ಕುಂದಾಪುರ

ನನಗೊಂದು ಅವಕಾಶ ನೀಡಿ-ಗೀತಾ ಶಿವರಾಜ್ ಕುಮಾರ್

Share

ಕುಂದಾಪುರ:ಸೇವಾ ಮನೋಭಾವದಿಂದ ಕೆಲಸ ಮಾಡುವ ಗೀತಾ ಶಿವರಾಜ್ ಕುಮಾರ್ ಅವರನ್ನು ಬೈಂದೂರು ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು.ಗೀತಕ್ಕ ಆ ವಿಶ್ವಾಸವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಗುರುವಾರ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ವಂಡ್ಸೆ ಮತ್ತು ಬ್ಲಾಕ್ ಕಾಂಗ್ರೆಸ್ ಬೈಂದೂರು ಇದರ ಕಾರ್ಯಕರ್ತರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಕಾರ್ಯಕರ್ತರಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು.
ಮಾ.28 ರಿಂದ ಶಿವಣ್ಣ ಮತ್ತು ಗೀತಾ ಶಿವರಾಜ್ ಕುಮಾರ್ ಅವರು ಪ್ರತಿ ಪಂಚಾಯಿ ವ್ಯಾಪ್ತಿ ಪ್ರದೇಶಕ್ಕೆ ಭೇಟಿ ನೀಡಿ ಮತ ಯಾಚನೆ ಮಾಡಲಿದ್ದಾರೆ ಎಂದರು.
ಬಂದರು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಮತನಾಡಿ,ಕಟ್ಟಕಡೆಯ ಮೀನುಗಾರರ ಕಣ್ಣೀರನ್ನು ಒರೆಸುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿದೆ.ಬಿಜೆಪಿ ಪಕ್ಷದವರು ಲಾಭ ಇಲ್ಲದೆ ಯಾವುದೆ ರೀತಿ ಕೆಲಸವನ್ನು ಮಾಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.ಜನರ ಬಗ್ಗೆ ಕಾಳಜಿಯನ್ನು ಹೊಂದಿರುವ ಬಂಗಾರಪ್ಪನವರ ಪುತ್ರಿಯನ್ನು ಗೆಲ್ಲಿಸಲು ಎಲ್ಲರೂ ಪ್ರಯತ್ನಸಬೇಕು ಎಂದು ಹೇಳಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಮಾತನಾಡಿ,ನಿಮ್ಮೆಲ್ಲರ ಧ್ವನಿಯಾಗಿ ನಾನು ನಿಲ್ಲುತ್ತೇನೆ ಜನಸೇವಾ ಕೆಲಸಗಳನ್ನು ಮಾಡಲು ನನಗೆ ಒಂದು ಅವಕಾಶ ನೀಡಬೇಕೆಂದು ಕೇಳಿಕೊಂಡರು.
ಕನ್ನಡ ಚಲನಚಿತ್ರ ನಟ ಶಿವರಾಜ್ ಕುಮಾರ್,ಶಾಸಕ ಬೆಳೂರು ಗೋಪಾಲಕೃಷ್ಣ,ಕಿಮ್ಮಾನೆ ರತ್ನಕಾರ,ಅಭಯಚಂದ್ರ ಜೈನ್,ಎಂಎಲ್‍ಸಿ ಮಂಜುನಾಥ ಭಂಡಾರಿ, ಹರೀಶ್ ಕುಮಾರ್,ಜಿ.ಎ.ಭಾವ,ಎಂ.ಎ ಗಫೂರ್,ಶಿರಸಿ ಶಾಸಕ ಭೀಮಾ ನಾಯ್ಕ್,ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮತ್ತು ಬಿ.ಎಂ.ಸುಕುಮಾರ ಶೆಟ್ಟಿ,ರಾಜು.ಎಸ್ ಪೂಜಾರಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ವಂದಿಸಿದರು.
ಸುದ್ದಿಗಳನ್ನು ನಮ್ಮ ಜಾಲಾತಾಣದಲ್ಲಿ ಪ್ರಕಟಿಸಲು ಸಂಪರ್ಕಿಸಿ-9916284048

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago