ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಕೋಣ್ಕಿ ನಿವಾಸಿ ಚಂದ್ರಕಾಂತಿ ಮತ್ತು ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಡಿಕೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಅದ್ದೂರಿಯಾಗಿ ನಡೆಯಿತು.ಶ್ರೀದೇವರ ಮೂರ್ತಿಯನ್ನು ಕೋಣ್ಕಿ ಮಹಾವಿಷ್ಣು ದೇವಸ್ಥಾನದಿಂದ ಕಡಿಕೆ ಶ್ರೀಉಮಾಮಹೇಶ್ವರ ದೇವಸ್ಥಾನದ ವರೆಗೆ ಭವ್ಯ ಮೆರವಣಿಗೆ ಮೂಲಕ ಪೂರ್ಣಕುಂಭ ಕಳಶ,ಚಂಡೆವಾದನದೊಂದಿಗೆ ಬರಮಾಡಿಕೊಳ್ಳಲಾಯಿತು.
ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮದ ಅಂಗವಾಗಿ ಶತರುದ್ರಾಭೀಷೇಕ,ಮಹಾಮಂಗಳಾರತಿ,ಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ,ಶೋಭಾನೆ ಹಾಡು,ಗಾನಸಾರಥಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಸಾರಥ್ಯದಲ್ಲಿ ದಕ್ಷಧ್ವರ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರುಗಿತು.ಸಂಜೆ ಶ್ರೀದೇವರ ಶಯನೋತ್ಸವ ಕಾರ್ಯಕ್ರಮ ನಡೆಯಿತು.
ನಿತೀಶ್ ಶೆಟ್ಟಿ ಜಡ್ಡಾಡಿ ಅವರು ಶ್ರೀಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮದ ಕುರಿತು ಮಾತನಾಡಿ,ಪರಮಾತ್ಮನಾದ ಶ್ರೀಶಂಕರ ಮತ್ತು ಗಿರಿಜಾ ದೇವಿಯ ಕಲ್ಯಾಣವನ್ನು ನೋಡುವ ಸೌಭಾಗ್ಯ ನಮಗೆ ದೊರೆತ್ತಿರುವುದು ನಮ್ಮ ಪೂರ್ವ ಜನ್ಮದ ಪುಣ್ಯದ ಫಲವಾಗಿದೆ.ಇವೊಂದು ದೇವತಾ ಕಾರ್ಯ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಗ್ರಾಮಸ್ಥರಿಗೆ ಕುಟುಂಬದವರ ಪರವಾಗಿ ಧನ್ಯವಾದವನ್ನು ಅರ್ಪಿಸಿದರು.ಈ ಸಂದರ್ಭದಲ್ಲಿ ಚಂದ್ರಕಾಂತಿ ಮತ್ತು ಸುಧಾಕರ ಶಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು.
ಭವ್ಯ ಮೆರವಣಿಗೆ ಮೂಲಕ ಶ್ರೀದೇವರ ಜಲಸ್ತಂಭನ ಕಾರ್ಯ ಸೌಪರ್ಣಿಕಾ ನದಿಯಲ್ಲಿ ಮಂಗಳವಾರ ಸಂಜೆ ನಡೆಯಲಿದೆ.ಆ ಪ್ರಯುಕ್ತ ರುದ್ರಹೋಮ,ಪ್ರಸಾದ ವಿತರಣೆ,ಭಜನಾ ಕಾರ್ಯಕ್ರಮ ಜರುಗಲಿದೆ.
ವರದಿ -ಜಗದೀಶ ದೇವಾಡಿಗ
ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಬಿತ್ತರಿಸಲು ಸಂಪರ್ಕಿಸಿ-9916284048
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…