ಕುಂದಾಪುರ

ಹಟ್ಟಿಯಂಗಡಿ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ನೂತನ ದೇವಾಲಯ ಲೋಕಾರ್ಪಣೆ

Share

ಕುಂದಾಪುರ:ಉಡುಪಿ ಜಿಲ್ಲೆಯ ಪ್ರಸಿದ್ಧ ಕುಂದಾಪುರ ತಾಲೂಕಿನ ‌ಶ್ರೀ ಸಿದ್ಧಿವಿನಾಯಕ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ, ಬ್ರಹ್ಮಕಲಶೋತ್ಸವ ಕಾರ್ಯಕ್ರಮ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳ ಫರ್ಮಾನುಗ್ರಹದಿಂದ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ನೇತೃತ್ವದಲ್ಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು.ಮಹಾ ಅನ್ನಸಂತರ್ಪಣೆ, ಶ್ರೀದೇವರ ಬೆಳ್ಳಿರಥ ಸಮರ್ಪಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿತು.

ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರು ಆಶೀರ್ವಚನ ನೀಡಿ ಮಾತನಾಡಿ,ಪರಿಶುದ್ಧವಾದ ಭಾವನೆಯಿಂದ ನಮ್ಮನ್ನು ದೇವರಿಗೆ ಅರ್ಪಣೆ ಮಾಡಿಕೊಳ್ಳುವುದರಿಂದ ಭಗವಂತನನ್ನು ನೋಡಲು ಸಾಧ್ಯವಿದೆ.ಭಕ್ತಿ ಎನ್ನುವುದು ಅನುಭವಕ್ಕೆ ಬರುವಂತದ್ದು ಆಗಿರಬೇಕು ಅದಕ್ಕೆ ನಾವು ಪ್ರಯತ್ನಿಸಬೇಕು ಎಂದು ಹೇಳಿದರು.ಆಧ್ಯಾತ್ಮಿಕ ಮಾರ್ಗ ಎನ್ನುವುದು ಜೀವನದಲ್ಲಿ ನಮ್ಮನ್ನು ಉತ್ತಮವಾದ ಸ್ಥಾನಕ್ಕೆ ಕರೆದು ಕೊಂಡು ಹೋಗುತ್ತದೆ.ಜೀವನದಲ್ಲಿ ಗುರಿ ಹೊಂದಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ನುಡಿದರು.

ದೇವಸ್ಥಾನದ ಧರ್ಮದರ್ಶಿ ಹೆಚ್.ಬಾಲಚಂದ್ರ ಭಟ್ಟ ಮಾತನಾಡಿ,ಪ್ರಶ್ನಾ ಚಿಂತನಾ ಕಾರ್ಯದ ಮುಖಾಂತರ ದೇವರ ಸನ್ನಿಧಿಯನ್ನು ಜೀರ್ಣೋದ್ಧಾರ ಮಾಡಲಾಗಿದೆ.ದೇವರ ಪೂರ್ಣಾನುಗ್ರಹದಿಂದ ಇವೊಂದು ದೇವತಾ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.ಕ್ಷೇತ್ರದ ಅಭಿವೃದ್ಧಿಗೆ ದಿ.ರಾಮಚಂದ್ರ ಭಟ್ಟ ಅವರ ಕೊಡುಗೆ ಅಪಾರವಾದದ್ದು ಎಂದು ಹೇಳಿದರು.

ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದಾ ಪೀಠಂ ಶೃಂಗೇರಿ, ನಾಗಪಾತ್ರಿಗಳು ಬಡಾಕೆರೆ ಲೋಕೇಶ್ ಅಡಿಗ ಅವರು ಸ್ವಾಗತಿಸಿ ಮಾತನಾಡಿ,26 ವರ್ಷಗಳ ಹಿಂದೆ ಜಗದ್ಗುರುಗಳು ಕ್ಷೇತ್ರಕ್ಕೆ ಭೇಟಿ ನೀಡಿ ದೇವತಾ ಕಾರ್ಯದಲ್ಲಿ ಭಾಗಿಯಾಗಿದ್ದರು ಅವರ ಪೂರ್ಣಾನುಗ್ರಹದಿಂದ ಶ್ರೀ ಕ್ಷೇತ್ರ ಅಭಿವೃದ್ಧಿಗೊಂಡು ಜಗತ್ ಪ್ರಸಿದ್ಧಿ ಹೊಂದಿದೆ ಎಂದರು.ಶರಣ ಕುಮಾರ್ ಭಟ್ಟ ನಿರೂಪಿಸಿದರು.ಈ ಸಂದರ್ಭದಲ್ಲಿ ಭಕ್ತಾದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರು ಶ್ರೀ ದೇವರ ಪ್ರಸನ್ನ ಪೂಜೆ ನೆರವೇರಿಸಿ, ನೂತನ ದೇವಾಲಯದ ಲೋಕಾರ್ಪಣೆ,ಶಿಖರ ಕಲಶಸ್ಥಾಪನೆ, ಅಭಿಷೇಕ ಸೇವೆಯನ್ನು ನೆರವೇರಿಸಿದರು.

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago