ಕುಂದಾಪುರ

ಹರ್ಕೂರು ಶ್ರೀಮಹಾಗಣಪತಿ ದೇವಸ್ಥಾನ,ಬೆಳ್ಳಿ ಪ್ರಭಾವಳಿ ಮೆರಣಿಗೆ

Share

ಕುಂದಾಪುರ:ತಾಲೂಕಿನ ಹರ್ಕೂರು ಗ್ರಾಮದ ಶ್ರೀಮಹಾಗಣಪತಿ ದೇವಸ್ಥಾನದ ತಾಮ್ರದ ಹೊದಿಕೆಯ ನೂತನ ಶಿಲಾದೇಗುಲ ಸಮರ್ಪಣೆ,ಬ್ರಹ್ಮಕಲಶೋತ್ಸವ ಹಾಗೂ ಶ್ರೀದೇವರ ಪುನರ್ ಪ್ರತಿಷ್ಠೆ ಅಂಗವಾಗಿ ಶ್ರೀಗಣಪತಿ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿ ಕಿರೀಟ ಮತ್ತು ಬೆಳ್ಳಿ ಪ್ರಭಾವಳಿಯನ್ನು ಚಂಡೆವಾದನ,ಪೂರ್ಣಕುಂಭ ಸ್ವಾಗತದೊಂದಿಗೆ ಭವ್ಯ ಮೆರವಣಿಗೆ ಮೂಲಕ ಸೋಮವಾರ ಬರಮಾಡಿಕೊಳ್ಳಲಾಯಿತು.
ಹರ್ಕೂರು ಶ್ರೀಚಾಮುಂಡೇಶ್ವರಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಹರ್ಕೂರು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬೆಳ್ಳಿ ಪ್ರಭಾವಳಿಗೆ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಸರ್ವ ಸದಸ್ಯರು,ಗ್ರಾಮಸ್ಥರು ಹಾಗೂ ಅರ್ಚಕರು ಉಪಸ್ಥಿತರಿದ್ದರು.
ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಉದ್ಯಮಿಗಳು ಘಟಪ್ರಭಾ ಎಚ್.ಜಯಶೀಲ ಎನ್ ಶೆಟ್ಟಿ ಅವರು ಮಾತನಾಡಿ,ಹರ್ಕೂರು ಶ್ರೀಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಮತ್ತು ನೂತನ ಶಿಲಾದೇಗುಲದ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಗಣಪತಿ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿ ಪ್ರಭಾವಳಿ ಮತ್ತು ಮುಖವಾಡವನ್ನು ಭವ್ಯ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಗಿದೆ ಎಂದರು.ಸತತ ಮೂರು ದಿನಗಳ ನಡೆಯುವ ದೇವತಾ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಕೇಳಿಕೊಂಡರು.
ದೇವಸ್ಥಾನದ ಗೌರವ ಸಲಹೆಗಾರರಾದ ಕೃಷ್ಣಪ್ರಸಾದ ಅಡ್ಯಂತಾಯ ಅವರು ಮಾತನಾಡಿ,ಬಹಳ ಪುರಾತನವಾದ ಅಜೀರ್ಣಾವಸ್ಥೆಯಲ್ಲಿದ್ದ ದೇವಾಲಯವನ್ನು ಹರ್ಕೂರು ಮನೆಯವರು ಹಾಗೂ ಗ್ರಾಮಸ್ಥರೆಲ್ಲ ಕೂಡಿಕೊಂಡು ಭವ್ಯವಾದ ಶಿಲಾದೇಗುಲ ತ್ರಾಮದ ಹೋದಿಕೆಯೊಂದಿಗೆ ನಿರ್ಮಿಸಲಾಗಿದೆ.ಇವೊಂದು ದೇವತಾ ಕೈಂಕರ್ಯದಲ್ಲಿ ತೊಡಗಿಕೊಂಡಿರುವ ಎಲ್ಲರೂ ಶ್ರೀಮಹಾಗಣಪತಿ ದೇವರು ಒಳಿತನ್ನು ಮಾಡಲಿ ಎಂದರು.ಇವೊಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಕೇಳಿಕೊಂಡರು.
ದೇವಸ್ಥಾನದ ಕಾರ್ಯಾಧ್ಯಕ್ಷರಾದ ಮಂಜಯ್ಯ ಶೆಟ್ಟಿ ಹರ್ಕೂರು ಅವರು ಮಾತನಾಡಿ,ಶ್ರೀಮಹಾಗಣಪತಿ ದೇವರ ಪ್ರತಿಷ್ಠಾಪನಾ ಕಾರ್ಯದ ಅಂಗವಾಗಿ ನಾನಾ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಪ್ರಥಮ ಪೂಜಿತ ಗಣಪತಿ ದೇವರ ಕೃಪೆಗೆ ಎಲ್ಲರೂ ಪಾತ್ರರಾಗಬೇಕೆಂದರು.
ದೇವಸ್ಥಾನದ ಗೌರವಾಧ್ಯಕ್ಷರಾದ ಚಿತ್ತರಂಜನ್ ಹೆಗ್ಡೆ ಮಾತನಾಡಿ,300ಕ್ಕೂ ಅಧಿಕ ವರ್ಷಗಳ ಇತಿಹಾಸವನ್ನು ಹೊಂದಿರುವ ಅಜೀರ್ಣಾವಸ್ಥೆಯಲ್ಲಿದ್ದ ಶ್ರೀಮಹಾಗಣಪತಿ ದೇವರ ದೇವಸ್ಥಾನವನ್ನು ಅತ್ಯಂತ ವ್ಯವಸ್ಥಿತವಾದ ರೀತಿಯಲ್ಲಿ ಕಟ್ಟಲಾಗಿದೆ.ಶ್ರೀದೇವರ ಪುನರ್ ಪ್ರತಿಷ್ಠೆ ಹಾಗೂ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಮಂಗಳವಾರದಿಂದ ಆರಂಭಗೊಂಡು ಗುರುವಾರದ ತನಕ ನಿರಂತರವಾಗಿ ನಡೆಯಲಿದೆ ಎಂದರು.ಇವೊಂದು ದೇವತಾ ಕಾರ್ಯದಲ್ಲಿ ಊರಪರವೂರ ಭಕ್ತರು ಭಾಗವಹಿಸಬೇಕೆಂದು ವಿನಂತಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಎಲ್ಲಾ ಪದಾಧಿಕಾರಿಗಳು,ಸದಸ್ಯರು,ಅರ್ಚಕರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಹರ್ಕೂರು ಶ್ರೀಮಹಾಗಣಪತಿ ದೇವರ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಮತ್ತು ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮಾಚ್.26 ರ ಮಂಗಳವಾರದಿಂದ ಮಾರ್ಚ್.28 ಗುರುವಾರದ ವರಗೆ ನಡೆಯಲಿದೆ.

ವರದಿ:- ಜಗದೀಶ
ನಮ್ಮ ಜಾಲತಾಣದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ- 9916280048

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago