುದಾಗಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹಾಗೂ ಪಕ್ಷದ ಹಿರಿಯ ಮುಖಂಡರು ಹೇಳಿದ್ದು, ಪಕ್ಷದ ನಿಲುವಿಗೆ ನಮ್ಮ ಸಹಮತ ಇರುವುದಾಗಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ ಮುಂತಾದವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಜಿ ಸಂಸದರಾಗಿರುವ ಕೆ. ಜಯಪ್ರಕಾಶ್ ಹೆಗ್ಡೆಯವರು ಮರಳಿ ಕಾಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈಗಾಗಲೇ ಮಾತುಕತೆ ನಡೆಯುತ್ತಿರುವ ಬಗ್ಗೆ ಮಾಹಿತಿಗಳಿದ್ದು, ಹಿಂದೆ ಕಾಂಗ್ರೆಸ್ ಪಕ್ಷದ ಸಂಸದರಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರ ವಿಶ್ವಾಸವನ್ನು ಗಳಿಸಿಕೊಂಡಿದ್ದ ಅವರು, ಮರಳಿ ಕಾಂಗ್ರೆಸ್ ಪಕ್ಷವನ್ನು ಸೇರುವುದಿದ್ದಲ್ಲಿ ನಾವು ಸ್ವಾಗತಿಸುತ್ತೇವೆ.ಕಾಂಗ್ರೆಸ್ ಪಕ್ಷದೊಂದಿಗೆ ಅಪರಿಮಿತ ಸಂಬಂಧಗಳನ್ನು ಹೊಂದಿರುವ ಚಿಕ್ಕಮಗಳೂರ-ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ಹೈಕಮಾಂಡ್ ಯಾರೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರುಗಳಾದ ನಾವುಗಳು ಅಭ್ಯರ್ಥಿಯ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ಕೆ. ವಿಕಾಸ್ ಹೆಗ್ಡೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಸರಸು ಡಿ ಬಂಗೇರ, ಜ್ಯೋತಿ ವಿ ಪುತ್ರನ್, ರಾಜ್ಯ ಐಟಿ ಸೆಲ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ದೇವಾನಂದ ಶೆಟ್ಟಿ ಹಳ್ನಾಡು, ರಮೇಶ್ ಗಾಣಿಗ ಕೊಲ್ಲೂರು, ಮದನ್ ಕುಮಾರ್ ಉಪ್ಪುಂದ, ವಿಜಯಾಧರ ಪೂಜಾರಿ, ಪುರಸಭಾ ಸದಸ್ಯ ಅಬು ಮಹಮ್ಮದ್, ಎನ್ಎಸ್ ಯುಐ ಮುಖಂಡ ಸುಜನ್ ಶೆಟ್ಟಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…