ಕುಂದಾಪುರ:ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಕೊಂಕಣಿ ಖಾರ್ವಿ ಸಮಾಜ ಬಾಂಧವರು ಸಂಭ್ರಮದಿಂದ ಮಂಗಳವಾರ ಆಚರಿಸಿದರು.ರಂಗು ರಂಗಿನ ಬಣ್ಣಗಳನ್ನು ಒಬ್ಬರಿಂದೊಬ್ಬರಿಗೆ ಎರಚುತ್ತಾ ನೃತ್ಯ ಹಾಡುಗಾರಿಕೆಯೊಂದಿಗೆ ತಮ್ಮ ವಿನೋದವನ್ನು ವ್ಯಕ್ತಪಡಿಸುತ್ತಾ ಬಣ್ಣದೋಕುಳಿಯಲ್ಲಿ ಜನರು ಮಿಂದೆದ್ದರು.ಗಂಗೊಳ್ಳಿ ಶ್ರೀ ವಿರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಸಂಪ್ರಾದಾಯಿಕ ಹೋಳಿ ಹಬ್ಬದ ಮೆರವಣಿಗೆ ಗಂಗೊಳ್ಳಿ ಶ್ರೀವೆಂಕರಮಣ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.ಮೆರವಣಿಗೆ ಆರಂಭಕ್ಕೂ ಮುನ್ನ ಗಂಗೊಳ್ಳಿ ಬಂದರು,ಮಲ್ಯರಬೆಟ್ಟು,ದಾಕುಹಿತ್ಲು,ಗುಡ್ಡೆಕೇರಿ,ಕಂಚುಗೋಡು,ಕಂಚುಗೋಡು ಖಾರ್ವಿ ಕೇರಿ ಒಟ್ಟು ಆರು ಪಂಗಡಗಳ ಹೋಳಿ ತಂಡವು ಶ್ರೀವಿರೇಶ್ವರ ದೇವಸ್ಥಾನದಲ್ಲಿ ಒಟ್ಟುಗೂಡುತ್ತದೆ.ಹೋಳಿ ಹುಣ್ಣಿಮೆ ರಾತ್ರಿಯಂದು ಪ್ರತಿಷ್ಠಾಪಿಸಿದ ಅಡಿಕೆ ಮರಕ್ಕೆ ಪೂಜೆ ಸಲ್ಲಿಸಿದ ಬಳಿಕ ಕೀಳಲಾಗುತ್ತದೆ.ನಂತರ ಹೋಳಿ ಮೆರವಣಿಗೆಗೆ ಅಧಿಕೃತವಾಗಿ ಚಾಲನೆಯನ್ನು ನೀಡಲಾಗುತ್ತದೆ.ಆರು ಪಂಗಡಗಳ ತಂಡವೂ ಒಟ್ಟಾಗಿ ಮೆರವಣಿಗೆ ಮೂಲಕ ಸಾಗುವುದು ವಾಡಿಕೆ ಆಗಿದೆ.ಶ್ರೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ತೀರ್ಥ ಸ್ನಾನ ಮಾಡುವುದರ ಮುಖೇನ ಹೋಳಿ ಹಬ್ಬಕ್ಕೆ ಅಧಿಕೃತವಾಗಿ ತೆರೆ ಬೀಳುತ್ತದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…