ಕುಂದಾಪುರ

ಹಟ್ಟಿಯಂಗಡಿ:ನಂಬಿಕೆಗಳು ಧರ್ಮವನ್ನು ಕಾಪಾಡುತ್ತದೆ:ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮೀಜಿ

Share

Advertisement
Advertisement
Advertisement

ಕುಂದಾಪುರ:ಮಾ.13 ರಿಂದ ಮಾ.17 ರ ವರೆಗೆ ನಡೆಯುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿಯ ನೂತನ ದೇವಾಲಯ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ, ಶತಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮ ನಡೆಯಲಿದ್ದು ಮಾ.13 ರಂದು ಬೆಳಿಗ್ಗೆ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಪರಮಾನುಗ್ರಹದಿಂದ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಆಗಮಿಸಿ ನೂತನ ದಏವಾಲಯದ ಲೋಕಾರ್ಪಣೆ, ಶಿಖರ ಕಲಶಸ್ಥಾಪನೆ, ಅಭಿಷೇಕ ನೆರವೇರಿಸಿದರು.

Advertisement

ರಾಜಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ದೇವರಿಗೆ ಬೆಳ್ಳಿ ರಥವನ್ನು ಸಮರ್ಪಿಸಿ ನಂತರ ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿ,ಇಂದು ಈ ಕ್ಷೇತ್ರವು ಸುಂದರವಾಗಿ ಮೂಡಿಬಂದು ಇಂದು ಲೋಕಾರ್ಪಣೆ ಗೊಂಡಿರುವುದು ಖುಷಿ ನೀಡಿದೆ, ಕ್ಷೇತ್ರಕ್ಕೆ ಬೆಳ್ಳಿರ ರಥವನ್ನು ಇಂದು ಸಮರ್ಪಣೆಯಾಗಿದೆ,ನಾವು ದೇವರಿಗೆ ನೀಡುವಾಗ ಪವಿತ್ರವಾದುದನ್ನೇ ನೀಡಬೇಕು ಎಂತಹ ಶ್ರೀಮಂತನೂ ಕೂಡ ಐಶಾರಾಮಿ ಕಾರುಗಳಲ್ಲಿ ಓಡಾಟ ಮಾಡಬಹುದು ಆದರೆ ರಥದಲ್ಲಿ ಓಡಾಟ ಮಾಡಲಾಗದು ಅಂತಹ ಶ್ರೇಷ್ಟವಾದ ವಾಹನ ರಥವಾಗಿದ್ದು ಅದು ಕೇವಲ ದೇವರಿಗೆ ಮಾತ್ರ,ಅಂತರಂಗ ಮತ್ತು ಬಹಿರಂಗ ದರ್ಶನ ಕೇವಲ ಭಗವಂತ ಮಾತ್ರ ಬಲ್ಲನು ಎಂದರು.

ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮೀಜಿಗಳು ಆಶೀರ್ವಚನ ನೀಡಿ,ನಿರಾಕಾರ ರೂಪನಾದ ದೇವರಿಗೆ ಮೂರ್ತಿ ರೂಪಕೊಟ್ಟು ನಾವು ಪೂಜಿಸುತ್ತೇವೆ,ನಾವು ದೇವರನ್ನು ಮೂರ್ತಿರೂಪದಲ್ಲಿ ಕಂಡು ಪೂಜೆ ಮಾಡುವ ಮೂಲಕ ಭಾವನೆಗಳಿಗನುಗುಣವಾಗಿ ದೇವರನ್ನು ಕಂಡುಕೊಳ್ಳುತ್ತಿದ್ದೇವೆ,ಅಂದು ರಾಮಚಂದ್ರ ಭಟ್ಟರ ಕಾಲದಲಿ ಈ ಕ್ಷೇತ್ರವು ತುಂಬಾ ಅಭಿವೃದ್ಧಿಯನ್ನು ಕಂಡುಕೊಂಡಿದೆ ಇಂದು ಅವರ ಪುತ್ರ ಬಾಲಚಂದ್ರ ಭಟ್ಟರ ನೇತೃತ್ವದಲ್ಲಿ ಮತ್ತಷ್ಟು ಅಭಿವೃದ್ಧಿಯನ್ನು ಕಂಡುಕೊಳ್ಳುತ್ತಿದೆ,ಈ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಗೊಳ್ಳುವಂತಾಗಲಿ ,ನಂಬಿಕೆಗಳು ಧರ್ಮವನ್ನು ಕಾಪಾಡುತ್ತದೆ ದೇವರಲ್ಲಿ ನಂಬಿಕೆ ಇಟ್ಟಾಗ ನಮ್ಮ ಧರ್ಮಗಳು ಉಳಿಯುತ್ತದೆ ಎಂದರು.
ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ,ಹಟ್ಟಿಯಂಗಡಿ ಇದರ ಅಧ್ಯಕ್ಷ ಎಲ್.ಟಿ.ತಿಮ್ಮಪ್ಪ ಸಾಗರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು,ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಬಿ. ಅಪ್ಪಣ್ಣ ಹೆಗ್ಡೆ,ಉಧ್ಯಮಿ ಆನಂದ ಸಿ.ಕುಂದರ್,ಉಧ್ಯಮಿ ಸುಬ್ಬರಾವ್, ಬಗ್ವಾಡಿ ಮಹಿಷಾಮರ್ದಿನಿ ದೇವಸ್ಥಾನದ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ ಮೊಗವೀರ,ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಬಾಲಚಂದ್ರ ಭಟ್ಟ ಉಪಸ್ಥಿತರಿದ್ದರು.
ಈ ಸಂದರ್ಭ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿ ಇದರ ಕಾರ್ಯದರ್ಶಿ ಶರಣ ಕುಮಾರ ಇವರನ್ನು ಗೌರವಾರ್ಪಣೆಯಲ್ಲಿ ಗೌರವಿಸಲಾಯಿತು.
ಬಾಲಚಂದ್ರ ಭಟ್ಟ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿ ಎಲ್ಲರನ್ನು ಸ್ವಾಗತಿಸಿದರು,ಲಕ್ಷ್ಮೀ ಮಚ್ಚೀನ್ ಕಾರ್ಯಕ್ರಮ ನಿರೂಪಿಸಿದರು.

ಮಾ.14 ರಂದು ಲಕ್ಷ್ಮ ಮೋದಕ ಹವನ ಮುಂದುವರಿದು ಬೆಳಿಗ್ಗೆ 8 ರಿಂದ ಶ್ರೀ ಸೂಕ್ತ ಹವನ, ಪುರುಷಸೂಕ್ತ ಹವನ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಹಾಗೂ ಹವನ ಧನ್ವತರಿ ಹವನ ಬೆಳಿಗ್ಗೆ 10 ಕ್ಕೆ ಪರಮಪೂಜ್ಯ ಶ್ರೀ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಮ್ ಇವರು ಆಗಮಿಸಿ ಶ್ರೀ ದೇವರಿಗೆ ಪೂಜೆ ನೆರವೇರಿಸಿ, ಆಶೀರ್ವಚನ, ಮಂತ್ರಾಕ್ಷತೆ ನೀಡಲಿದ್ದಾರೆ. ಸಂಜೆ 6 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ. ಗೋಕರ್ಣ ಪರ್ತಗಾಳಿ ಮಠದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಗಳು ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಉಪಸ್ಥಿತರಿರುವರು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

5 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 week ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago