ಕುಂದಾಪುರ

ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಸ್ಥಾನ ಹೊಳ್ಮಗೆ ವಾರ್ಷಿಕ ಹಬ್ಬ,ಗೆಂಡ ಸೇವೆ

Share

Advertisement
Advertisement

ಕುಂದಾಪುರ:ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಗೆಂಡ ಸೇವೆ ಹಾಗೂ ಕೋಲ ಸೇವೆ,ಮಂಗಳಾರತಿ,ಹಣ್ಣುಕಾಯಿ ಸೇವೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ನಡೆಯಿತು.ದೈವವನ್ನು ನಂಬಿದ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರ್ಶನವನ್ನು ಪಡೆದು ಹರಕೆಯನ್ನು ಸಲ್ಲಿಸಿದರು.ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಗಳ ವಾರ್ಷಿಕ ಹಬ್ಬ ಪ್ರತಿ ವರ್ಷ ಮಾ.14 ರಂದು ಆಚರಣೆಗೊಳ್ಳುತ್ತದೆ.
ಕ್ಷೇತ್ರವನ್ನು ನಂಬಿದ ಕುಟುಂಬಿಕರಾದ ಮುಂಬೈ ಉದ್ಯಮಿ ಮಂಜು ಪೂಜಾರಿ ಅವರು ಮಾತನಾಡಿ,ಅಜೀರ್ಣಾವಸ್ಥೆಯಲ್ಲಿದ್ದ ದೈವಸ್ಥಾನವನ್ನು ಇತ್ತಿಚೆಗೆ ಅಭಿವೃದ್ಧಿಗೊಳಿಸಲಾಗಿದೆ.ದೈವಸ್ಥಾನ ಸಂಪರ್ಕಕ್ಕೆ ರಸ್ತೆ ಸಮಸ್ಯೆ ಎನ್ನುವುದು ಬಹಳಷ್ಟು ವರ್ಷಗಳಿಂದ ಇದೆ.ಕಾಲು ದಾರಿಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಕ್ಷೇತ್ರದ ಅಭಿವೃದ್ಧಿ ಮತ್ತು ಭಕ್ತಾದಿಗಳ ಹಿತ ದೃಷ್ಟಿಯಿಂದ ದೈವಸ್ಥಾನಕ್ಕೆ ಸಂಪರ್ಕ ರಸ್ತೆ ಆಗಬೇಕಾದ ಅಗತ್ಯತೆ ಇದೆ.ಇವೊಂದು ಕಾರ್ಯಕ್ಕೆ ಎಲ್ಲರೂ ಸ್ವಯಂಪ್ರೇರಿತರಾಗಿ ಕೈಜೋಡಿಸಿ ದೈವದ ಮನೆಗೆ ರಸ್ತೆಯನ್ನು ಕಲ್ಪಿಸಲು ಸಹಕರಿಸಬೇಕು ಎಂದು ಕೇಳಿಕೊಂಡರು.
ನೆತ್ರ ಹಾೈಗುಳಿ ದೈವಸ್ಥಾನದಲ್ಲಿ ಪೂರ್ವಜರ ಕಾಲದಿಂದಲೂ ಕೋಲ ಸೇವೆಯನ್ನು ನೆರವೇರಿಸಿಕೊಂಡು ಬರುತ್ತಿರುವ ಸೂರ ಪಾಣಾರ ಕುಟುಂಬದ ಸದಸ್ಯರಾದ ಸುನೀಲ್ ಪಾಣಾರ ಅವರು ಮಾತನಾಡಿ,ಹೋರ್ ಬೊಬ್ಬರ್ಯ ಮತ್ತು ಬಂಟರಗರಡಿ ಹಾಗೂ ನೆತ್ರ ಹಾೈಗುಳಿ ಸನ್ನಿಧಾನವೂ ಏಕ ರೂಪದಲ್ಲಿ ಇರುವಂತಹ ಸನ್ನಿಧಾನವಾಗಿದೆ.ಹೆಚ್ಚು ಕಮ್ಮಿ ಎನ್ನುವುದು ಏನು ಇಲ್ಲಾ.ಕಷ್ಟ ಎಂದು ಬೇಡಿ ಬಂದವರ ಇಷ್ಟಾರ್ಥವನ್ನು ಸಿದ್ಧಿಮಾಡುವಾಗ ನೆತ್ರ ಹಾೈಗುಳಿ ಕಾರಣಿಕ ಶಕ್ತಿ ಅಪಾರವಾದದ್ದು ಎಂದು ಹೇಳಿದರು.
ನೆತ್ರ ಹಾೈಗಳಿ ದೈವಸ್ಥಾನದ ಮುಕ್ತೇಸರರಾದ ಮಾಹಬಲ ಮೆಂಡನ್ ಮಾತನಾಡಿ,ನೆತ್ರ ಹಾೈಗಳಿ ದೈವಸ್ಥಾನದ ಆಗು ಹೋಗುಗಳು ಹೋರ್ ಬೊಬ್ಬರ್ಯ ದೈವಸ್ಥಾನದ ವತಿಯಿಂದಲೇ ನಡೆಯುತ್ತದೆ.ವರ್ಷಂಪ್ರತಿ ನಡೆಯುವ ಕೋಲ ಸೇವೆ ಗೆಂಡ ಸೇವೆ,ಹಾಲು ಹಬ್ಬ ಸೇವೆ ಹೋರ್ ಬೊಬ್ಬರ್ಯ ದೈವಸ್ಥಾನದ ವತಿಯಿಂದಲೆ ನಡೆಯುವಂತಹದ್ದು ಆಗಿದೆ.ಈ ಭಾಗದಲ್ಲಿರುವ ಮೂರು ದೈವಸ್ಥಾನಗಳ ಹಬ್ಬ ಒಂದೆ ದಿನ ನಡೆಯುವುದು ವಾಡಿಕೆ ಆಗಿದೆ ಎಂದು ಹೇಳಿದರು.ನೆತ್ರ ಹಾೈಗುಳಿ ನಂಬಿದ ಕುಟುಂಸ್ಥರಿಗೆ ಒಳಿತನ್ನು ಮಾಡಲಿ ಎಂದು ಹಾರೈಸಿದರು.
ನೆತ್ರ ಹಾೈಗುಳಿ ದೈವಸ್ಥಾನದ ಪಾತ್ರಿಗಳಾದ ರಾಘವೇಂದ್ರ ಅವರು ಮಾತನಾಡಿ,ದೈವಸ್ಥಾನದಲ್ಲಿ ಬಾವಿ ಹಾಗೂ ಸ್ನಾನ ಗ್ರಹ ಆಗಬೇಕಾಗಿದೆ.ದೈವಸ್ಥಾನದ ಎದುರುಗಡೆ ಇಂಟರ್‍ಲಾಕ್ ಅಳವಡಿಕೆ ಕೂಡ ಬಾಕಿ ಇದೆ.ದೈವಸ್ಥಾನದ ಅಭಿವೃದ್ಧಿಗೆ ಭಕ್ತಾದಿಗಳು ಸಹಕರಿಸಬೇಕು ಎಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಜ್ಯೋತಿ ಮಂಜು ಪೂಜಾರಿ,ರಾಜೀವ ಪೂಜಾರಿ ಗುಜ್ಜಾಡಿ,ಪ್ರವೀಣ್ ಪೂಜಾರಿ ಹೊಳ್ಮಗೆ,ಅರ್ಚಕರಾದ ರಾಜ ಸಸಿಹಿತ್ಲು,ನಾಗು ಪೂಜಾರಿ,ಗ್ರಾಮಸ್ಥರು,ಭಕ್ತಾದಿಗಳು ಉಪಸ್ಥಿತರಿದ್ದರು.ದೈವಸ್ಥಾನದ ವಾರ್ಷಿಕ ಸೇವೆ ವಿಜೃಂಭಣೆಯಿಂದ ಜರುಗತು.

Advertisement

ವರದಿ:ಜಗದೀಶ ದೇವಾಡಿಗ
ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಬಿತ್ತರಿಸಲು ಸಂಪರ್ಕಿಸಿ:-9916284048

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

18 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

20 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

23 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago