ಕುಂದಾಪುರ:ತಾಲೂಕಿನ ಹೆಮ್ಮಾಡಿ ಗ್ರಾಮದ ಕನ್ನಡ ಕುದ್ರು ಹಾಗೂ ಮುವತ್ತುಮುಡಿ ಭಾಗದಲ್ಲಿ ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗ ಬಾಧೆಯನ್ನು ಅಧ್ಯಾಯನವನ್ನು ಮಾಡಲು ವಿಜ್ಞಾನಿಗಳ ತಂಡ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ತೆಂಗು ಬೆಳೆಗಾರ ರೈತರೊಂದಿಗೆ ಚರ್ಚಿಸಿದರು.
ಪ್ರೆÇ.ಡಾ.ರೇವಣ್ಣ ರೇವಣ್ಣನವರ್ (ಝೆಎಹೆಚ್ಆರ್ಎಸ್),ಸಾಹಾಯಕ ಪ್ರಾಧ್ಯಾಪಕ ಡಾ.ಮೋಹನ ಕುಮಾರ್ (ಝೆಎಹೆಚ್ಆರ್ಎಸ್),ಹಿರಿಯ ಎಡಿ ತೋಟಗಾರಿಕೆ ನಿಧೀಶ ಕೆ.ಜೆ ಹಾಗೂ ರೈತರಾದ ಚಂದ್ರ ಪೂಜಾರಿ ಕನ್ನಡ ಕುದ್ರು,ಜೈಸನ್ ಪಿಂಟೊ ಉಪಸ್ಥಿತರಿದ್ದರು.
ಮರಗಳಿಗೆ ತಗುಲಿದ ರೋಗವನ್ನು ಪತ್ತೆ ಹಚ್ಚಿದ ವಿಜ್ಞಾನಿಗಳ ತಂಡ ಕಪ್ಪು ತಲೆ ಗರಿತಿನ್ನುವ ಹುಳು ಬಾಧೆಯಿಂದ ತೆಂಗಿನ ಮರಗಳು ರೋಗ ಬಾಧೆಗೆ ತುತ್ತಾಗಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.ಮೂಲತಃ ದಕ್ಷಿಣ ಏಷ್ಯಾ ದೇಶಗಳಲ್ಲಿ ಕಂಡು ಬರುವ ಕಪ್ಪು ತಲೆ ಗರಿತಿನ್ನುವ ಹುಳು ಕೇರಳ ಮುಖಾಂತರ ದಕ್ಷಿಣ ಭಾರತಕ್ಕೆ ಪ್ರವೇಶ ಮಾಡಿದೆ.ಬೇಸಿಗೆಯಲ್ಲಿ ಹೆಚ್ಚಾಗಿ ತೆಂಗಿನ ಮರಗಳು ಹುಳು ಬಾಧೆಯಿಂದ ರೋಗಕ್ಕೆ ತುತ್ತಾಗುತ್ತವೆ.ಹೆಚ್ಚು ಬಿಸಿಲು,ಸೆಖೆ,ನೀರಿನ ಕೊರತೆ ಹಾಗೂ ಪೆÇಷಕಾಂಶದ ಕೊರತೆಯಿಂದ ಬಳಲುತ್ತಿರುವ ಮರಗಳು ಕಪ್ಪು ತಲೆಗರಿತಿನ್ನುವ ಹುಳ ಬಾಧೆಗೆ ಬಲಿಯಾಗುತ್ತವೆ ಎಂದು ಡಾ.ರೇವಣ್ಣ ರೇವಣ್ಣನವರ್ ಅವರು ರೈತರೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಬೆಳಕಿನ ಆಕರ್ಷಕ ಬಲೆ ಅಳವಡಿಕೆಗೆ ಕ್ರಮ:ತೆಂಗಿನ ಮರಕ್ಕೆ ತಗುಲಿದ ಹುಳ ಬಾಧೆಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಾಥಮಿಕ ಹಂತದಲ್ಲಿ ಬೆಳಕಿನ ಆಕರ್ಷಕ ಬಲೆ ಅಳವಡಿಕೆಯನ್ನು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…