ಕುಂದಾಪುರ

ಗಂಗೊಳ್ಳಿಯಲ್ಲಿ ಸಂಭ್ರಮದಿಂದ ಹೋಳಿ ಹಬ್ಬ ಆಚರಣೆ

Share

Advertisement
Advertisement

ಕುಂದಾಪುರ:ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಕೊಂಕಣಿ ಖಾರ್ವಿ ಸಮಾಜ ಬಾಂಧವರು ಸಂಭ್ರಮದಿಂದ ಮಂಗಳವಾರ ಆಚರಿಸಿದರು.ರಂಗು ರಂಗಿನ ಬಣ್ಣಗಳನ್ನು ಒಬ್ಬರಿಂದೊಬ್ಬರಿಗೆ ಎರಚುತ್ತಾ ನೃತ್ಯ ಹಾಡುಗಾರಿಕೆಯೊಂದಿಗೆ ತಮ್ಮ ವಿನೋದವನ್ನು ವ್ಯಕ್ತಪಡಿಸುತ್ತಾ ಬಣ್ಣದೋಕುಳಿಯಲ್ಲಿ ಜನರು ಮಿಂದೆದ್ದರು.ಗಂಗೊಳ್ಳಿ ಶ್ರೀ ವಿರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಸಂಪ್ರಾದಾಯಿಕ ಹೋಳಿ ಹಬ್ಬದ ಮೆರವಣಿಗೆ ಗಂಗೊಳ್ಳಿ ಶ್ರೀವೆಂಕರಮಣ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.ಮೆರವಣಿಗೆ ಆರಂಭಕ್ಕೂ ಮುನ್ನ ಗಂಗೊಳ್ಳಿ ಬಂದರು,ಮಲ್ಯರಬೆಟ್ಟು,ದಾಕುಹಿತ್ಲು,ಗುಡ್ಡೆಕೇರಿ,ಕಂಚುಗೋಡು,ಕಂಚುಗೋಡು ಖಾರ್ವಿ ಕೇರಿ ಒಟ್ಟು ಆರು ಪಂಗಡಗಳ ಹೋಳಿ ತಂಡವು ಶ್ರೀವಿರೇಶ್ವರ ದೇವಸ್ಥಾನದಲ್ಲಿ ಒಟ್ಟುಗೂಡುತ್ತದೆ.ಹೋಳಿ ಹುಣ್ಣಿಮೆ ರಾತ್ರಿಯಂದು ಪ್ರತಿಷ್ಠಾಪಿಸಿದ ಅಡಿಕೆ ಮರಕ್ಕೆ ಪೂಜೆ ಸಲ್ಲಿಸಿದ ಬಳಿಕ ಕೀಳಲಾಗುತ್ತದೆ.ನಂತರ ಹೋಳಿ ಮೆರವಣಿಗೆಗೆ ಅಧಿಕೃತವಾಗಿ ಚಾಲನೆಯನ್ನು ನೀಡಲಾಗುತ್ತದೆ.ಆರು ಪಂಗಡಗಳ ತಂಡವೂ ಒಟ್ಟಾಗಿ ಮೆರವಣಿಗೆ ಮೂಲಕ ಸಾಗುವುದು ವಾಡಿಕೆ ಆಗಿದೆ.ಶ್ರೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ತೀರ್ಥ ಸ್ನಾನ ಮಾಡುವುದರ ಮುಖೇನ ಹೋಳಿ ಹಬ್ಬಕ್ಕೆ ಅಧಿಕೃತವಾಗಿ ತೆರೆ ಬೀಳುತ್ತದೆ.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

17 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

17 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago