ಕುಂದಾಪುರ

ಶ್ರೀಗಣಪತಿ ದೇವಸ್ಥಾನ ಚಿತ್ತಾರಿ ಹೆಮ್ಮುಂಜೆ,ಶಿಲಾಮಯ ದೇಗುಲ ಲೋಕಾರ್ಪಣೆ ಪುನರ್ ಪ್ರತಿಷ್ಠೆ

Share

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಚಿತ್ತಾರಿ ಹೆಮ್ಮುಂಜೆಯಲ್ಲಿ,ಹೆಮ್ಮುಂಜೆ ಮನೆಯವರು ನೂತನವಾಗಿ ನಿರ್ಮಿಸಿರುವ ಇತಿಹಾಸ ಪ್ರಸಿದ್ಧ ಶ್ರೀಗಣಪತಿ ದೇವಸ್ಥಾನದ ಶಿಲಾಮಯ ದೇಗುಲ ಲೋಕಾರ್ಪಣೆ,ಶ್ರಿದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅರ್ಚಕರಾದ ಮಂಜುನಾಥ್ ಭಟ್ ನೇತೃತ್ವದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆಯಿತು.
ಹೆಮ್ಮುಂಜೆ ಚಿತ್ತಾರಿ ಶ್ರೀಗಣಪತಿ ದೇವರ ಪುನರ್ ಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಶ್ರೀದೇವರಿಗೆ ಮಹಾಪೂಜೆ,ಮಂತ್ರಾಕ್ಷತೆ,ತೀರ್ಥಪ್ರಸಾದ ವಿತರಣೆ,ಅಲಂಕಾರ ಪೂಜೆಯನ್ನು ಸಲ್ಲಿಸಲಾಯಿತು.ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು,ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಪ್ರಸಾದವನ್ನು ಸ್ವೀಕರಿಸಿದರು.
ಭಕ್ತಿ ರಸಮಂಜರಿ ಕಾರ್ಯಕ್ರಮ ನಡೆಯಿತು.ದೇಗುಲದ ಆವರಣದಲ್ಲಿ ವಿನಯ್ ರಾವ್ ತುಮಕೂರು ಅವರು ನಿರ್ಮಿಸಿರುವ ಅಯೋಧ್ಯೆ ಶ್ರೀರಾಮ ಮಂದಿರ ಮಾದರಿ ನೋಡುಗರ ಮನ ಸೆಳೆಯಿತು.
ಅರ್ಚಕರಾದ ಸತನತ್ ಕುಮಾರ್ ಮಾತನಾಡಿ,ವಿಘ್ನ ನಿವಾರಕನಾದ ಗಣಪತಿ ದೇವರನ್ನು ಪ್ರಥಮ ಪೂಜಿತನೆಂದು ಆರಾಧಿಸುತ್ತೇವೆ.ಎಲ್ಲಾ ಕಾರ್ಯಗಳಿಗೂ ಗಣಪತಿ ದೇವರ ಆರಾಧನೆ ಎನ್ನುವುದು ಬಹಳಷ್ಟು ಪ್ರಮುಖವಾದದ್ದು.ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಹೆಮ್ಮುಂಜೆ ಚಿತ್ತಾರಿ ಗಣಪತಿ ದೇವರ ನೂತನ ದೇವಾಲಯವನ್ನು ನಾನಾ ಧಾರ್ಮಿಕ ವಿಧಿವಿಧಾನಗೊಂದಿಗೆ ಲೋಕಾರ್ಪಣೆ ಮಾಡುವುದರ ಜತೆಗೆ ಶ್ರೀದೇವರ ಪುನರ್ ಪ್ರತಿಷ್ಠೆ ಕಾರ್ಯವೂ ನಿರ್ವಿಘ್ನವಾಗಿ ಸಮಾಪನಗೊಂಡಿದೆ.ಭವಗವಂತನು ಎಲ್ಲರನ್ನು ಕರುಣಿಸಲಿ ಎಂದರು.

ಕ್ಷೇತ್ರದ ಭಕ್ತರಾದ ಕನಕ ಗ್ರೂಪ್ ಜಗದೀಶ ಶೆಟ್ಟಿ ಮಾತನಾಡಿ,ಬಹಳಷ್ಟು ಇತಿಹಾಸವನ್ನು ಹೊಂದಿರುವ ಶ್ರೀಗಣಪತಿ ದೇವರ ಪುನರ್ ಪ್ರತಿಷ್ಠೆ ಹಾಗೂ ನೂತನ ದೇವಾಲಯದ ನಿರ್ಮಾಣದ ಕಾರ್ಯ ಅಚ್ಚುಕಟ್ಟಾಗಿ ನಡೆದಿರುವುದು ಎಲ್ಲರಿಗೂ ಸಂತೋಷವನ್ನು ಉಂಟು ಮಾಡಿದೆ.ದೇವಾಲಯದ ಕಾರ್ಯದಲ್ಲಿ ತೊಡಗಿ ಕೊಂಡಿರುವ ಎಲ್ಲರಿಗೂ ಗಣಪತಿ ದೇವರು ಒಳಿತನ್ನು ಮಾಡಲಿ ಎಂದು ಶುಭಹಾರೈಸಿದರು.
ಹೆಮ್ಮುಂಜೆ ಮನೆತನದವರಾದ ಸಂತೋಷ ಕುಮಾರ್ ಶೆಟ್ಟಿ ಮಾತನಾಡಿ,300 ವರ್ಷಗಳಷ್ಟು ಇತಿಹಾಸವನ್ನು ಹೊಂದಿರುವ ದೇವಾಲಯವೂ ಸಂಪೂರ್ಣವಾಗಿ ಅಜೀರ್ಣ ಅವಸ್ಥೆಯಲ್ಲಿ ಇದ್ದಿದೆ.ಪ್ರಶ್ನಾ ಚಿಂತನಾ ಕಾರ್ಯದ ಮೂಲಕ ದೇವಾಲಯವನ್ನು ಅಭಿವೃದ್ಧಿಗೊಳಿಸಲಾಗಿದೆ.ಇವೊಂದು ಸತ್ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲರಿಗೂ ಗನಪತಿ ದೇವರು ಅವರ ಇಷ್ಟಾರ್ಥವನ್ನು ಸಿದ್ಧಿಸುವಂತೆ ಕರುಣಿಸಲಿ ಎಂದು ಬೇಡಿಕೊಂಡರು.
ಈ ಸಂದರ್ಭದಲ್ಲಿ ದೇವಸ್ಥಾನದ ಜಿರ್ಣೋದ್ಧಾರ ಸಮಿತಿ ಅಧ್ಯಕ್ಷರು,ಸದಸ್ಯರು,ಸಿಬ್ಬಂದಿ ವರ್ಗ,ಹೆಮ್ಮಂಜೆ ಮನೆಯವರು,ಗ್ರಾಮಸ್ಥರು,ಅರ್ಚಕರು ಉಪಸ್ಥಿತರಿದ್ದರು.

ವರದಿ:ಜಗದೀಶ ದೇವಾಡಿಗ
ನಮ್ಮ ಜಾಲತಾಣದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ- 9916284048

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago