ಕುಂದಾಪುರ:ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಕೊಂಕಣಿ ಖಾರ್ವಿ ಸಮಾಜ ಬಾಂಧವರು ಸಂಭ್ರಮದಿಂದ ಮಂಗಳವಾರ ಆಚರಿಸಿದರು.ರಂಗು ರಂಗಿನ ಬಣ್ಣಗಳನ್ನು ಒಬ್ಬರಿಂದೊಬ್ಬರಿಗೆ ಎರಚುತ್ತಾ ನೃತ್ಯ ಹಾಡುಗಾರಿಕೆಯೊಂದಿಗೆ ತಮ್ಮ ವಿನೋದವನ್ನು ವ್ಯಕ್ತಪಡಿಸುತ್ತಾ ಬಣ್ಣದೋಕುಳಿಯಲ್ಲಿ ಜನರು ಮಿಂದೆದ್ದರು.ಗಂಗೊಳ್ಳಿ ಶ್ರೀ ವಿರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಸಂಪ್ರಾದಾಯಿಕ ಹೋಳಿ ಹಬ್ಬದ ಮೆರವಣಿಗೆ ಗಂಗೊಳ್ಳಿ ಶ್ರೀವೆಂಕರಮಣ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.ಮೆರವಣಿಗೆ ಆರಂಭಕ್ಕೂ ಮುನ್ನ ಗಂಗೊಳ್ಳಿ ಬಂದರು,ಮಲ್ಯರಬೆಟ್ಟು,ದಾಕುಹಿತ್ಲು,ಗುಡ್ಡೆಕೇರಿ,ಕಂಚುಗೋಡು,ಕಂಚುಗೋಡು ಖಾರ್ವಿ ಕೇರಿ ಒಟ್ಟು ಆರು ಪಂಗಡಗಳ ಹೋಳಿ ತಂಡವು ಶ್ರೀವಿರೇಶ್ವರ ದೇವಸ್ಥಾನದಲ್ಲಿ ಒಟ್ಟುಗೂಡುತ್ತದೆ.ಹೋಳಿ ಹುಣ್ಣಿಮೆ ರಾತ್ರಿಯಂದು ಪ್ರತಿಷ್ಠಾಪಿಸಿದ ಅಡಿಕೆ ಮರಕ್ಕೆ ಪೂಜೆ ಸಲ್ಲಿಸಿದ ಬಳಿಕ ಕೀಳಲಾಗುತ್ತದೆ.ನಂತರ ಹೋಳಿ ಮೆರವಣಿಗೆಗೆ ಅಧಿಕೃತವಾಗಿ ಚಾಲನೆಯನ್ನು ನೀಡಲಾಗುತ್ತದೆ.ಆರು ಪಂಗಡಗಳ ತಂಡವೂ ಒಟ್ಟಾಗಿ ಮೆರವಣಿಗೆ ಮೂಲಕ ಸಾಗುವುದು ವಾಡಿಕೆ ಆಗಿದೆ.ಶ್ರೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ತೀರ್ಥ ಸ್ನಾನ ಮಾಡುವುದರ ಮುಖೇನ ಹೋಳಿ ಹಬ್ಬಕ್ಕೆ ಅಧಿಕೃತವಾಗಿ ತೆರೆ ಬೀಳುತ್ತದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…