ಕುಂದಾಪುರ

ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಸ್ಥಾನ ಹೊಳ್ಮಗೆ ವಾರ್ಷಿಕ ಹಬ್ಬ,ಗೆಂಡ ಸೇವೆ

Share

ಕುಂದಾಪುರ:ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಗೆಂಡ ಸೇವೆ ಹಾಗೂ ಕೋಲ ಸೇವೆ,ಮಂಗಳಾರತಿ,ಹಣ್ಣುಕಾಯಿ ಸೇವೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ನಡೆಯಿತು.ದೈವವನ್ನು ನಂಬಿದ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರ್ಶನವನ್ನು ಪಡೆದು ಹರಕೆಯನ್ನು ಸಲ್ಲಿಸಿದರು.ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಗಳ ವಾರ್ಷಿಕ ಹಬ್ಬ ಪ್ರತಿ ವರ್ಷ ಮಾ.14 ರಂದು ಆಚರಣೆಗೊಳ್ಳುತ್ತದೆ.
ಕ್ಷೇತ್ರವನ್ನು ನಂಬಿದ ಕುಟುಂಬಿಕರಾದ ಮುಂಬೈ ಉದ್ಯಮಿ ಮಂಜು ಪೂಜಾರಿ ಅವರು ಮಾತನಾಡಿ,ಅಜೀರ್ಣಾವಸ್ಥೆಯಲ್ಲಿದ್ದ ದೈವಸ್ಥಾನವನ್ನು ಇತ್ತಿಚೆಗೆ ಅಭಿವೃದ್ಧಿಗೊಳಿಸಲಾಗಿದೆ.ದೈವಸ್ಥಾನ ಸಂಪರ್ಕಕ್ಕೆ ರಸ್ತೆ ಸಮಸ್ಯೆ ಎನ್ನುವುದು ಬಹಳಷ್ಟು ವರ್ಷಗಳಿಂದ ಇದೆ.ಕಾಲು ದಾರಿಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಕ್ಷೇತ್ರದ ಅಭಿವೃದ್ಧಿ ಮತ್ತು ಭಕ್ತಾದಿಗಳ ಹಿತ ದೃಷ್ಟಿಯಿಂದ ದೈವಸ್ಥಾನಕ್ಕೆ ಸಂಪರ್ಕ ರಸ್ತೆ ಆಗಬೇಕಾದ ಅಗತ್ಯತೆ ಇದೆ.ಇವೊಂದು ಕಾರ್ಯಕ್ಕೆ ಎಲ್ಲರೂ ಸ್ವಯಂಪ್ರೇರಿತರಾಗಿ ಕೈಜೋಡಿಸಿ ದೈವದ ಮನೆಗೆ ರಸ್ತೆಯನ್ನು ಕಲ್ಪಿಸಲು ಸಹಕರಿಸಬೇಕು ಎಂದು ಕೇಳಿಕೊಂಡರು.
ನೆತ್ರ ಹಾೈಗುಳಿ ದೈವಸ್ಥಾನದಲ್ಲಿ ಪೂರ್ವಜರ ಕಾಲದಿಂದಲೂ ಕೋಲ ಸೇವೆಯನ್ನು ನೆರವೇರಿಸಿಕೊಂಡು ಬರುತ್ತಿರುವ ಸೂರ ಪಾಣಾರ ಕುಟುಂಬದ ಸದಸ್ಯರಾದ ಸುನೀಲ್ ಪಾಣಾರ ಅವರು ಮಾತನಾಡಿ,ಹೋರ್ ಬೊಬ್ಬರ್ಯ ಮತ್ತು ಬಂಟರಗರಡಿ ಹಾಗೂ ನೆತ್ರ ಹಾೈಗುಳಿ ಸನ್ನಿಧಾನವೂ ಏಕ ರೂಪದಲ್ಲಿ ಇರುವಂತಹ ಸನ್ನಿಧಾನವಾಗಿದೆ.ಹೆಚ್ಚು ಕಮ್ಮಿ ಎನ್ನುವುದು ಏನು ಇಲ್ಲಾ.ಕಷ್ಟ ಎಂದು ಬೇಡಿ ಬಂದವರ ಇಷ್ಟಾರ್ಥವನ್ನು ಸಿದ್ಧಿಮಾಡುವಾಗ ನೆತ್ರ ಹಾೈಗುಳಿ ಕಾರಣಿಕ ಶಕ್ತಿ ಅಪಾರವಾದದ್ದು ಎಂದು ಹೇಳಿದರು.
ನೆತ್ರ ಹಾೈಗಳಿ ದೈವಸ್ಥಾನದ ಮುಕ್ತೇಸರರಾದ ಮಾಹಬಲ ಮೆಂಡನ್ ಮಾತನಾಡಿ,ನೆತ್ರ ಹಾೈಗಳಿ ದೈವಸ್ಥಾನದ ಆಗು ಹೋಗುಗಳು ಹೋರ್ ಬೊಬ್ಬರ್ಯ ದೈವಸ್ಥಾನದ ವತಿಯಿಂದಲೇ ನಡೆಯುತ್ತದೆ.ವರ್ಷಂಪ್ರತಿ ನಡೆಯುವ ಕೋಲ ಸೇವೆ ಗೆಂಡ ಸೇವೆ,ಹಾಲು ಹಬ್ಬ ಸೇವೆ ಹೋರ್ ಬೊಬ್ಬರ್ಯ ದೈವಸ್ಥಾನದ ವತಿಯಿಂದಲೆ ನಡೆಯುವಂತಹದ್ದು ಆಗಿದೆ.ಈ ಭಾಗದಲ್ಲಿರುವ ಮೂರು ದೈವಸ್ಥಾನಗಳ ಹಬ್ಬ ಒಂದೆ ದಿನ ನಡೆಯುವುದು ವಾಡಿಕೆ ಆಗಿದೆ ಎಂದು ಹೇಳಿದರು.ನೆತ್ರ ಹಾೈಗುಳಿ ನಂಬಿದ ಕುಟುಂಸ್ಥರಿಗೆ ಒಳಿತನ್ನು ಮಾಡಲಿ ಎಂದು ಹಾರೈಸಿದರು.
ನೆತ್ರ ಹಾೈಗುಳಿ ದೈವಸ್ಥಾನದ ಪಾತ್ರಿಗಳಾದ ರಾಘವೇಂದ್ರ ಅವರು ಮಾತನಾಡಿ,ದೈವಸ್ಥಾನದಲ್ಲಿ ಬಾವಿ ಹಾಗೂ ಸ್ನಾನ ಗ್ರಹ ಆಗಬೇಕಾಗಿದೆ.ದೈವಸ್ಥಾನದ ಎದುರುಗಡೆ ಇಂಟರ್‍ಲಾಕ್ ಅಳವಡಿಕೆ ಕೂಡ ಬಾಕಿ ಇದೆ.ದೈವಸ್ಥಾನದ ಅಭಿವೃದ್ಧಿಗೆ ಭಕ್ತಾದಿಗಳು ಸಹಕರಿಸಬೇಕು ಎಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಜ್ಯೋತಿ ಮಂಜು ಪೂಜಾರಿ,ರಾಜೀವ ಪೂಜಾರಿ ಗುಜ್ಜಾಡಿ,ಪ್ರವೀಣ್ ಪೂಜಾರಿ ಹೊಳ್ಮಗೆ,ಅರ್ಚಕರಾದ ರಾಜ ಸಸಿಹಿತ್ಲು,ನಾಗು ಪೂಜಾರಿ,ಗ್ರಾಮಸ್ಥರು,ಭಕ್ತಾದಿಗಳು ಉಪಸ್ಥಿತರಿದ್ದರು.ದೈವಸ್ಥಾನದ ವಾರ್ಷಿಕ ಸೇವೆ ವಿಜೃಂಭಣೆಯಿಂದ ಜರುಗತು.

ವರದಿ:ಜಗದೀಶ ದೇವಾಡಿಗ
ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಬಿತ್ತರಿಸಲು ಸಂಪರ್ಕಿಸಿ:-9916284048

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago