ಕುಂದಾಪುರ:ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಕೊಂಕಣಿ ಖಾರ್ವಿ ಸಮಾಜ ಬಾಂಧವರು ಸಂಭ್ರಮದಿಂದ ಮಂಗಳವಾರ ಆಚರಿಸಿದರು.ರಂಗು ರಂಗಿನ ಬಣ್ಣಗಳನ್ನು ಒಬ್ಬರಿಂದೊಬ್ಬರಿಗೆ ಎರಚುತ್ತಾ ನೃತ್ಯ ಹಾಡುಗಾರಿಕೆಯೊಂದಿಗೆ ತಮ್ಮ ವಿನೋದವನ್ನು ವ್ಯಕ್ತಪಡಿಸುತ್ತಾ ಬಣ್ಣದೋಕುಳಿಯಲ್ಲಿ ಜನರು ಮಿಂದೆದ್ದರು.ಗಂಗೊಳ್ಳಿ ಶ್ರೀ ವಿರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಸಂಪ್ರಾದಾಯಿಕ ಹೋಳಿ ಹಬ್ಬದ ಮೆರವಣಿಗೆ ಗಂಗೊಳ್ಳಿ ಶ್ರೀವೆಂಕರಮಣ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.ಮೆರವಣಿಗೆ ಆರಂಭಕ್ಕೂ ಮುನ್ನ ಗಂಗೊಳ್ಳಿ ಬಂದರು,ಮಲ್ಯರಬೆಟ್ಟು,ದಾಕುಹಿತ್ಲು,ಗುಡ್ಡೆಕೇರಿ,ಕಂಚುಗೋಡು,ಕಂಚುಗೋಡು ಖಾರ್ವಿ ಕೇರಿ ಒಟ್ಟು ಆರು ಪಂಗಡಗಳ ಹೋಳಿ ತಂಡವು ಶ್ರೀವಿರೇಶ್ವರ ದೇವಸ್ಥಾನದಲ್ಲಿ ಒಟ್ಟುಗೂಡುತ್ತದೆ.ಹೋಳಿ ಹುಣ್ಣಿಮೆ ರಾತ್ರಿಯಂದು ಪ್ರತಿಷ್ಠಾಪಿಸಿದ ಅಡಿಕೆ ಮರಕ್ಕೆ ಪೂಜೆ ಸಲ್ಲಿಸಿದ ಬಳಿಕ ಕೀಳಲಾಗುತ್ತದೆ.ನಂತರ ಹೋಳಿ ಮೆರವಣಿಗೆಗೆ ಅಧಿಕೃತವಾಗಿ ಚಾಲನೆಯನ್ನು ನೀಡಲಾಗುತ್ತದೆ.ಆರು ಪಂಗಡಗಳ ತಂಡವೂ ಒಟ್ಟಾಗಿ ಮೆರವಣಿಗೆ ಮೂಲಕ ಸಾಗುವುದು ವಾಡಿಕೆ ಆಗಿದೆ.ಶ್ರೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ತೀರ್ಥ ಸ್ನಾನ ಮಾಡುವುದರ ಮುಖೇನ ಹೋಳಿ ಹಬ್ಬಕ್ಕೆ ಅಧಿಕೃತವಾಗಿ ತೆರೆ ಬೀಳುತ್ತದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…