ಕುಂದಾಪುರ

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವರಿಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ

Share

Advertisement
Advertisement

ಕುಂದಾಪುರ:ಜಗತ್ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ,ಶತ ಚಂಡಿಯಾಗ,2016 ಗಣಹೋಮ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆ ಕಾಣಿಗೆ ಹಾಗೂ ಬೆಳ್ಳಿ ರಥ ಮೆರವಣಿಗೆ ಭಾನುವಾರ ಅದ್ದೂರಿಯಾಗಿ ನಡೆಯಿತು.
ಶ್ರೀದೇವರ ಬೆಳ್ಳಿ ರಥ ಮೆರವಣಿಗೆ ಹಾಗೂ ಹಸಿರು ಹೊರೆ ಕಾಣಿಕೆ ಮೆರವಣಿಗೆ ಅಂಗವಾಗಿ ಭಜನಾ ತಂಡಗಳಿಂದ ಭಜನಾ ಕುಣಿತ,ಚೆಂಡೆವಾದನ,ವಾದ್ಯಗೋಷ್ಠಿ,ನಾಶಿಕ್ ಡೋಲು ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.ಮಹಿಳೆಯರು ಪೂರ್ಣಕುಂಭ ಕಳಶದೊಂದಿಗೆ ಶ್ರೀದೆವರ ಬೆಳ್ಳಿರಥ ಹಾಗೂ ಹಸಿರು ಹೊರೆ ಕಾಣಿಕೆಯನ್ನು ಬರಮಾಡಿಕೊಂಡರು.
ಶ್ರೀಹಟ್ಟಿಯಂಗಡಿ ದೇವಸ್ಥಾನದ ಧರ್ಮದರ್ಶಿಗಳಾದ ಹೆಚ್.ಬಾಲಚಂದ್ರ ಭಟ್ಟ ಮಾತನಾಡಿ,ನೂತನ ದೇವಾಲಯ ಲೋಕರ್ಪಣೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ಹೊರೆ ಕಾಣಿಕೆಯನ್ನು ನೀಡಿದ ಗ್ರಾಮಸ್ಥರು ಹಾಗೂ ಎಲ್ಲಾ ಭಕ್ತಾಭಿಮಾನಿಗಳಿಗೆ ಶ್ರೀ ಸಿದ್ಧಿವಿನಾಯಕ ದೇವರು ಒಳಿತನ್ನು ಮಾಡಲಿ ಎಂದು ಶುಭಹಾರೈಸಿದರು.ಮಾರ್ಚ್ 13 ರಿಂದ ಮಾರ್ಚ್ 17 ರ ತನಕ ನಡೆಯಲಿರುವ ದೇವತಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೇಳಿಕೊಂಡರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ರಮಾದೇವಿ ರಾಮಚಂದ್ರ ಭಟ್ಟ,ಪದಾಧಿಕಾರಿಗು,ಗ್ರಾಮಸ್ಥರು ,ಕಾರ್ಯಕ್ರಮದ ಮೇಲ್ವಿಚಾರಕರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

15 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago