ಪ್ರಮುಖ

ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ

Share

ನವದೆಹಲಿ:ಯೂಟ್ಯೂಬ್,ಇನ್ಸ್ಟ್ರಾಗ್ರಾಮನಲ್ಲಿ ಜನಪ್ರಿಯತೆ ಗಳಿಸಿದವರಿಗೆ ಇದೆ ಮೊದಲ ಬಾರಿಗೆ
ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ನೀಡಿ ಗೌರವಿಸಿದರು.ರಾಜ್ಯದ ಪ್ರಖ್ಯಾತ ಆರ್‌ಜೆ ಹಾಗೂ ಕಂಟೆಂಟ್ ಕ್ರಿಯೇಟರ್ ಆಗಿರುವ ಕರಾವಳಿ ಮೂಲದ’ ಅಯ್ಯೋ ಶ್ರದ್ಧಾ’ ಎಂದೇ ಫೇಮಸ್ ಆಗಿರುವ ಶ್ರದ್ಧಾ ಜೈನ್ ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪುರುಷರ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಬುವಾವಾ ಎಂದೇ ಪ್ರಸಿದ್ಧರಾಗಿರುವ ಆರ್‌ಜೆ ರೌನಕ್‌ಗೆ ಈ ಪ್ರಶಸ್ತಿ ನೀಡಲಾಗಿದೆ.ಹಲವು ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಜನಪರ ಕಂಟೆಂಟ್‌ಗಳ ಮೂಲಕ ಪ್ರಖ್ಯಾತರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಸ್ತಿ ವಿತರಣೆ ಮಾಡಿದ್ದು ವಿಶೇಷ ಸಂಗತಿ ಆಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿ,ಮುಂದಿನ ಲೋಕಸಭೆ ಚುನಾವಣೆ ಇದೆ ಎನ್ನುವ ಕಾರಣಕ್ಕಾಗಿ ಇದನ್ನು ಮಾಡುತ್ತಿದ್ದೇನೆ ಎಂದು ಕೆಲವರು ಹೇಳ್ತಾರೆ. ಆದರೆ, ಮುಂದಿನ ವರ್ಷ ಶಿವರಾತ್ರಿಗೂ ನಾನೇ ಈ ಪ್ರಶಸ್ತಿ ಪ್ರದಾನ ಮಾಡಲಿದ್ದೇನೆ. ಇದು ಮೋದಿ ಗ್ಯಾರಂಟಿ ಎನ್ನುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತಪಡಿಸಿದರು.ಇಡೀ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅತ್ಯಂತ ಮನರಂಜನಾತ್ಮಕವಾಗಿದ್ದರು. . ಹೆಚ್ಚಿನ ಎಲ್ಲಾ ಕಂಟೆಂಟ್ ಕ್ರಿಯೆಟರ್‌ಗಳು ವೇದಿಕೆಗೆ ಬರುವಾಗ ಅವರ ಕಾರ್ಯಕ್ರಮದ ವಿಶೇಷತೆಗಳನ್ನು ಮೋದಿ ಹೇಳುತ್ತಿದ್ದರು. ಅದರೊಂದಿಗೆ ತಾವು ಸ್ಪೂರ್ತಿದಾಯಕ ಅಂಶಗಳಿರುವ ಕಂಟೆಂಟ್‌ಗಳನ್ನೇ ಇಷ್ಟಪಡುವುದಾಗಿ ತಿಳಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

11 hours ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago