ಕುಂದಾಪುರ:ಗಂಗೊಳ್ಳಿಯಿಂದ 15 ನಾಟಿಕಲ್ ಮೈಲು ದೂರದಲ್ಲಿ ಆಳಸಮುದ್ರ ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಬೋಟ್ನೊಳಗೆ ನೀರು ನುಗ್ಗಿದ ಪರಿಣಾಮ ಅಪಾಯಕ್ಕೆ ಸಿಲುಕಿದ ಏಳು ಮೀನುಗಾರರನ್ನು ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಕೋಸ್ಟ್ ಗಾರ್ಡ್ ಕಂಟ್ರೋಲ್ ತಂಡದವರು ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ.
ಉತ್ತರ ಕನ್ನಡ ಮೂಲದ ಕಿರಣ ನಾರಾಯಣ ಹರಿಕಂತ್ರ,ದೇವರಾಜು ಈಶ್ವರ ಹರಿಕಂತ್ರ,ಅರವಿಂದ ಗಣಪತಿ ಹರಿಕಂತ್ರ,ನಾಗೇಶ ಗಣಪಯ್ಯ ಹರಿಕಂತ್ರ,ದಿಲ್ಸಿಂಗ್ ಕಾಲು,ಚಂದ್ರ ಶೇಖರ ದುರ್ಗಾ ಮೊಗೇರ,ಸೋಮೇಶ್ವರ ಹರಿಕತಂತ್ರ ರಕ್ಷಿಸಲ್ಪಟ್ಟವರು.
ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಬೋಟ್ನ ಇಂಜಿನ್ ಕೊಠಡಿ ವಿಭಾಗದಲ್ಲಿ ರಂಧ್ರ ಉಂಟಾಗಿದ್ದರಿಂದ ಭಾರಿ ಪ್ರಮಾಣದಲ್ಲಿ ನೀರು ಒಳ ನುಗ್ಗಿದೆ.ನೀರು ಒಳ ನುಗ್ಗಿದ್ದ ಪರಿಣಾಮ ಬೋಟ್ ಮುಳುಗುವ ಹಂತಕ್ಕೆ ತಲುಪಿದೆ.ಅಪಾಯದ ಗಂಭೀರತೆಯನ್ನು ಅರಿತ ಮೀನುಗಾರರು ತಕ್ಷಣ ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೆÇಲೀಸ್ ಠಾಣೆಗೆ ದೂರವಾಣಿ ಮೂಲಕ ಕರೆ ಮಾಡಿದ್ದಾರೆ.ಅದೆ ಸಮಯದಲ್ಲಿ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಕೋಸ್ಟ್ ಗಾರ್ಡ್ ಕಂಟ್ರೋಲ್ ತಂಡದವರು ಸ್ಥಳಕ್ಕೆ ಧಾವಿಸಿ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಿಸಿ ಸುರಕ್ಷಿತವಾಗಿ ದಡವನ್ನು ತಲುಪಿಸಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…