ಕುಂದಾಪುರ

ಹಟ್ಟಿಯಂಗಡಿ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ನೂತನ ದೇವಾಲಯ ಲೋಕಾರ್ಪಣೆ

Share

ಕುಂದಾಪುರ:ಉಡುಪಿ ಜಿಲ್ಲೆಯ ಪ್ರಸಿದ್ಧ ಕುಂದಾಪುರ ತಾಲೂಕಿನ ‌ಶ್ರೀ ಸಿದ್ಧಿವಿನಾಯಕ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ, ಬ್ರಹ್ಮಕಲಶೋತ್ಸವ ಕಾರ್ಯಕ್ರಮ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳ ಫರ್ಮಾನುಗ್ರಹದಿಂದ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ನೇತೃತ್ವದಲ್ಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು.ಮಹಾ ಅನ್ನಸಂತರ್ಪಣೆ, ಶ್ರೀದೇವರ ಬೆಳ್ಳಿರಥ ಸಮರ್ಪಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿತು.

ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರು ಆಶೀರ್ವಚನ ನೀಡಿ ಮಾತನಾಡಿ,ಪರಿಶುದ್ಧವಾದ ಭಾವನೆಯಿಂದ ನಮ್ಮನ್ನು ದೇವರಿಗೆ ಅರ್ಪಣೆ ಮಾಡಿಕೊಳ್ಳುವುದರಿಂದ ಭಗವಂತನನ್ನು ನೋಡಲು ಸಾಧ್ಯವಿದೆ.ಭಕ್ತಿ ಎನ್ನುವುದು ಅನುಭವಕ್ಕೆ ಬರುವಂತದ್ದು ಆಗಿರಬೇಕು ಅದಕ್ಕೆ ನಾವು ಪ್ರಯತ್ನಿಸಬೇಕು ಎಂದು ಹೇಳಿದರು.ಆಧ್ಯಾತ್ಮಿಕ ಮಾರ್ಗ ಎನ್ನುವುದು ಜೀವನದಲ್ಲಿ ನಮ್ಮನ್ನು ಉತ್ತಮವಾದ ಸ್ಥಾನಕ್ಕೆ ಕರೆದು ಕೊಂಡು ಹೋಗುತ್ತದೆ.ಜೀವನದಲ್ಲಿ ಗುರಿ ಹೊಂದಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ನುಡಿದರು.

ದೇವಸ್ಥಾನದ ಧರ್ಮದರ್ಶಿ ಹೆಚ್.ಬಾಲಚಂದ್ರ ಭಟ್ಟ ಮಾತನಾಡಿ,ಪ್ರಶ್ನಾ ಚಿಂತನಾ ಕಾರ್ಯದ ಮುಖಾಂತರ ದೇವರ ಸನ್ನಿಧಿಯನ್ನು ಜೀರ್ಣೋದ್ಧಾರ ಮಾಡಲಾಗಿದೆ.ದೇವರ ಪೂರ್ಣಾನುಗ್ರಹದಿಂದ ಇವೊಂದು ದೇವತಾ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.ಕ್ಷೇತ್ರದ ಅಭಿವೃದ್ಧಿಗೆ ದಿ.ರಾಮಚಂದ್ರ ಭಟ್ಟ ಅವರ ಕೊಡುಗೆ ಅಪಾರವಾದದ್ದು ಎಂದು ಹೇಳಿದರು.

ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದಾ ಪೀಠಂ ಶೃಂಗೇರಿ, ನಾಗಪಾತ್ರಿಗಳು ಬಡಾಕೆರೆ ಲೋಕೇಶ್ ಅಡಿಗ ಅವರು ಸ್ವಾಗತಿಸಿ ಮಾತನಾಡಿ,26 ವರ್ಷಗಳ ಹಿಂದೆ ಜಗದ್ಗುರುಗಳು ಕ್ಷೇತ್ರಕ್ಕೆ ಭೇಟಿ ನೀಡಿ ದೇವತಾ ಕಾರ್ಯದಲ್ಲಿ ಭಾಗಿಯಾಗಿದ್ದರು ಅವರ ಪೂರ್ಣಾನುಗ್ರಹದಿಂದ ಶ್ರೀ ಕ್ಷೇತ್ರ ಅಭಿವೃದ್ಧಿಗೊಂಡು ಜಗತ್ ಪ್ರಸಿದ್ಧಿ ಹೊಂದಿದೆ ಎಂದರು.ಶರಣ ಕುಮಾರ್ ಭಟ್ಟ ನಿರೂಪಿಸಿದರು.ಈ ಸಂದರ್ಭದಲ್ಲಿ ಭಕ್ತಾದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರು ಶ್ರೀ ದೇವರ ಪ್ರಸನ್ನ ಪೂಜೆ ನೆರವೇರಿಸಿ, ನೂತನ ದೇವಾಲಯದ ಲೋಕಾರ್ಪಣೆ,ಶಿಖರ ಕಲಶಸ್ಥಾಪನೆ, ಅಭಿಷೇಕ ಸೇವೆಯನ್ನು ನೆರವೇರಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

8 hours ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago