ಕುಂದಾಪುರ

ಹಟ್ಟಿಯಂಗಡಿ:ಧಾರ್ಮಿಕ ಸಭಾ ಕಾರ್ಯಕ್ರಮ ಮಹಾ ಅನ್ನಸಂತರ್ಪಣೆ

Share

ಕುಂದಾಪುರ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ ,ಲಕ್ಷ ಮೋದಕ ಹವನ,
ಶತ ಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮದ ಅಂಗವಾಗಿ ಬುಧವಾರ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಿ ಮಾತನಾಡಿ,ಕಾರವಳಿಯಲ್ಲಿರುವ ಅನೇಕ ಸನ್ನಿಧಾನಗಳು ಭಕ್ತರಿಗೆ ಭಕ್ತಿಯ ಸಿಂಚನವನ್ನು ಮಾಡುತ್ತಿವೆ.ನಮ್ಮ ಅನೇಕ ಸಿದ್ಧಾಂತಗಳು ಆಸ್ತಿಕ ಮನೋಭಾವನೆಗಳನ್ನು ಮೂಡಿಸುತ್ತವೆ.ನಾವು ಧರ್ಮ ಮಾರ್ಗ ದಿಂದ ನಡೆದರೆ ಮಾತ್ರ ನಮಗೆ ಯಶಸ್ಸು ಸಾಧ್ಯ‌ ಎಂದರು.
ಭಗವಂತನ ಮೇಲೆ ನಮಗೆ ಭಕ್ತಿ ಇದ್ದಾಗ ಮಾತ್ರ ಧರ್ಮ ಮಾರ್ಗದಲ್ಲಿ ನಡೆಯಬಹುದು. ನಾವು ಯಾರ ಕಣ್ಣೂ ತಪ್ಪಿಸುವುದಕ್ಕೆ ಸಾಧ್ಯ ಆದರೆ ಭಗವಂತನ ಕಣ್ಣೂ ತಪ್ಪಿಸಲಾಗದು.ಧಾರ್ಮಿಕ ಪ್ರಜ್ಞೆಯೊಂದಿಗೆ ನಮ್ಮ ಬದುಕು ಇರಬೇಕು ಎಂದು ಹೇಳಿದರು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹಾಗೂ ಬಸರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಬೀ. ಅಪ್ಪಣ್ಣ ಹೆಗಡೆ ಮಾತನಾಡಿ,ನಾವು ಇಂದು ಹಣದ ಹಿಂದೆ ಬಿದ್ದಿರುವುದು ಧಾರ್ಮಿಕ ಶ್ರದ್ಧೆ ಕಡಿಮೆಯಾಗಲು ಕಾರಣವಾಗಿದೆ.ಸಂಸ್ಕಾರ ಇಲ್ಲದೆ ಇರುವುದರಿಂದ ಕುಟುಂಬದಲ್ಲಿ ಭಿನ್ನ ಭಿನ್ನ ವಾತಾವರಣ ಕಾಣುತ್ತಿದ್ದೇವೆ.ಧರ್ಮ ಪ್ರಜ್ಞೆ ಮೂಡಿಸುವ ಮೂಲಕ ಸಮಾಜದಲ್ಲಿ ಸಂಸ್ಕಾರ, ಸಂಸ್ಕೃತಿ ಮೂಡಿಸಬೇಕಾಗಿದೆ ಎಂದು ಕರೆ ನೀಡಿದರು.
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಕೆ. ಸೂರ್ಯನಾರಾಯಣ ಉಪಾಧ್ಯಾಯ ಮಾತನಾಡಿ ಋಷಿಮುನಿಗಳ ಅನುಗ್ರಹದಿಂದ ನಮಗೆ ಈ ಒಂದು ಧಾರ್ಮಿಕ ಕ್ಷೇತ್ರಗಳು ದೊರಕಿವೆ.ನಾವು ಮಾಡುವ ಉತ್ತಮ ಕಾರ್ಯ,ಧರ್ಮ ಕಾರ್ಯ,ಸತ್ಕಾರ್ಯ ಗಳು ನಮಗೆ ಪರಲೋಕದಲ್ಲಿ ಲಭ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಿದ್ದಿ ಶೈಕ್ಷಣಿಕ ಪ್ರತಿಷ್ಟಾನದ ಅಧ್ಯಕ್ಷ ಎಲ್. ಟಿ. ತಿಮ್ಮಪ್ಪ ವಹಿಸಿದ್ದರು. ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮದ ಅಧ್ಯಕ್ಷ ಡಾ ಕೆ.ಎಸ್.ಕಾರಂತ,ಅತಿಶಯ ಜೈನ ಕ್ಷೇತ್ರದ ಮೊಕ್ತೇಸರ ಸುರೇಂದ್ರ ಜೈನ್, ಲೋಕನಾತೇಶ್ವರ ದೇವಸ್ಥಾನದ ಧರ್ಮದರ್ಶಿ ಸನತ್ ಕುಮಾರ್ ರೈ ಮಾತನಾಡಿ ಶುಭ ಹಾರೈಸಿದರು.ದೇವಸ್ಥಾನದ ಧರ್ಮದರ್ಶಿ ವೇ.ಮೂ.ಬಾಲಚಂದ್ರ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿ ಹಲವರ ಉಪಕಾರ ಸ್ಮರಿಸಿದರು.ವೇದಿಕೆಯಲ್ಲಿ ಉದ್ಯಮಿ ಕರುಣಾಕರ ಶೆಟ್ಟಿ,ಶ್ರೀ ಸಿದ್ದಿ ಶೈಕ್ಷಣಿಕ ಪ್ರತಿಷ್ಟಾನದ ಕಾರ್ಯದರ್ಶಿ ಶರಣ ಕುಮಾರ್, ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಶ್ರೀ ಸಿದ್ಧಿವಿನಾಯಕ ಶಾಲೆಯ ಉಪ ಪ್ರಾಂಶುಪಾಲ ರಾಮ ದೇವಾಡಿಗ ನಿರ್ವಹಿಸಿದರು. ರಾಧಾಕೃಷ್ಣ ಭಟ್ಟ ಭಟ್ಕಳ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago