ಕುಂದಾಪುರ

ಹಟ್ಟಿಯಂಗಡಿ:ಧಾರ್ಮಿಕ ಸಭಾ ಕಾರ್ಯಕ್ರಮ ಮಹಾ ಅನ್ನಸಂತರ್ಪಣೆ

Share

ಕುಂದಾಪುರ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ ,ಲಕ್ಷ ಮೋದಕ ಹವನ,
ಶತ ಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮದ ಅಂಗವಾಗಿ ಬುಧವಾರ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಿ ಮಾತನಾಡಿ,ಕಾರವಳಿಯಲ್ಲಿರುವ ಅನೇಕ ಸನ್ನಿಧಾನಗಳು ಭಕ್ತರಿಗೆ ಭಕ್ತಿಯ ಸಿಂಚನವನ್ನು ಮಾಡುತ್ತಿವೆ.ನಮ್ಮ ಅನೇಕ ಸಿದ್ಧಾಂತಗಳು ಆಸ್ತಿಕ ಮನೋಭಾವನೆಗಳನ್ನು ಮೂಡಿಸುತ್ತವೆ.ನಾವು ಧರ್ಮ ಮಾರ್ಗ ದಿಂದ ನಡೆದರೆ ಮಾತ್ರ ನಮಗೆ ಯಶಸ್ಸು ಸಾಧ್ಯ‌ ಎಂದರು.
ಭಗವಂತನ ಮೇಲೆ ನಮಗೆ ಭಕ್ತಿ ಇದ್ದಾಗ ಮಾತ್ರ ಧರ್ಮ ಮಾರ್ಗದಲ್ಲಿ ನಡೆಯಬಹುದು. ನಾವು ಯಾರ ಕಣ್ಣೂ ತಪ್ಪಿಸುವುದಕ್ಕೆ ಸಾಧ್ಯ ಆದರೆ ಭಗವಂತನ ಕಣ್ಣೂ ತಪ್ಪಿಸಲಾಗದು.ಧಾರ್ಮಿಕ ಪ್ರಜ್ಞೆಯೊಂದಿಗೆ ನಮ್ಮ ಬದುಕು ಇರಬೇಕು ಎಂದು ಹೇಳಿದರು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹಾಗೂ ಬಸರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಬೀ. ಅಪ್ಪಣ್ಣ ಹೆಗಡೆ ಮಾತನಾಡಿ,ನಾವು ಇಂದು ಹಣದ ಹಿಂದೆ ಬಿದ್ದಿರುವುದು ಧಾರ್ಮಿಕ ಶ್ರದ್ಧೆ ಕಡಿಮೆಯಾಗಲು ಕಾರಣವಾಗಿದೆ.ಸಂಸ್ಕಾರ ಇಲ್ಲದೆ ಇರುವುದರಿಂದ ಕುಟುಂಬದಲ್ಲಿ ಭಿನ್ನ ಭಿನ್ನ ವಾತಾವರಣ ಕಾಣುತ್ತಿದ್ದೇವೆ.ಧರ್ಮ ಪ್ರಜ್ಞೆ ಮೂಡಿಸುವ ಮೂಲಕ ಸಮಾಜದಲ್ಲಿ ಸಂಸ್ಕಾರ, ಸಂಸ್ಕೃತಿ ಮೂಡಿಸಬೇಕಾಗಿದೆ ಎಂದು ಕರೆ ನೀಡಿದರು.
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಕೆ. ಸೂರ್ಯನಾರಾಯಣ ಉಪಾಧ್ಯಾಯ ಮಾತನಾಡಿ ಋಷಿಮುನಿಗಳ ಅನುಗ್ರಹದಿಂದ ನಮಗೆ ಈ ಒಂದು ಧಾರ್ಮಿಕ ಕ್ಷೇತ್ರಗಳು ದೊರಕಿವೆ.ನಾವು ಮಾಡುವ ಉತ್ತಮ ಕಾರ್ಯ,ಧರ್ಮ ಕಾರ್ಯ,ಸತ್ಕಾರ್ಯ ಗಳು ನಮಗೆ ಪರಲೋಕದಲ್ಲಿ ಲಭ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಿದ್ದಿ ಶೈಕ್ಷಣಿಕ ಪ್ರತಿಷ್ಟಾನದ ಅಧ್ಯಕ್ಷ ಎಲ್. ಟಿ. ತಿಮ್ಮಪ್ಪ ವಹಿಸಿದ್ದರು. ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮದ ಅಧ್ಯಕ್ಷ ಡಾ ಕೆ.ಎಸ್.ಕಾರಂತ,ಅತಿಶಯ ಜೈನ ಕ್ಷೇತ್ರದ ಮೊಕ್ತೇಸರ ಸುರೇಂದ್ರ ಜೈನ್, ಲೋಕನಾತೇಶ್ವರ ದೇವಸ್ಥಾನದ ಧರ್ಮದರ್ಶಿ ಸನತ್ ಕುಮಾರ್ ರೈ ಮಾತನಾಡಿ ಶುಭ ಹಾರೈಸಿದರು.ದೇವಸ್ಥಾನದ ಧರ್ಮದರ್ಶಿ ವೇ.ಮೂ.ಬಾಲಚಂದ್ರ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿ ಹಲವರ ಉಪಕಾರ ಸ್ಮರಿಸಿದರು.ವೇದಿಕೆಯಲ್ಲಿ ಉದ್ಯಮಿ ಕರುಣಾಕರ ಶೆಟ್ಟಿ,ಶ್ರೀ ಸಿದ್ದಿ ಶೈಕ್ಷಣಿಕ ಪ್ರತಿಷ್ಟಾನದ ಕಾರ್ಯದರ್ಶಿ ಶರಣ ಕುಮಾರ್, ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಶ್ರೀ ಸಿದ್ಧಿವಿನಾಯಕ ಶಾಲೆಯ ಉಪ ಪ್ರಾಂಶುಪಾಲ ರಾಮ ದೇವಾಡಿಗ ನಿರ್ವಹಿಸಿದರು. ರಾಧಾಕೃಷ್ಣ ಭಟ್ಟ ಭಟ್ಕಳ ವಂದಿಸಿದರು.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 days ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 week ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

3 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

3 weeks ago