ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಕೋಣ್ಕಿ ನಿವಾಸಿ ಚಂದ್ರಕಾಂತಿ ಮತ್ತು ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಡಿಕೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಅದ್ದೂರಿಯಾಗಿ ನಡೆಯಿತು.ಶ್ರೀದೇವರ ಮೂರ್ತಿಯನ್ನು ಕೋಣ್ಕಿ ಮಹಾವಿಷ್ಣು ದೇವಸ್ಥಾನದಿಂದ ಕಡಿಕೆ ಶ್ರೀಉಮಾಮಹೇಶ್ವರ ದೇವಸ್ಥಾನದ ವರೆಗೆ ಭವ್ಯ ಮೆರವಣಿಗೆ ಮೂಲಕ ಪೂರ್ಣಕುಂಭ ಕಳಶ,ಚಂಡೆವಾದನದೊಂದಿಗೆ ಬರಮಾಡಿಕೊಳ್ಳಲಾಯಿತು.
ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮದ ಅಂಗವಾಗಿ ಶತರುದ್ರಾಭೀಷೇಕ,ಮಹಾಮಂಗಳಾರತಿ,ಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ,ಶೋಭಾನೆ ಹಾಡು,ಗಾನಸಾರಥಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಸಾರಥ್ಯದಲ್ಲಿ ದಕ್ಷಧ್ವರ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರುಗಿತು.ಸಂಜೆ ಶ್ರೀದೇವರ ಶಯನೋತ್ಸವ ಕಾರ್ಯಕ್ರಮ ನಡೆಯಿತು.
ನಿತೀಶ್ ಶೆಟ್ಟಿ ಜಡ್ಡಾಡಿ ಅವರು ಶ್ರೀಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮದ ಕುರಿತು ಮಾತನಾಡಿ,ಪರಮಾತ್ಮನಾದ ಶ್ರೀಶಂಕರ ಮತ್ತು ಗಿರಿಜಾ ದೇವಿಯ ಕಲ್ಯಾಣವನ್ನು ನೋಡುವ ಸೌಭಾಗ್ಯ ನಮಗೆ ದೊರೆತ್ತಿರುವುದು ನಮ್ಮ ಪೂರ್ವ ಜನ್ಮದ ಪುಣ್ಯದ ಫಲವಾಗಿದೆ.ಇವೊಂದು ದೇವತಾ ಕಾರ್ಯ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಗ್ರಾಮಸ್ಥರಿಗೆ ಕುಟುಂಬದವರ ಪರವಾಗಿ ಧನ್ಯವಾದವನ್ನು ಅರ್ಪಿಸಿದರು.ಈ ಸಂದರ್ಭದಲ್ಲಿ ಚಂದ್ರಕಾಂತಿ ಮತ್ತು ಸುಧಾಕರ ಶಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು.
ಭವ್ಯ ಮೆರವಣಿಗೆ ಮೂಲಕ ಶ್ರೀದೇವರ ಜಲಸ್ತಂಭನ ಕಾರ್ಯ ಸೌಪರ್ಣಿಕಾ ನದಿಯಲ್ಲಿ ಮಂಗಳವಾರ ಸಂಜೆ ನಡೆಯಲಿದೆ.ಆ ಪ್ರಯುಕ್ತ ರುದ್ರಹೋಮ,ಪ್ರಸಾದ ವಿತರಣೆ,ಭಜನಾ ಕಾರ್ಯಕ್ರಮ ಜರುಗಲಿದೆ.
ವರದಿ -ಜಗದೀಶ ದೇವಾಡಿಗ
ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಬಿತ್ತರಿಸಲು ಸಂಪರ್ಕಿಸಿ-9916284048
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…