ಕುಂದಾಪುರ

ಶ್ರೀಬಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ಹೊಳ್ಮಗೆ ವಾರ್ಷಿಕ ಗೆಂಡಸೇವೆ

Share

Advertisement
Advertisement

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ದೇವಸ್ಥಾನದಲ್ಲಿ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ವಿಜೃಂಭಣೆಯಿಂದ ನಡೆಯಿತು.
ವರ್ಷಂಪ್ರತಿ ನಡೆಯುವ ಶ್ರೀ ದೇವರ ವಾರ್ಷಿಕ ಗೆಂಡಸೇವೆ ಕಾರ್ಯಕ್ರಮದ ಅಂಗವಾಗಿ ದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ಹಾಗೂ ಶುಕ್ರವಾರ ತುಲಾಭಾರ ಸೇವೆ,ದೈವದರ್ಶನ ಸೇವೆ,ಹರಕೆ ಕೋಲ ಜರುಗಿತು. ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಕಷ್ಟ ಕಾಲದಲ್ಲಿ ಹೇಳಿ ಕೊಂಡ ಹರಕೆಯನ್ನು ಸಲ್ಲಿಸಿದರು.
ವಾರ್ಷಿಕ ಹಬ್ಬದ ಅಂಗವಾಗಿ ದೈವಸ್ಥಾನವನ್ನು ಹೂವಿನ ಅಲಂಕಾರ ಮತ್ತು ದೀಪಾಲಂಕಾರದಿಂದ ಶೃಂಗಾರಿಸಲಾಯಿತು.ಬಂಟರಗರಡಿ,ಹೋರ್ ಬೊಬ್ಬರ್ಯ ಹಾಗೂ ನೆತ್ರ ಹಾೈಗುಳಿ ದೈವಸ್ಥಾನದ ದೈವಗಳು ಜತೆಯಾಗಿ ಕೊಡಿ ನೀರಿಗೆ ಅರ್ಚಕರ ಮನೆಗೆ ಹೊಗುವುದು ವಿಶೇಷವಾಗಿದೆ.ಚಂಡೆ ಡೋಲು ವಾದ್ಯ ಘೋಷದೊಂದಿಗೆ ದೈವವನ್ನು ಮೆರವಣಿಗೆ ಮೂಲಕ ಕೊಡಿ ನೀರಿಗೆ ಭಕ್ತ ಸಮೂಹವೂ ಬರಮಾಡಿ ಕೊಳ್ಳುತ್ತಾರೆ ಎಂದರು.
ಶ್ರೀಬಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ಹೊಳ್ಮಗೆ ಕಾರ್ಯದರ್ಶಿಯಾದ ಚಂದ್ರಹಾಸ ಮಾತನಾಡಿ,400 ವರ್ಷಗಳ ಕಾಲ ಇತಿಹಾಸವನ್ನು ಹೊಂದಿರುವ ದೈವಸ್ಥಾನವೂ ಬಹಳಷ್ಟು ಪುರಾತನ ದೈವಸ್ಥಾನಗಳಲ್ಲಿ ಒಂದಾಗಿದೆ.ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವಂತಹ 66 ಗರಡಿಯಲ್ಲಿ ಇದು ಸಹ ಒಂದು ಗರಡಿ ಆಗಿದೆ ಎಂದು ಹೇಳಿದರು.
ತುಂಬಾ ಜೀರ್ಣಾವಸ್ಥೆಯಲ್ಲಿದ್ದ ದೈವಸ್ಥಾನವನ್ನು ಇತ್ತಿಚಿಗೆ ಪುನರ್ ನಿರ್ಮಾಣ ಮಾಡಲಾಗಿದೆ ಎಂದರು.ಬಂಟರಗರಡಿ,ಹೋರ್ ಬೊಬ್ಬರ್ಯ,ನೆತ್ರ ಹಾೈಗುಳಿ ದೈವಸ್ಥಾನದ ಹಬ್ಬ ಒಟ್ಟಿಗೆ ನಡೆಯುವುದು ಬಹಳ ವಿಶೇಷವಾಗಿದೆ ಎಂದರು.ಪ್ರತಿ ಸಂಕ್ರಾತಿ ದಿನದಂದು ವಿಶೇಷ ಪೂಜೆ ಜರುತ್ತದೆ ಎಂದರು.
ದೈವಸ್ಥಾನದ ಗೌರವಾಧ್ಯಕ್ಷರಾದ ಕೆ.ಸೂರ ಮೊಗವೀರ ಅವರು ಮಾತನಾಡಿ,ದೈವ ಸನ್ನಿಧಾನದಲ್ಲಿ ವಾರ್ಷಿಕ ಗೆಂಡ ಸೇವೆ ಜತೆಗೆ ಹಾಲುಹಬ್ಬ ಕೂಡ ವಿಶೇಷವಾದ ರೀತಿಯಲ್ಲಿ ನಡೆಯುತ್ತಿದೆ.ದೈವವನ್ನು ನಂಬಿದ ಕುಟುಂಸ್ಥರು ಉತ್ತರೋತ್ತರವಾಗಿ ಅಭಿವೃದ್ಧಿಗೊಳ್ಳುತ್ತಿರುವುದು ಪಂಜುರ್ಲಿ ದೈವದ ಕಾರಣಿಕ ಶಕ್ತಿಗೆ ಸಾಕ್ಷಿಭೂತವಾಗಿದೆ.ಪಂಜುರ್ಲಿ ಮಾತಾಡಿ ಹಾಳು ಮಾಡುವುದಿಲ್ಲ ನಂಬಿದ ಭಕ್ತರನ್ನು ಎಂದಿಗೂ ಕೈಬಿಡುವುದಿಲ್ಲ.ದೈವಸ್ಥಾವನ್ನು ಅಭಿವೃದ್ಧಿಗೊಳಿಸಲು ಹೊದಂತಹ ಸಂದರ್ಭದಲ್ಲಿ ದೈವವೇ ಮುಂದೆ ನಿಂತು ಎಲ್ಲಾ ಕೆಲಸವನ್ನು ಮಾಡಿಸಿಕೊಂಡಿದೆ ಎಂದು ಕ್ಷೇತ್ರದ ಮಹಿಮೆ ಬಗ್ಗೆ ವಿವರಿಸಿದರು.
ದೈವಸ್ಥಾನದ ಪಾತ್ರಿಗಳಾದ ಶಂಕರ ಪೂಜಾರಿ ಮಾತನಾಡಿ,ಮೂರು ದೈವಸ್ಥಾನಗಳ ಸಮಿತಿ ಒಳ್ಳೆ ರೀತಿ ಕೂಡುವಿಕೆ ಯಿಂದ ನಡೆದುಕೊಂಡು ಹೋಗುತ್ತಿದೆ.ಬಂಟರ ಗರಡಿ ದೈವಸ್ಥಾನದಲ್ಲಿ ಕಲ್ಯಾಣ ಮಂಟಪವನ್ನು ನಿರ್ಮಿಸಬೇಕ್ಕೆನ್ನುವ ಆಶೆಯನ್ನು ಹೊಂದಿದ್ದು ಭಕ್ತರು ನಮ್ಮ ಜತೆ ಕೈ ಜೋಡಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರಾದ ಸುಭಾಷ್ ಶೆಟ್ಟಿ ಹೊಳ್ಮಗೆ,ಅರ್ಚಕರಾದ ಸಂಜೀವ ಪೂಜಾರಿ,ಸದಸ್ಯರಾದ ಸತೀಶ ಪೂಜಾರಿ ಕುಂದಬಾರಂದಾಡಿ,ಭಾಸ್ಕರ ಪೂಜಾರಿ,ಗ್ರಾಮಸ್ಥರು,ಭಕ್ತಾದಿಗಳು ಉಪಸ್ಥಿತರಿದ್ದರು.

Advertisement

ವರದಿ:ಜಗದೀಶ ದೇವಾಡಿಗ
ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಪ್ರಕಟಿಸಲು ಸಂಪರ್ಕಿಸಿ-:9916284048

Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

10 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

1 day ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

4 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

5 days ago