ಕುಂದಾಪುರ:ಹೆಮ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟು ಎಂಬಲ್ಲಿ ತೋಡು ಹೂಳೆತ್ತದೆ ಹಾಗೂ ನಾದುರಸ್ತಿಯಲ್ಲಿರುವ ಮೋರಿಯನ್ನು ದುರಸ್ತಿ ಗೊಳಿಸದೇ ಅವೈಜ್ಞಾನಿಕವಾಗಿ ರಿವಿಟ್ ಮೆಂಟ್ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಬುಧವಾರ ಸಿಪಿಎಂ ಪಕ್ಷದ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯಿತಿಯ ಕ್ರಮವನ್ನು ಖಂಡಿಸಿ ಎಲ್ಲರಿಗೂ ಉಪ ಯೋಗ ವಾಗುವ ರೀತಿಯಲ್ಲಿ ಕಾಮ ಗಾರಿ ನಡೆಸಿ ಎಂದು ಆಗ್ರಹಿಸಿದರು.ಅಸಮರ್ಪಕ ಕಾಮಗಾರಿ ಯಿಂದ ನೀರು ಸರಾಗವಾಗಿ ಹರಿದು ಹೋಗಲು ತಡೆಯಾಗಿ ಬೇಸಾಯದ ಬೆಳೆ ನಾಶವಾಗುತ್ತದೆ.ಈ ಕುರಿತು ಕಾಮಗಾರಿ ನಡೆಸದಂತೆ ಆಕ್ಷೇಪ ಪತ್ರ ನೀಡಿದ್ದರು ಪಂಚಾಯಿತಿ ಕಡೆಗಣಿಸಿದೆ.ಅವೈಜ್ಞಾನಿಕ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದರು.ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ, ಉಪಾಧ್ಯಕ್ಷರು,ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಆಗಮಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. సిపిఎం ಬೈಂದೂರು ವಲಯ ಸಮಿತಿ ಸದಸ್ಯ ಸಂತೋಷ್ ಹೆಮ್ಮಾಡಿ, ನರಸಿಂಹ ದೇವಾಡಿಗ, ವಾಸುದೇವ, ಲಿಂಗಿ, ಸವಿತಾ, ಯಶೋದಾ, ಸೂರು, ಜಗದೀಶ್ ಆಚಾರ್, ಸಿಐಟಿಯು ಜಿಲ್ಲಾ ಮುಖಂಡ ಸುರೇಶ್ ಕಲ್ಲಾಗರ, ರೈತ ಸಂಘದ ಮುಖಂಡ ಚಂದ್ರಶೇಖರ ವಿ. ಮತ್ತಿತರರು ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…