ಮಾರ್ಚ್.27 ರಂದು ಹರ್ಕೂರು ಶ್ರೀಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ
ಕುಂದಾಪುರ:ತಾಲೂಕಿನ ಹರ್ಕೂರು ಶ್ರೀಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧಾವಾರ ಬೆಳಿಗ್ಗೆ 10.35ಕ್ಕೆ ನಡೆಯುವ ವೃಷಭ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ.ಶ್ರೀದೇವರ ಪುನರ್ ಪ್ರತಿಷ್ಠೆ ಅಂಗವಾಗಿ ಅಷ್ಟಬಂಧ ಪ್ರತಿಷ್ಠಾ ಮಹೋತ್ಸವ,ಜೀವ ಕುಂಭಾಭಿಷೇಕ,ಪ್ರತಿಷ್ಠಾ ಕಲಶಾಭಿಷೇಕ,ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ.
ಮಾರ್ಚ್.28 ರ ಗುರುವಾರದಂದು ಬಹ್ಮಕಲಶಾಭಿಷೇಕ,ಮಹಾಪೂಜೆ,ಮಹಾಮಂಗಳಾರತಿ,ತೀರ್ಥಪ್ರಸಾದ ವಿತರಣೆ,ಮಹಾ ಅನ್ನಸಂತರ್ಪಣೆ ನಡೆಯಲಿದೆ.ಪೂರ್ವಾಹ್ನ 11 ಘಂಟೆ ಧಾರ್ಮಿಕ ಸಭಾ ಕಾರ್ಯಕ್ರಮ ಸರಳವಾಗಿ ಜರುಗಲಿದೆ.