ಕುಂದಾಪುರ

ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ ಶಾಲೆ ದತ್ತು ಸ್ವೀಕಾರ

Share

Advertisement
Advertisement
Advertisement

ಕುಂದಾಪುರ:ಆಧುನಿಕ ಶಿಕ್ಷಣದ ಜತೆಗೆ ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣ ದೊರೆತರೆ ಮಾತ್ರ ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಸಾದ್ಯವಿದೆ ಎಂದು ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದ ಪೀಠಂ ಶೃಂಗೇರಿ ವೇ.ಮೂ ಲೋಕೇಶ್ ಅಡಿಗ ನಾಗ ಪಾತ್ರಿಗಳು ಬಡಾಕೆರೆ ಹೇಳಿದರು.
ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ ಶಾಲೆಯಲ್ಲಿ ನಡೆದ ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಧುನಿಕ ಕಾಲಘಟ್ಟಕ್ಕೆ ಸರಿ ಹೊಂದುವಂತಹ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕಾದ ಅಗತ್ಯತೆ ಇದೆ.ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದರು.ಸರಕಾರಿ ಶಾಲೆಯನ್ನು ಸರ್ವತೊಮುಖವಾಗಿ ಅಭಿವೃದ್ಧಿಗೊಳಿಸಲು ಎಲ್ಲಾ ರೀತಿಯಲ್ಲಿಯೂ ಸಹಕಾರ ನೀಡಲಾಗುದು ಎಂದು ಹೇಳಿದರು.
ವೇ.ಮೂ ಲಕ್ಷ್ಮೀಶ ಅಡಿಗ ಅವರು ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಮಾತನಾಡಿ,ಊರಿನವರು ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕೆಂದು ಕೇಳಿಕೊಂಡರು.
ಬೈಂದೂರು ವಲಯದ ಬಿ.ಒ ನಾಗೇಶ ನಾಯ್ಕ್ ದಾನಿಗಳಿಗೆ ಕರಾರು ಪತ್ರವನ್ನು ಹಸ್ತಾಂತರಿಸಿ ಮಾತನಾಡಿ,ಬೈಂದೂರು ವಲಯದಲ್ಲಿ ಒಂದು ತಿಂಗಳ ಅವಧಿ ಒಳಗೆ ಮೂರು ಸರಕಾರಿ ಶಾಲೆಗಳನ್ನು ದಾನಿಗಳು ದತ್ತು ಸ್ವೀಕಾರ ಮಾಡಿದ್ದಾರೆ.ಇದೊಂದು ಐತಿಹಾಸಿಕ ಕ್ಷಣ,ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ದಿನಗಳಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಶ್ರೀಧರ ದೇವಾಡಿಗ ಮತ್ತು ಉಪಾಧ್ಯಕ್ಷೆ ಸರೋಜ ಶೆಟ್ಟಿ ಹಾಗೂ ಸದಸ್ಯರು,ಇಸಿಒ ಸತ್ಯನಾ ಕೊಡೇರಿ,ವೇ.ಮೂ ನಾಗೇಂದ್ರ ಅಡಿಗ,ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಗಿರೀಶ್ ಶೇಟ್,ಗ್ರಾಮಸ್ಥರು,ಶಿಕ್ಷಕವೃಂದವರು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯಿನಿ ರೋಹಿಣಿ ಸ್ವಾಗತಿಸಿದರು.ಸಹ ಶಿಕ್ಷಕಿ ರಶ್ಮಿ ವಂದಿಸಿದರು.5 ವರ್ಷಗಳ ಅವಧಿಗೆ ಬಡಾಕೆರೆ ಶಾಲೆಯನ್ನು ದತ್ತು ಸ್ವೀಕಾರ ಮಾಡಲಾಗಿದೆ.

Advertisement

ವರದಿ ಜಗದೀಶ ದೇವಾಡಿಗ
ನಮ್ಮ ಜಾಲತಾಣದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ- 9916284048

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago