ಕುಂದಾಪುರ

ಹಟ್ಟಿಯಂಗಡಿ:ಧಾರ್ಮಿಕ ಸಭಾ ಕಾರ್ಯಕ್ರಮ ಮಹಾ ಅನ್ನಸಂತರ್ಪಣೆ

Share

Advertisement
Advertisement
Advertisement

ಕುಂದಾಪುರ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ ,ಲಕ್ಷ ಮೋದಕ ಹವನ,
ಶತ ಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮದ ಅಂಗವಾಗಿ ಬುಧವಾರ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಿ ಮಾತನಾಡಿ,ಕಾರವಳಿಯಲ್ಲಿರುವ ಅನೇಕ ಸನ್ನಿಧಾನಗಳು ಭಕ್ತರಿಗೆ ಭಕ್ತಿಯ ಸಿಂಚನವನ್ನು ಮಾಡುತ್ತಿವೆ.ನಮ್ಮ ಅನೇಕ ಸಿದ್ಧಾಂತಗಳು ಆಸ್ತಿಕ ಮನೋಭಾವನೆಗಳನ್ನು ಮೂಡಿಸುತ್ತವೆ.ನಾವು ಧರ್ಮ ಮಾರ್ಗ ದಿಂದ ನಡೆದರೆ ಮಾತ್ರ ನಮಗೆ ಯಶಸ್ಸು ಸಾಧ್ಯ‌ ಎಂದರು.
ಭಗವಂತನ ಮೇಲೆ ನಮಗೆ ಭಕ್ತಿ ಇದ್ದಾಗ ಮಾತ್ರ ಧರ್ಮ ಮಾರ್ಗದಲ್ಲಿ ನಡೆಯಬಹುದು. ನಾವು ಯಾರ ಕಣ್ಣೂ ತಪ್ಪಿಸುವುದಕ್ಕೆ ಸಾಧ್ಯ ಆದರೆ ಭಗವಂತನ ಕಣ್ಣೂ ತಪ್ಪಿಸಲಾಗದು.ಧಾರ್ಮಿಕ ಪ್ರಜ್ಞೆಯೊಂದಿಗೆ ನಮ್ಮ ಬದುಕು ಇರಬೇಕು ಎಂದು ಹೇಳಿದರು.

Advertisement

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹಾಗೂ ಬಸರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಬೀ. ಅಪ್ಪಣ್ಣ ಹೆಗಡೆ ಮಾತನಾಡಿ,ನಾವು ಇಂದು ಹಣದ ಹಿಂದೆ ಬಿದ್ದಿರುವುದು ಧಾರ್ಮಿಕ ಶ್ರದ್ಧೆ ಕಡಿಮೆಯಾಗಲು ಕಾರಣವಾಗಿದೆ.ಸಂಸ್ಕಾರ ಇಲ್ಲದೆ ಇರುವುದರಿಂದ ಕುಟುಂಬದಲ್ಲಿ ಭಿನ್ನ ಭಿನ್ನ ವಾತಾವರಣ ಕಾಣುತ್ತಿದ್ದೇವೆ.ಧರ್ಮ ಪ್ರಜ್ಞೆ ಮೂಡಿಸುವ ಮೂಲಕ ಸಮಾಜದಲ್ಲಿ ಸಂಸ್ಕಾರ, ಸಂಸ್ಕೃತಿ ಮೂಡಿಸಬೇಕಾಗಿದೆ ಎಂದು ಕರೆ ನೀಡಿದರು.
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಕೆ. ಸೂರ್ಯನಾರಾಯಣ ಉಪಾಧ್ಯಾಯ ಮಾತನಾಡಿ ಋಷಿಮುನಿಗಳ ಅನುಗ್ರಹದಿಂದ ನಮಗೆ ಈ ಒಂದು ಧಾರ್ಮಿಕ ಕ್ಷೇತ್ರಗಳು ದೊರಕಿವೆ.ನಾವು ಮಾಡುವ ಉತ್ತಮ ಕಾರ್ಯ,ಧರ್ಮ ಕಾರ್ಯ,ಸತ್ಕಾರ್ಯ ಗಳು ನಮಗೆ ಪರಲೋಕದಲ್ಲಿ ಲಭ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಿದ್ದಿ ಶೈಕ್ಷಣಿಕ ಪ್ರತಿಷ್ಟಾನದ ಅಧ್ಯಕ್ಷ ಎಲ್. ಟಿ. ತಿಮ್ಮಪ್ಪ ವಹಿಸಿದ್ದರು. ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮದ ಅಧ್ಯಕ್ಷ ಡಾ ಕೆ.ಎಸ್.ಕಾರಂತ,ಅತಿಶಯ ಜೈನ ಕ್ಷೇತ್ರದ ಮೊಕ್ತೇಸರ ಸುರೇಂದ್ರ ಜೈನ್, ಲೋಕನಾತೇಶ್ವರ ದೇವಸ್ಥಾನದ ಧರ್ಮದರ್ಶಿ ಸನತ್ ಕುಮಾರ್ ರೈ ಮಾತನಾಡಿ ಶುಭ ಹಾರೈಸಿದರು.ದೇವಸ್ಥಾನದ ಧರ್ಮದರ್ಶಿ ವೇ.ಮೂ.ಬಾಲಚಂದ್ರ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿ ಹಲವರ ಉಪಕಾರ ಸ್ಮರಿಸಿದರು.ವೇದಿಕೆಯಲ್ಲಿ ಉದ್ಯಮಿ ಕರುಣಾಕರ ಶೆಟ್ಟಿ,ಶ್ರೀ ಸಿದ್ದಿ ಶೈಕ್ಷಣಿಕ ಪ್ರತಿಷ್ಟಾನದ ಕಾರ್ಯದರ್ಶಿ ಶರಣ ಕುಮಾರ್, ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಶ್ರೀ ಸಿದ್ಧಿವಿನಾಯಕ ಶಾಲೆಯ ಉಪ ಪ್ರಾಂಶುಪಾಲ ರಾಮ ದೇವಾಡಿಗ ನಿರ್ವಹಿಸಿದರು. ರಾಧಾಕೃಷ್ಣ ಭಟ್ಟ ಭಟ್ಕಳ ವಂದಿಸಿದರು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

4 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

7 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago