ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಕೋಣ್ಕಿ ನಿವಾಸಿ ಚಂದ್ರಕಾಂತಿ ಮತ್ತು ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಡಿಕೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಅದ್ದೂರಿಯಾಗಿ ನಡೆಯಿತು.ಶ್ರೀದೇವರ ಮೂರ್ತಿಯನ್ನು ಕೋಣ್ಕಿ ಮಹಾವಿಷ್ಣು ದೇವಸ್ಥಾನದಿಂದ ಕಡಿಕೆ ಶ್ರೀಉಮಾಮಹೇಶ್ವರ ದೇವಸ್ಥಾನದ ವರೆಗೆ ಭವ್ಯ ಮೆರವಣಿಗೆ ಮೂಲಕ ಪೂರ್ಣಕುಂಭ ಕಳಶ,ಚಂಡೆವಾದನದೊಂದಿಗೆ ಬರಮಾಡಿಕೊಳ್ಳಲಾಯಿತು.
ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮದ ಅಂಗವಾಗಿ ಶತರುದ್ರಾಭೀಷೇಕ,ಮಹಾಮಂಗಳಾರತಿ,ಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ,ಶೋಭಾನೆ ಹಾಡು,ಗಾನಸಾರಥಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಸಾರಥ್ಯದಲ್ಲಿ ದಕ್ಷಧ್ವರ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರುಗಿತು.ಸಂಜೆ ಶ್ರೀದೇವರ ಶಯನೋತ್ಸವ ಕಾರ್ಯಕ್ರಮ ನಡೆಯಿತು.
ನಿತೀಶ್ ಶೆಟ್ಟಿ ಜಡ್ಡಾಡಿ ಅವರು ಶ್ರೀಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮದ ಕುರಿತು ಮಾತನಾಡಿ,ಪರಮಾತ್ಮನಾದ ಶ್ರೀಶಂಕರ ಮತ್ತು ಗಿರಿಜಾ ದೇವಿಯ ಕಲ್ಯಾಣವನ್ನು ನೋಡುವ ಸೌಭಾಗ್ಯ ನಮಗೆ ದೊರೆತ್ತಿರುವುದು ನಮ್ಮ ಪೂರ್ವ ಜನ್ಮದ ಪುಣ್ಯದ ಫಲವಾಗಿದೆ.ಇವೊಂದು ದೇವತಾ ಕಾರ್ಯ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಗ್ರಾಮಸ್ಥರಿಗೆ ಕುಟುಂಬದವರ ಪರವಾಗಿ ಧನ್ಯವಾದವನ್ನು ಅರ್ಪಿಸಿದರು.ಈ ಸಂದರ್ಭದಲ್ಲಿ ಚಂದ್ರಕಾಂತಿ ಮತ್ತು ಸುಧಾಕರ ಶಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು.
ಭವ್ಯ ಮೆರವಣಿಗೆ ಮೂಲಕ ಶ್ರೀದೇವರ ಜಲಸ್ತಂಭನ ಕಾರ್ಯ ಸೌಪರ್ಣಿಕಾ ನದಿಯಲ್ಲಿ ಮಂಗಳವಾರ ಸಂಜೆ ನಡೆಯಲಿದೆ.ಆ ಪ್ರಯುಕ್ತ ರುದ್ರಹೋಮ,ಪ್ರಸಾದ ವಿತರಣೆ,ಭಜನಾ ಕಾರ್ಯಕ್ರಮ ಜರುಗಲಿದೆ.
ವರದಿ -ಜಗದೀಶ ದೇವಾಡಿಗ
ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಬಿತ್ತರಿಸಲು ಸಂಪರ್ಕಿಸಿ-9916284048
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…