ಕುಂದಾಪುರ:ತಾಲೂಕಿನ ಕನ್ನಡ ಕುದ್ರು ಹಾಗೂ ಮುವತ್ತು ಮುಡಿ ಭಾಗದಲ್ಲಿ ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗದಿಂದ ತೆಂಗಿನ ಗರಿಗಳು ಸುಳಿ ತನಕ ಕೆಂಪಾಗಿ ಕರಟಿ ಹೋಗಿದೆ.5 ರಿಂದ 6 ಸಾವಿರಕ್ಕೂ ಅಧಿಕ ತೆಂಗಿನ ಮರಗಳು ರೋಗ ಬಾಧೆಯಿಂದ ತತ್ತರಿಸಿದ್ದು ರೈತರು ಆತಂಕಿತರಾಗಿದ್ದಾರೆ.ತೆಂಗಿನ ಮರಕ್ಕೆ ಅಂಟಿಕೊಂಡಿದ್ದ ರೋಗ ಬಾಧೆಯನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳ ಬೇಕೆಂದು ರೈತರು ಆಗ್ರಹಿಸಿದ್ದಾರೆ.
ಹಸಿರಿನಿಂದ ಕಂಗೊಳಿಸುತ್ತಿದ್ದ ತೆಂಗಿನ ಮರದ ಗರಿಗಳು ಇದ್ದಕ್ಕಿದಂತೆ ಸುಳಿ ತನಕ ಕೆಂಪಾಗಿ ಕರಟಿ ಒಣಗಿ ಜೊತು ಬೀಳುತ್ತಿದೆ.ತೆಂಗಿನ ಮರದಲ್ಲಿ ಹಸಿರಿನ ಅಂಶವೆ ಮಾಯವಾಗಿದೆ.ಹೊಸ ಗರಿಗಳು ಬೀಡುತ್ತಿಲ್ಲ,ಕೊನೆಗಳು ಕಣ್ಮರೆಯಾಗಿದೆ.ತೆಂಗಿನ ಮರಕ್ಕೆ ತಗುಲಿದ ರೋಗ ಬಾಧೆಯಿಂದ ರೈತರು ಹತಾಶರಾಗಿದ್ದು ಏನು ಮಾಡದಂತಹ ಪರಿಸ್ಥಿತಿಯಲ್ಲಿ ಇದ್ದಾರೆ.ಸಂಕಷ್ಟದಲ್ಲಿದ್ದ ರೈತರಿಗೆ ಪರಿಹಾರ ನೀಡಬೇಕ್ಕೆನ್ನುವುದು ತೆಂಗು ಬೆಳೆಗಾರರ ಆಗ್ರಹ.
ರೋಗವು ಇಡಿ ತೋಟಕ್ಕೆ ಹಬ್ಬಿದ್ದರಿಂದ ಆರೋಗ್ಯವಂತ ತೆಂಗಿನ ಮರಗಳನ್ನು ನೋಡಲು ಅಸಾಧ್ಯವಾಗಿದೆ ಗುಂಪು ಗುಂಪಾಗಿ ತೆಂಗಿನ ಮರಗಳು ರೋಗಕ್ಕೆ ತುತ್ತಾಗುತ್ತಿವೆ.ತೆಂಗಿನ ಮರದಲ್ಲಿ ಫಸಲು ಮಾಯವಾಗಿದೆ.ತೆಂಗಿನ ಮರಕ್ಕೆ ರೋಗ ತಗುಲಿ 6 ತಿಂಗಗಳು ಕಳೆದಿದೆ.ರೈತರ ಗೊಳನ್ನು ಕೇಳುವವರು ಯಾರು ಇಲ್ಲದಂತಾಗಿದೆ.ಮಾಹಿತಿ ಕೊರತೆಯಿಂದ ರೈತರು ಕೈಕಟ್ಟಿ ಕುಳಿತ್ತಿದ್ದಾರೆ.ತೆಂಗಿನ ಮರಕ್ಕೆ ಹರಡಿದ ರೋಗವನ್ನು ನಿಯಂತ್ರಣಕ್ಕೆ ತರದೆ ಹೋದಲ್ಲಿ ಊರಿಂದ ಊರಿಗೆ ಪಸರಿಸುವ ಸಾಧ್ಯತೆ ಇದೆ ಎಂದು ರೈತರು ಹೇಳುತ್ತಾರೆ.
ಸುತ್ತಲೂ ಉಪ್ಪು ನೀರು ನೀರಿನಿಂದ ಆವೃತ್ತವಾಗಿರುವ ಕನ್ನಡ ಕುದ್ರು ಹಾಗೂ ಮುವತ್ತು ಮುಡಿ ಭಾಗದ ರೈತರಿಗೆ ತೆಂಗಿನ ಬೆಳೆ ಜೀವನಾಧಾರ.ಗದ್ದೆಗಳು ಉಪ್ಪು ನೀರು ನೀರಿನಲ್ಲಿ ಮುಳುಗಿ ಏಳುತ್ತಿದ್ದರಿಂದ ಭತ್ತದ ಕೃಷಿಯನ್ನು ಕೈ ಬಿಟ್ಟಿದ್ದ ಅಲ್ಲಿನ ಜನರು ತೆಂಗಿನ ಬೆಳೆಯನ್ನು ಪ್ರಮುಖ ಬೆಳೆಯನ್ನಾಗಿ ನೆಚ್ಚಿಕೊಂಡಿದ್ದಾರೆ.ಸರಿ ಸುಮಾರು ಒಬ್ಬ ರೈತ ಕಾಯಿ ಕೊಯ್ಲು ಸಮಯದಲ್ಲಿ 2 ರಿಂದ 1,500 ತನಕ ಕಾಯಿಯನ್ನು ಕೊಯ್ಲು ಮಾಡುತ್ತಿದ್ದರು.ತೆಂಗಿನ ಮರಗಳು ರೋಗಕ್ಕೆ ತುತ್ತಾಗಿದ್ದರಿಂದ 100 ಕಾಯಿ ಸಿಗುವುದು ಕಷ್ಟ ಎಂದು ರೈತರು ತಮ್ಮ ಅಳನ್ನು ತೊಡಿಕೊಂಡಿದ್ದಾರೆ.
ಕನ್ನಡ ಕುದ್ರು ಹಾಗೂ ಮುವತ್ತು ಮುಡಿ ಭಾಗದಲ್ಲಿ ಹೆಚ್ಚು ಕಮ್ಮಿ 5 ರಿಂದ 6 ಸಾವಿರಕ್ಕೂ ಅಧಿಕ ತೆಂಗಿನ ಮರಗಳು ರೋಗ ಬಾಧೆಗೆ ತುತ್ತಾಗಿವೆ.ತೆಂಗಿನ ಬೆಳೆ ನಮ್ಮಗೆ ಜೀವನಾಧಾರ.ಬೇಸಾಯ ಮಾಡಲು ಉಪ್ಪು ನೀರು ನೀರಿನ ಹಾವಳಿ.ತೆಂಗು ಬೆಳೆ ನಷ್ಟದಿಂದ ನಮ್ಮ ಜೀವನ ಕಷ್ಟಕ್ಕೆ ಸಿಲುಕಿದೆ.ತೆಂಗು ಬೆಳೆಗಾರ ರೈತರಿಗೆ ಪರಿಹಾರ ನೀಡಲು ಸರಕಾರ ಮತ್ತು ಇಲಾಖೆ ಕ್ರಮ ಕೈಗೊಳ್ಳಬೇಕು.ತೆಂಗಿನ ಮರಕ್ಕೆ ತಗುಲಿದ ರೋಗವನ್ನು ಹತೋಟಿಗೆ ತರಲು ಕೂಡಲೆ ಇಲಾಖೆ ಕ್ರಮ ವಹಿಸಬೇಕು.
-ಚಂದ್ರ ಪೂಜಾರಿ ಕನ್ನಡ ಕುದ್ರು,ಹೆಮ್ಮಾಡಿ,ತೆಂಗು ಬೆಳೆಗಾರರು
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…