ಕುಂದಾಪುರ

ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನ ಹೊಳ್ಮಗೆ ವಾರ್ಷಿಕ ಗೆಂಡ ಸೇವೆ

Share

ಕುಂದಾಪುರ:ಹೊಳ್ಮಗೆ ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಹಬ್ಬದ ಅಂಗವಾಗಿ ಶ್ರೀ ದೇವರಿಗೆ ಮಹಾ ಮಂಗಳಾರತಿ ಸೇವೆ,ಹಣ್ಣು ಕಾಯಿ ಸೇವೆ,ಗೆಂಡ ಸೇವೆ,ಯಕ್ಷಗಾನ ಸೇವೆ,ದೈವ ದರ್ಶನ ಸೇವೆ,ಪಾಣರಾಟ ಸೇವೆ,ತುಲಾಭಾರ ಸೇವೆ,ವಿಶೇಷ ಪೂಜೆ ಜರುಗಿತು.
ವಾರ್ಷಿಕ ಹಬ್ಬದ ಪ್ರಯುಕ್ತ ದೈವಸ್ಥಾನವನ್ನು ಪುಷ್ಪಾಲಂಕಾರ ಹಾಗೂ ದೀಪಾಲಂಕಾರದಿಂದ ಶೃಂಗಾರಿಸಲಾಗಿತ್ತು.
ಶ್ರೀಹೋರ್ ಬೊಬ್ಬರ್ಯ ದೈವಸ್ಥಾನ,ಶ್ರೀ ನೆತ್ರ ಹಾೈಗುಳಿ ಹಾಗೂ ಬಂಟರ ಗರಡಿ ದೈವಸ್ಥಾನದ ಮೂರು ದೈವಗಳು ಜೊತೆಯಾಗಿ ಕೊಡಿ ನೀರಿಗೆ ಹೋಗುವುದು ವಿಶೇಷವಾದ ಆಚರಣೆ ಆಗಿದೆ.ಚಂಡೆ,ವಾದ್ಯ ಘೋಷದೊಂದಿಗೆ ದೈವವನ್ನು ಮೆರವಣಿಗೆ ಮೂಲಕ ಕೊಡಿ ನೀರಿಗೆ ಕರೆದುಕೊಂಡು ಹೋಗಲಾಗುತ್ತದೆ.ಇದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಂತಹ ಆಚರಣೆ ಆಗಿದೆ.
ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಸುಭಾಷ್ ಶೆಟ್ಟಿ ಹೊಳ್ಮಗೆ ಮಾತನಾಡಿ,ಹೋರ್ ಬೊಬ್ಬರ್ಯ ದೈವಸ್ಥಾನ ಎನ್ನುವಂತಹದ್ದು ಈ ಭಾಗದಲ್ಲಿ ದೊಡ್ಡ ರೀತಿಯ ಕುಟುಂಬ ವರ್ಗವದ ಭಕ್ತ ಸಮೂಹವನ್ನು ಹೊಂದಿದಂತಹ ದೈವಸ್ಥಾನವಾಗಿದೆ.ಬಹಳ ವಿಶೇಷವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದೈವಸ್ಥಾನದ ವಾರ್ಷಿಕ ಹಬ್ಬ ವಿಜೃಂಭಣೆಯಿಂದ ನಡೆದಿದೆ ಎಂದರು.ದೈವಸ್ಥಾನದ ಹಬ್ಬವೂ ಯಶಸ್ವಿಯಾಗಿ ನಡೆಯಲು ಗ್ರಾಮಸ್ಥರು ಹಾಗೂ ದೈವಸ್ಥಾನದ ಅರ್ಚಕರು ಮತ್ತು ಗ್ರಾಮಸ್ಥರ ಪಾತ್ರ ದೊಡ್ಡದಾಗಿದೆ ಎಂದರು.ಐದು ದಿನಗಳ ಕಾಲ ದೈವಸ್ಥಾನದ ಹಬ್ಬ ನಡೆಯುತ್ತದೆ.ನಾಲ್ಕು ದಿನಗಳ ಕಾಲ ವಿಶೇಷವಾದ ರೀತಿಯಲ್ಲಿ ಕೊಲ ಸೇವೆ ಜರುಗುತ್ತದೆ.ಭಕ್ತ ಸಮೂಹದ ಕೊಡುಗೆ ನಿರಂತರವಾಗಿ ಇರಲಿ ಎಂದು ಬೇಡಿಕೊಂಡರು.ಹೋರ್ ಬೊಬ್ಬಯ,ಬಂಟರಗಡಿ ಹಾಗೂ ನೆತ್ರ ಹಾೈಗುಳಿ ದೈವಸ್ಥಾನದ ಹಬ್ಬ ಒಂದೆ ದಿನ ನಡೆಯುವುದರಿಂದ ದೊಡ್ಡ ರೀತಿಯ ಭಕ್ತ ಸಮೂಹವನ್ನು ನೋಡಬಹುದಾಗಿದೆ ಎಂದರು.
ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ಪಾತ್ರಿಗಳಾದ ಗಣೇಶ ಪೂಜಾರಿ ಅವರು ಮಾತನಾಡಿ,ಮೂರು ಜಿಲ್ಲೆಗಳಲ್ಲಿ ದೊಡ್ಡ ರೀತಿ ಭಕ್ತ ಸಮೂಹವನ್ನು ಹೊಂದಿರುವ ದೈವಸ್ಥಾನ ನಮ್ಮದು ಆಗಿದೆ.ದೈವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಜಾತ್ರೆಗೆ ಮೂಲೆ ಮೂಲೆಗಳಿಂದ ಭಕ್ತ ಸಮೂಹ ಹರಿದು ಬರುತ್ತದೆ.ಶ್ರೀ ಬೊಬ್ಬರ್ಯ ದೇವರ ಕಾರಣಿಕ ಶಕ್ತಿ ಮತ್ತು ದೇವರ ಮೇಲಿರುವ ನಂಬಿಕೆಯಿಂದ ವರ್ಷದಿಂದ ವರ್ಷಕ್ಕೆ ಭಕ್ತ ಸಮೂಹದ ಸಂಖ್ಯೆ ಅಧಿಕವಾಗುತ್ತಿದೆ ಎಂದರು.ಪಾಣರಾಟ ಸೇವೆ,ಕೊಡಿ ನೀರಿಗೆ ಹೋಗುವುದು,ತುಲಾಭಾರ ಸೇವೆ ಇಲ್ಲಿನ ವಿಶೇಷ ಸೇವೆ ಆಗಿದೆ ಎಂದು ದೈವಸ್ಥಾನದಲ್ಲಿ ಆಚರಣೆ ಗೊಳ್ಳುವ ಪದ್ಧತಿ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಹೋರ್ ಬೊಬ್ಬರ್ಯ ದೈವಸ್ಥಾನದ ಗೌರವಾಧ್ಯಕ್ಷರಾದ ರಮೇಶ್ ಪೂಜಾರಿ,ಉಪಾಧ್ಯಕ್ಷ ಮಹಾಬಲ ಮೆಂಡನ್,ಕೋಶಾಧಿಕಾರಿ ಅರುಣ ಹೊಳ್ಮಗೆ,ಕಾರ್ಯದರ್ಶಿ ಬಾಬು ಪೂಜಾರಿ ಹಕ್ಲಾಡಿ,ಆಡಳಿತ ಮಂಡಳಿ ಸರ್ವಸದಸ್ಯರು,ಅರ್ಚಕವೃಂದವರು,ಗ್ರಾಮಸ್ಥರು,ಭಕ್ತಾದಿಗಳು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago