ಪ್ರಮುಖ

ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ

Share

ನವದೆಹಲಿ:ಯೂಟ್ಯೂಬ್,ಇನ್ಸ್ಟ್ರಾಗ್ರಾಮನಲ್ಲಿ ಜನಪ್ರಿಯತೆ ಗಳಿಸಿದವರಿಗೆ ಇದೆ ಮೊದಲ ಬಾರಿಗೆ
ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ನೀಡಿ ಗೌರವಿಸಿದರು.ರಾಜ್ಯದ ಪ್ರಖ್ಯಾತ ಆರ್‌ಜೆ ಹಾಗೂ ಕಂಟೆಂಟ್ ಕ್ರಿಯೇಟರ್ ಆಗಿರುವ ಕರಾವಳಿ ಮೂಲದ’ ಅಯ್ಯೋ ಶ್ರದ್ಧಾ’ ಎಂದೇ ಫೇಮಸ್ ಆಗಿರುವ ಶ್ರದ್ಧಾ ಜೈನ್ ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪುರುಷರ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಬುವಾವಾ ಎಂದೇ ಪ್ರಸಿದ್ಧರಾಗಿರುವ ಆರ್‌ಜೆ ರೌನಕ್‌ಗೆ ಈ ಪ್ರಶಸ್ತಿ ನೀಡಲಾಗಿದೆ.ಹಲವು ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಜನಪರ ಕಂಟೆಂಟ್‌ಗಳ ಮೂಲಕ ಪ್ರಖ್ಯಾತರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಸ್ತಿ ವಿತರಣೆ ಮಾಡಿದ್ದು ವಿಶೇಷ ಸಂಗತಿ ಆಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿ,ಮುಂದಿನ ಲೋಕಸಭೆ ಚುನಾವಣೆ ಇದೆ ಎನ್ನುವ ಕಾರಣಕ್ಕಾಗಿ ಇದನ್ನು ಮಾಡುತ್ತಿದ್ದೇನೆ ಎಂದು ಕೆಲವರು ಹೇಳ್ತಾರೆ. ಆದರೆ, ಮುಂದಿನ ವರ್ಷ ಶಿವರಾತ್ರಿಗೂ ನಾನೇ ಈ ಪ್ರಶಸ್ತಿ ಪ್ರದಾನ ಮಾಡಲಿದ್ದೇನೆ. ಇದು ಮೋದಿ ಗ್ಯಾರಂಟಿ ಎನ್ನುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತಪಡಿಸಿದರು.ಇಡೀ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅತ್ಯಂತ ಮನರಂಜನಾತ್ಮಕವಾಗಿದ್ದರು. . ಹೆಚ್ಚಿನ ಎಲ್ಲಾ ಕಂಟೆಂಟ್ ಕ್ರಿಯೆಟರ್‌ಗಳು ವೇದಿಕೆಗೆ ಬರುವಾಗ ಅವರ ಕಾರ್ಯಕ್ರಮದ ವಿಶೇಷತೆಗಳನ್ನು ಮೋದಿ ಹೇಳುತ್ತಿದ್ದರು. ಅದರೊಂದಿಗೆ ತಾವು ಸ್ಪೂರ್ತಿದಾಯಕ ಅಂಶಗಳಿರುವ ಕಂಟೆಂಟ್‌ಗಳನ್ನೇ ಇಷ್ಟಪಡುವುದಾಗಿ ತಿಳಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago