ಕುಂದಾಪುರ:ಯಾರು ನಿರೀಕ್ಷಿಸದ ರೀತಿಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಮನಸ್ಸಿಗೆ ಬಹಳಷ್ಟು ನೋವಾಗಿದೆ.ಬೋಟ್ ಮತ್ತು ದೋಣಿಯನ್ನು ಕಳೆದು ಕೊಂಡವರ ನೋವು ತಮ್ಮ ವಾಸದ ಮನೆಯನ್ನೆ ಕಳೆದುಕೊಂಡಷ್ಟು ಇರುತ್ತದೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮೀನುಗಾರರ ನೋವಿಗೆ ಸ್ಪಂದನೆ ಮಾಡುವುದು ನಮ್ಮ ಸರಕಾರದ ಆದ್ಯ ಕರ್ತವ್ಯ ಕೂಡ ಆಗಿತ್ತು.ಕಟ್ಟಕಡೆಯ ಮೀನುಗಾರರ ಕಣ್ಣಿರನ್ನು ಒರೆಸುವ ನಿಟ್ಟಿನಲ್ಲಿ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರವನ್ನು ನೀಡಿದ್ದು.ಕೆಲವೊಂದು ತಾಂತ್ರಿಕ ಕಾರಣಗಳಿಂದ ಪರಿಹಾರವನ್ನು ನೀಡುವಲ್ಲಿ ವಿಳಂಬವಾಗಿದೆ ಎಂದು ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
ಕರ್ನಾಟಕ ಸರಕಾರ,ಮೀನುಗಾರಿಕೆ ಇಲಾಖೆ ವತಿಯಿಂದ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಕೆ ಬಂದರಿನಲ್ಲಿ ಭಾನುವಾರ ನಡೆದ ಸಂತ್ರಸ್ತ ಮೀನುಗಾರರಿಗೆ ಪರಿಹಾರ ವಿತರಣೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ,ಸಮುದ್ರದ ಸಂಪತ್ತನ್ನು ನೋಡಿ ಬದುಕನ್ನು ಕಟ್ಟಿಕೊಂಡವರು ಮೀನುಗಾರರು ಮೀನುಗಾರಿಕೆ ಎನ್ನುವುದು ಅವರ ಜೀವನದ ಅಂಗವಾಗಿದೆ.ಕರಾವಳಿ ಭಾಗದ ಆರ್ಥಿಕ ಚೈತನ್ಯದ ಮೂಲವಾಗಿರುವ ಮೀನುಗಾರಿಕಾ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ರಾಜ್ಯ ಸರಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಮೀನುಗಾರರ ಮನೆ ಬಾಗಿಲಿಗೆ ಮುಟ್ಟುವಂತೆ ಆಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ,ಇನ್ಸುರೆನ್ಸ್ ಮಾಡಿಕೊಳ್ಳುವುದರಿಂದ ದುರಂತದ ಸಮಯದಲ್ಲಿ ಹೆಚ್ಚಿನ ಆರ್ಥಿಕ ನಷ್ಟವನ್ನು ತಪ್ಪಿಸಬಹುದಾಗಿದೆ.ಕೇಂದ್ರ ಸರಕಾರ ಸಾಮೂಹಿಕ ಜನತಾ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ ಇದನ್ನು ಎಲ್ಲರೂ ಬಳಸಿಕೊಳ್ಳುವಂತೆ ಆಗಬೇಕು ಎಂದರು.ಸಮುದ್ರ ಮತ್ತು ಬಂದರು ಭಾಗದಲ್ಲಿ ವಾಸಿಸುವ ಮೀನುಗಾರರಿಗೆ 94.ಸಿ ಅಡಿಯಲ್ಲಿ ಮನೆ ಕಟ್ಟಿಕೊಳ್ಳುವಂತೆ ಕಾನೂನು ಜಾರಿಗೆ ತರಲು ಕ್ರಮಕೈಗೊಳ್ಳುವಂತೆ ಸಚಿವರಲ್ಲಿ ವಿನಂತಿಸಿದರು.
ಅಪರ ಜಿಲ್ಲಾಧಿಕಾರಿ ಮಮತಾ ದೇವಿ,ಸಂಕಷ್ಟ ಮೀನುಗಾರರ ಸಮಿತಿ ಸದಸ್ಯ ಮದನ್ ಕುಮಾರ್,ವ್ಯವಸ್ಥಾಪಕ ನಿರ್ದೇಶಕ ಗಣೇಶ.ಕೆ,ಹಸಿಮೀನಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜನಾರ್ದನ ಖಾರ್ವಿ,ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ,ನಾಡದೋಣಿ ಸಂಘದ ಅಧ್ಯಕ್ಷ ಯಶವಂತ ಗಂಗೊಳ್ಳಿ,ಆನಂದ ಖಾರ್ವಿ,ಸೌಪರ್ಣಿಕಾ ಬಸವ ಖಾರ್ವಿ,ವೆಂಕರಮಣ ಖಾರ್ವಿ,ಮೀನುಗಾರಿಕೆ ಉಪ ನಿರ್ದೇಶಕಿ ಅಚಿಜನಾದೇವಿ,ಸಹಾಯಕ ನಿರ್ದೇಶಕಿ ಕುಂದಾಪುರ ಸುಮಲತಾ,ಉಪ ನಿರ್ದೇಶಕ ಗಂಗೊಳ್ಳಿ ಬಂದರು ಸಂಜೀವ ಅರಕೇರಿ
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…