ಕುಂದಾಪುರ

ಹಟ್ಟಿಯಂಗಡಿ:ಧಾರ್ಮಿಕ ಸಭಾ ಕಾರ್ಯಕ್ರಮ ಮಹಾ ಅನ್ನಸಂತರ್ಪಣೆ

Share

Advertisement
Advertisement

ಕುಂದಾಪುರ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ ,ಲಕ್ಷ ಮೋದಕ ಹವನ,
ಶತ ಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮದ ಅಂಗವಾಗಿ ಬುಧವಾರ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಿ ಮಾತನಾಡಿ,ಕಾರವಳಿಯಲ್ಲಿರುವ ಅನೇಕ ಸನ್ನಿಧಾನಗಳು ಭಕ್ತರಿಗೆ ಭಕ್ತಿಯ ಸಿಂಚನವನ್ನು ಮಾಡುತ್ತಿವೆ.ನಮ್ಮ ಅನೇಕ ಸಿದ್ಧಾಂತಗಳು ಆಸ್ತಿಕ ಮನೋಭಾವನೆಗಳನ್ನು ಮೂಡಿಸುತ್ತವೆ.ನಾವು ಧರ್ಮ ಮಾರ್ಗ ದಿಂದ ನಡೆದರೆ ಮಾತ್ರ ನಮಗೆ ಯಶಸ್ಸು ಸಾಧ್ಯ‌ ಎಂದರು.
ಭಗವಂತನ ಮೇಲೆ ನಮಗೆ ಭಕ್ತಿ ಇದ್ದಾಗ ಮಾತ್ರ ಧರ್ಮ ಮಾರ್ಗದಲ್ಲಿ ನಡೆಯಬಹುದು. ನಾವು ಯಾರ ಕಣ್ಣೂ ತಪ್ಪಿಸುವುದಕ್ಕೆ ಸಾಧ್ಯ ಆದರೆ ಭಗವಂತನ ಕಣ್ಣೂ ತಪ್ಪಿಸಲಾಗದು.ಧಾರ್ಮಿಕ ಪ್ರಜ್ಞೆಯೊಂದಿಗೆ ನಮ್ಮ ಬದುಕು ಇರಬೇಕು ಎಂದು ಹೇಳಿದರು.

Advertisement

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹಾಗೂ ಬಸರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಬೀ. ಅಪ್ಪಣ್ಣ ಹೆಗಡೆ ಮಾತನಾಡಿ,ನಾವು ಇಂದು ಹಣದ ಹಿಂದೆ ಬಿದ್ದಿರುವುದು ಧಾರ್ಮಿಕ ಶ್ರದ್ಧೆ ಕಡಿಮೆಯಾಗಲು ಕಾರಣವಾಗಿದೆ.ಸಂಸ್ಕಾರ ಇಲ್ಲದೆ ಇರುವುದರಿಂದ ಕುಟುಂಬದಲ್ಲಿ ಭಿನ್ನ ಭಿನ್ನ ವಾತಾವರಣ ಕಾಣುತ್ತಿದ್ದೇವೆ.ಧರ್ಮ ಪ್ರಜ್ಞೆ ಮೂಡಿಸುವ ಮೂಲಕ ಸಮಾಜದಲ್ಲಿ ಸಂಸ್ಕಾರ, ಸಂಸ್ಕೃತಿ ಮೂಡಿಸಬೇಕಾಗಿದೆ ಎಂದು ಕರೆ ನೀಡಿದರು.
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಕೆ. ಸೂರ್ಯನಾರಾಯಣ ಉಪಾಧ್ಯಾಯ ಮಾತನಾಡಿ ಋಷಿಮುನಿಗಳ ಅನುಗ್ರಹದಿಂದ ನಮಗೆ ಈ ಒಂದು ಧಾರ್ಮಿಕ ಕ್ಷೇತ್ರಗಳು ದೊರಕಿವೆ.ನಾವು ಮಾಡುವ ಉತ್ತಮ ಕಾರ್ಯ,ಧರ್ಮ ಕಾರ್ಯ,ಸತ್ಕಾರ್ಯ ಗಳು ನಮಗೆ ಪರಲೋಕದಲ್ಲಿ ಲಭ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಿದ್ದಿ ಶೈಕ್ಷಣಿಕ ಪ್ರತಿಷ್ಟಾನದ ಅಧ್ಯಕ್ಷ ಎಲ್. ಟಿ. ತಿಮ್ಮಪ್ಪ ವಹಿಸಿದ್ದರು. ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮದ ಅಧ್ಯಕ್ಷ ಡಾ ಕೆ.ಎಸ್.ಕಾರಂತ,ಅತಿಶಯ ಜೈನ ಕ್ಷೇತ್ರದ ಮೊಕ್ತೇಸರ ಸುರೇಂದ್ರ ಜೈನ್, ಲೋಕನಾತೇಶ್ವರ ದೇವಸ್ಥಾನದ ಧರ್ಮದರ್ಶಿ ಸನತ್ ಕುಮಾರ್ ರೈ ಮಾತನಾಡಿ ಶುಭ ಹಾರೈಸಿದರು.ದೇವಸ್ಥಾನದ ಧರ್ಮದರ್ಶಿ ವೇ.ಮೂ.ಬಾಲಚಂದ್ರ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿ ಹಲವರ ಉಪಕಾರ ಸ್ಮರಿಸಿದರು.ವೇದಿಕೆಯಲ್ಲಿ ಉದ್ಯಮಿ ಕರುಣಾಕರ ಶೆಟ್ಟಿ,ಶ್ರೀ ಸಿದ್ದಿ ಶೈಕ್ಷಣಿಕ ಪ್ರತಿಷ್ಟಾನದ ಕಾರ್ಯದರ್ಶಿ ಶರಣ ಕುಮಾರ್, ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಶ್ರೀ ಸಿದ್ಧಿವಿನಾಯಕ ಶಾಲೆಯ ಉಪ ಪ್ರಾಂಶುಪಾಲ ರಾಮ ದೇವಾಡಿಗ ನಿರ್ವಹಿಸಿದರು. ರಾಧಾಕೃಷ್ಣ ಭಟ್ಟ ಭಟ್ಕಳ ವಂದಿಸಿದರು.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

17 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

17 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago